<p><strong>ನವದೆಹಲಿ:</strong> ಬಾಕಿ ಉಳಿದಿರುವ ಸಿವಿಲ್ ವ್ಯಾಜ್ಯಗಳಲ್ಲಿ ಪೊಲೀಸರು ಮತ್ತು ಕ್ರಿಮಿನಲ್ ನ್ಯಾಯಾಲಯಗಳು ಆರೋಪ ನಿಗದಿಪಡಿಸುವಾಗ ಜಾಗರೂಕರಾಗಿರಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ತಿಳಿಸಿದೆ.</p>.<p>‘ಸಂಗ್ರಹಿಸಿದ ಸಾಕ್ಷ್ಯಗಳು ಶಿಕ್ಷೆಗೆ ಪೂರಕವಾಗಿವೆಯೇ ಎಂಬ ತನಿಖಾಧಿಕಾರಿಯ ನಿರ್ಣಯದ ಆಧಾರದ ಮೇಲೆ ದೋಷಾರೋಪ ಪಟ್ಟಿ ಸಲ್ಲಿಸುವ ನಿರ್ಧಾರ ಕೈಗೊಳ್ಳಬೇಕು’ ಎಂದು ನೋಂಗ್ನಿಕಾಪಂ ಕೋಟೀಶ್ವರ ಸಿಂಗ್ ಮತ್ತು ಮನಮೋಹನ್ ಅವರನ್ನೊಳಗೊಂಡ ಪೀಠ ತಿಳಿಸಿದೆ.</p>.<p>‘ನ್ಯಾಯಾಂಗ ವ್ಯವಸ್ಥೆಯ ದಕ್ಷತೆ ಮತ್ತು ಸಮಗ್ರತೆ ಕಾಪಾಡಿಕೊಳ್ಳುವುದಕ್ಕಾಗಿ, ಪೊಲೀಸರು ಆರೋಪಪಟ್ಟಿ ಸಲ್ಲಿಸುವಾಗ ಮತ್ತು ಕ್ರಿಮಿನಲ್ ನ್ಯಾಯಾಲಯಗಳು ಆರೋಪ ನಿಗದಿಪಡಿಸುವಾಗ ಬಲವಾದ ಶಂಕೆ ಇರುವ ಪ್ರಕರಣಗಳನ್ನು ಮಾತ್ರ ಔಪಚಾರಿಕ ವಿಚಾರಣೆಯ ಹಂತದವರೆಗೆ ಮುಂದುವರಿಸಬೇಕು’ ಎಂದು ಪೀಠ ಹೇಳಿದೆ.</p>.<p>ಬಲವಾದ ಶಂಕೆ ವ್ಯಕ್ತವಾಗದ ಪ್ರಕರಣಗಳಲ್ಲಿ ಆರೋಪಪಟ್ಟಿ ಸಲ್ಲಿಸುವುದರಿಂದ ನ್ಯಾಯಾಂಗ ವ್ಯವಸ್ಥೆಗೆ ಅಡ್ಡಿಯುಂಟಾಗುತ್ತದೆ. ಅಲ್ಲದೇ, ಖುಲಾಸೆ ಸಾಧ್ಯತೆಯಿರುವ ಪ್ರಕರಣಗಳಲ್ಲಿ ನ್ಯಾಯಾಲಯದ ಸಮಯ ವ್ಯರ್ಥವಾಗಿಸಲು ಕಾರಣವಾಗುತ್ತದೆ’ ಎಂದು ಪೀಠ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಬಾಕಿ ಉಳಿದಿರುವ ಸಿವಿಲ್ ವ್ಯಾಜ್ಯಗಳಲ್ಲಿ ಪೊಲೀಸರು ಮತ್ತು ಕ್ರಿಮಿನಲ್ ನ್ಯಾಯಾಲಯಗಳು ಆರೋಪ ನಿಗದಿಪಡಿಸುವಾಗ ಜಾಗರೂಕರಾಗಿರಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ತಿಳಿಸಿದೆ.</p>.<p>‘ಸಂಗ್ರಹಿಸಿದ ಸಾಕ್ಷ್ಯಗಳು ಶಿಕ್ಷೆಗೆ ಪೂರಕವಾಗಿವೆಯೇ ಎಂಬ ತನಿಖಾಧಿಕಾರಿಯ ನಿರ್ಣಯದ ಆಧಾರದ ಮೇಲೆ ದೋಷಾರೋಪ ಪಟ್ಟಿ ಸಲ್ಲಿಸುವ ನಿರ್ಧಾರ ಕೈಗೊಳ್ಳಬೇಕು’ ಎಂದು ನೋಂಗ್ನಿಕಾಪಂ ಕೋಟೀಶ್ವರ ಸಿಂಗ್ ಮತ್ತು ಮನಮೋಹನ್ ಅವರನ್ನೊಳಗೊಂಡ ಪೀಠ ತಿಳಿಸಿದೆ.</p>.<p>‘ನ್ಯಾಯಾಂಗ ವ್ಯವಸ್ಥೆಯ ದಕ್ಷತೆ ಮತ್ತು ಸಮಗ್ರತೆ ಕಾಪಾಡಿಕೊಳ್ಳುವುದಕ್ಕಾಗಿ, ಪೊಲೀಸರು ಆರೋಪಪಟ್ಟಿ ಸಲ್ಲಿಸುವಾಗ ಮತ್ತು ಕ್ರಿಮಿನಲ್ ನ್ಯಾಯಾಲಯಗಳು ಆರೋಪ ನಿಗದಿಪಡಿಸುವಾಗ ಬಲವಾದ ಶಂಕೆ ಇರುವ ಪ್ರಕರಣಗಳನ್ನು ಮಾತ್ರ ಔಪಚಾರಿಕ ವಿಚಾರಣೆಯ ಹಂತದವರೆಗೆ ಮುಂದುವರಿಸಬೇಕು’ ಎಂದು ಪೀಠ ಹೇಳಿದೆ.</p>.<p>ಬಲವಾದ ಶಂಕೆ ವ್ಯಕ್ತವಾಗದ ಪ್ರಕರಣಗಳಲ್ಲಿ ಆರೋಪಪಟ್ಟಿ ಸಲ್ಲಿಸುವುದರಿಂದ ನ್ಯಾಯಾಂಗ ವ್ಯವಸ್ಥೆಗೆ ಅಡ್ಡಿಯುಂಟಾಗುತ್ತದೆ. ಅಲ್ಲದೇ, ಖುಲಾಸೆ ಸಾಧ್ಯತೆಯಿರುವ ಪ್ರಕರಣಗಳಲ್ಲಿ ನ್ಯಾಯಾಲಯದ ಸಮಯ ವ್ಯರ್ಥವಾಗಿಸಲು ಕಾರಣವಾಗುತ್ತದೆ’ ಎಂದು ಪೀಠ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>