<p><strong>ಶ್ರೀನಗರ:</strong> ಜನರಿಗೆ ಅವರ ಹಕ್ಕುಗಳ ಕುರಿತು ತಿಳಿವಳಿಕೆಯಿರಬೇಕು. ಇಲ್ಲದಿದ್ದರೆ ಅದರಿಂದ ಯಾವುದೇ ಉಪಯೋಗವಿಲ್ಲ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರು ಅಭಿಪ್ರಾಯಪಟ್ಟರು. </p><p>ಶ್ರೀನಗರದಲ್ಲಿ ಭಾನುವಾರ ಜರುಗಿದ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಉತ್ತರ ವಲಯ ಪ್ರಾದೇಶಿಕ ಸಮ್ಮೇಳನದಲ್ಲಿ(ಎನ್ಎಎಲ್ಎಸ್ಎ) ಮಾತನಾಡಿದರು.</p><p>ಜನರಿಗೆ ಅವರ ಹಕ್ಕುಗಳ ಕುರಿತು ತಿಳಿಸಿಕೊಡುವ ಪ್ರಯತ್ನವನ್ನು ದೇಶದೆಲ್ಲೆಡೆ ಎನ್ಎಎಲ್ಎಸ್ಎ ಮಾಡುತ್ತಿದೆ. ಎಲ್ಲಾ ನ್ಯಾಯಮೂರ್ತಿಗಳು ಹಾಗೂ ವಕೀಲರು ಸೇರಿಕೊಂಡು, ದೇಶದ ಕೊನೆಯ ನಾಗರಿಕರಿಗೂ ಸಂವಿಧಾನದ ಮೂಲಕ ನ್ಯಾಯಕೊಡಿಸುವ ಪ್ರಯತ್ನವನ್ನು ಮಾಡಬೇಕಿದೆ ಎಂದು ಹೇಳಿದ್ದಾರೆ. </p><p>ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವ ಕೆಲಸವನ್ನು ನ್ಯಾಯಾಂಗ ಮಾಡಬೇಕು. ಅಂಬೇಡ್ಕರ್ ಅವರು ‘ಒಂದು ವ್ಯಕ್ತಿ, ಒಂದು ಮತ’ ಮೂಲಕ ರಾಜಕೀಯ ನ್ಯಾಯವನ್ನು ಕಲ್ಪಿಸಿಕೊಟ್ಟಿದ್ದಾರೆ ಎಂದು ಹೇಳಿದ್ದಾರೆ. </p><p>ಕಾಶ್ಮೀರದಲ್ಲಿ ಕಳೆದ 35 ವರ್ಷಗಳಿಂದ ಉದ್ವಿಗ್ನ ಪರಿಸ್ಥಿತಿಯಿದೆ. ಹಿಂದಿನ ತಪ್ಪುಗಳನ್ನು ಸರಿಪಡಿಸುವ ಅಗತ್ಯವಿದೆ. ನ್ಯಾಯಮೂರ್ತಿಗಳು ಹಾಗೂ ವಕೀಲರು ಸೇರಿಕೊಂಡು ಎಲ್ಲಾ ಸಮುದಾಯಗಳು ಸಾಮರಸ್ಯದಿಂದ ಬದುಕುತ್ತಿದ್ದ ಹಳೆಯ ಕಾಶ್ಮೀರವನ್ನು ಮರಳಿ ಸ್ಥಾಪಿಸಲು ಸಹಾಯ ಮಾಡಬೇಕಿದೆ ಎಂದಿದ್ದಾರೆ.</p><p>ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ಗೆ ಭೇಟಿ ನೀಡಿದನ್ನು ಸ್ಮರಿಸಿಕೊಂಡ ಬಿ.ಆರ್ ಗವಾಯಿ, ‘ಎರಡೂ ಕೇಂದ್ರಾಡಳಿತ ಪ್ರದೇಶಗಳ ಜನರು ಪ್ರೀತಿಯನ್ನು ನೀಡಿದ್ದಾರೆ. ಇದು ನನಗೆ ತವರೂರಿಗೆ ಭೇಟಿ ನೀಡಿದ ಅನುಭವ ಉಂಟುಮಾಡಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ಜನರಿಗೆ ಅವರ ಹಕ್ಕುಗಳ ಕುರಿತು ತಿಳಿವಳಿಕೆಯಿರಬೇಕು. ಇಲ್ಲದಿದ್ದರೆ ಅದರಿಂದ ಯಾವುದೇ ಉಪಯೋಗವಿಲ್ಲ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರು ಅಭಿಪ್ರಾಯಪಟ್ಟರು. </p><p>ಶ್ರೀನಗರದಲ್ಲಿ ಭಾನುವಾರ ಜರುಗಿದ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಉತ್ತರ ವಲಯ ಪ್ರಾದೇಶಿಕ ಸಮ್ಮೇಳನದಲ್ಲಿ(ಎನ್ಎಎಲ್ಎಸ್ಎ) ಮಾತನಾಡಿದರು.</p><p>ಜನರಿಗೆ ಅವರ ಹಕ್ಕುಗಳ ಕುರಿತು ತಿಳಿಸಿಕೊಡುವ ಪ್ರಯತ್ನವನ್ನು ದೇಶದೆಲ್ಲೆಡೆ ಎನ್ಎಎಲ್ಎಸ್ಎ ಮಾಡುತ್ತಿದೆ. ಎಲ್ಲಾ ನ್ಯಾಯಮೂರ್ತಿಗಳು ಹಾಗೂ ವಕೀಲರು ಸೇರಿಕೊಂಡು, ದೇಶದ ಕೊನೆಯ ನಾಗರಿಕರಿಗೂ ಸಂವಿಧಾನದ ಮೂಲಕ ನ್ಯಾಯಕೊಡಿಸುವ ಪ್ರಯತ್ನವನ್ನು ಮಾಡಬೇಕಿದೆ ಎಂದು ಹೇಳಿದ್ದಾರೆ. </p><p>ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವ ಕೆಲಸವನ್ನು ನ್ಯಾಯಾಂಗ ಮಾಡಬೇಕು. ಅಂಬೇಡ್ಕರ್ ಅವರು ‘ಒಂದು ವ್ಯಕ್ತಿ, ಒಂದು ಮತ’ ಮೂಲಕ ರಾಜಕೀಯ ನ್ಯಾಯವನ್ನು ಕಲ್ಪಿಸಿಕೊಟ್ಟಿದ್ದಾರೆ ಎಂದು ಹೇಳಿದ್ದಾರೆ. </p><p>ಕಾಶ್ಮೀರದಲ್ಲಿ ಕಳೆದ 35 ವರ್ಷಗಳಿಂದ ಉದ್ವಿಗ್ನ ಪರಿಸ್ಥಿತಿಯಿದೆ. ಹಿಂದಿನ ತಪ್ಪುಗಳನ್ನು ಸರಿಪಡಿಸುವ ಅಗತ್ಯವಿದೆ. ನ್ಯಾಯಮೂರ್ತಿಗಳು ಹಾಗೂ ವಕೀಲರು ಸೇರಿಕೊಂಡು ಎಲ್ಲಾ ಸಮುದಾಯಗಳು ಸಾಮರಸ್ಯದಿಂದ ಬದುಕುತ್ತಿದ್ದ ಹಳೆಯ ಕಾಶ್ಮೀರವನ್ನು ಮರಳಿ ಸ್ಥಾಪಿಸಲು ಸಹಾಯ ಮಾಡಬೇಕಿದೆ ಎಂದಿದ್ದಾರೆ.</p><p>ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ಗೆ ಭೇಟಿ ನೀಡಿದನ್ನು ಸ್ಮರಿಸಿಕೊಂಡ ಬಿ.ಆರ್ ಗವಾಯಿ, ‘ಎರಡೂ ಕೇಂದ್ರಾಡಳಿತ ಪ್ರದೇಶಗಳ ಜನರು ಪ್ರೀತಿಯನ್ನು ನೀಡಿದ್ದಾರೆ. ಇದು ನನಗೆ ತವರೂರಿಗೆ ಭೇಟಿ ನೀಡಿದ ಅನುಭವ ಉಂಟುಮಾಡಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>