ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

RSS ಮೆರವಣಿಗೆಗೆ ಅವಕಾಶ: ಮದ್ರಾಸ್ ಹೈಕೋರ್ಟ್ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

Last Updated 11 ಏಪ್ರಿಲ್ 2023, 7:17 IST
ಅಕ್ಷರ ಗಾತ್ರ

ನವದೆಹಲಿ: ತಮಿಳುನಾಡಿನಲ್ಲಿ ಮೆರವಣಿಗೆ ನಡೆಸಲು ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ (ಆರ್‌ಎಸ್‌ಎಸ್‌ಗೆ) ಅನುಮತಿ ನೀಡಿದ್ದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್‌ ಎತ್ತಿ ಹಿಡಿದಿದೆ.

ಮದ್ರಾಸ್ ಹೈಕೋರ್ಟ್ ಆದೇಶ ಪ್ರಶ್ನಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ವಿ. ರಾಮಸುಬ್ರಮಣಿಯನ್‌ ಮತ್ತು ಪಂಕಜ್‌ ಮಿತ್ತಲ್‌ ಅವರಿದ್ದ ಪೀಠ ವಜಾ ಮಾಡಿದೆ.

ಆರ್‌ಎಸ್ಎಸ್‌ ಪ್ರಾತಿನಿಧ್ಯವನ್ನು ಪರಿಗಣಿಸಿ, ಕಾರ್ಯಕ್ರಮಗಳನ್ನು ಆಯೋಜಿಸಲು ಯಾವುದೇ ಷರತ್ತುಗಳಿಲ್ಲದೆ ಅವಕಾಶ ಕಲ್ಪಿಸುವಂತೆ 2022ರ ಸೆಪ್ಟೆಂಬರ್‌ 22ರಂದು ಪೊಲೀಸರಿಗೆ ನೀಡಿದ್ದ ನಿರ್ದೇಶನವನ್ನು ಮದ್ರಾಸ್‌ ಹೈಕೋರ್ಟ್‌ನ ವಿಭಾಗೀಯ ಪೀಠ ಫೆಬ್ರುವರಿ 10ರಂದು ಪುನರುಚ್ಛರಿಸಿತ್ತು.

ಆರ್‌ಎಸ್‌ಎಸ್‌ ಮೆರವಣಿಗೆ ಮತ್ತು ಸಾರ್ವಜನಿಕ ಸಭೆಗಳನ್ನು ಸಂಪೂರ್ಣವಾಗಿ ವಿರೋಧಿಸುವುದಿಲ್ಲ. ಆದರೆ, ಗುಪ್ತಚರ ಮಾಹಿತಿ ಪ್ರಕಾರ ಎಲ್ಲ ಬೀದಿಗಳಲ್ಲಿಯೂ ಮೆರವಣಿಗೆ ನಡೆಸಲು ಸಾಧ್ಯವಿಲ್ಲ ಎಂದು ತಮಿಳುನಾಡು ಸರ್ಕಾರ ಮಾರ್ಚ್‌ 3 ರಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT