<p><strong>ನವದೆಹಲಿ</strong>: ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ ಹಿರಿಯ ವಕೀಲ ರಾಕೇಶ್ ಕಿಶೋರ್ ಅವರಿಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಲು ಸುಪ್ರೀಂಕೋರ್ಟ್ ಒಲವು ವ್ಯಕ್ತಪಡಿಸಿಲ್ಲ. ಈ ವಿಚಾರದಲ್ಲಿ ಸಿಜೆಐ ಅವರೇ ಮುಂದುವರಿಸಲು ನಿರಾಕರಿಸಿದ್ದನ್ನು ಉಲ್ಲೇಖಿಸಿದೆ.</p>.<p class="title">‘ನ್ಯಾಯಾಲಯದಲ್ಲಿ ಘೋಷಣೆ ಹಾಕುವುದು ಮತ್ತು ಶೂ ಎಸೆಯುವುದು ಸ್ಪಷ್ಟವಾಗಿ ನ್ಯಾಯಾಂಗದ ನಿಂದನೆಯ ಪ್ರಕರಣಗಳಾಗಿವೆ. ಆದರೆ, ಕ್ರಮಕೈಗೊಳ್ಳುವುದು ನ್ಯಾಯಮೂರ್ತಿ ಅವರ ವಿವೇಚನೆಗೆ ಸಹ ಸಂಬಂಧಿಸಿದ್ದಾಗಿದೆ. ನ್ಯಾಯಮೂರ್ತಿ ಅವರು ಈ ವಿಚಾರದಲ್ಲಿ ಕಾನೂನಿನ ಅಡಿಯಲ್ಲಿ ಮುಂದುವರಿಯಬೇಕೆ ಅಥವಾ ಬೇಡವೇ ಎನ್ನುವ ಬಗ್ಗೆ ನಿರ್ಧಾರ ಕೈಗೊಳ್ಳುತ್ತಾರೆ’ ಎಂದು ನ್ಯಾಯಮೂರ್ತಿಗಳಾದ ಸೂರ್ಯಕಾಂತ ಮತ್ತು ಜಾಯ್ಮಾಲ್ಯ ಬಾಗ್ಚಿ ಅವರಿದ್ದ ಪೀಠವು ತಿಳಿಸಿದೆ.</p>.<p class="title">‘ಇಂತಹ ಘಟನೆಗಳು ನಡೆಯದಂತೆ ತಡೆಗಟ್ಟುವ ಕ್ರಮಗಳ ಕುರಿತು ಪರಿಶೀಲನೆ ನಡೆಸಲಾಗುವುದು’ ನ್ಯಾಯಪೀಠವು ತಿಳಿಸಿದೆ.</p>.<p class="title">ಅಕ್ಟೋಬರ್ 6ರಂದು ಶೂ ಎಸೆದ ವಕೀಲ ರಾಕೇಶ್ ಕಿಶೋರ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬೇಕು ಎಂದು ಕೋರಿ ಸುಪ್ರೀಂ ಕೋರ್ಟ್ನ ವಕೀಲ ಸಂಘ (ಎಸ್ಸಿಬಿಎ) ಅರ್ಜಿ ಸಲ್ಲಿಸಿತ್ತು.</p>.<p class="title">‘ಶೂ ಎಸೆದ ವಕೀಲರಿಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದರೆ, ಅವರಿಗೆ ಅನಗತ್ಯ ಪ್ರಾಮುಖ್ಯತೆ ನೀಡಿದಂತಾಗುತ್ತದೆ. ಪ್ರಕರಣದ ಅವಧಿಯೂ ಹೆಚ್ಚಾಗುತ್ತದೆ. ಅದರ ಪಾಡಿಗೆ ಸಹಜವಾಗಿ ಸಾಯಲು ಬಿಡಬೇಕು’ ಎಂದು ನ್ಯಾಯಪೀಠ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ ಹಿರಿಯ ವಕೀಲ ರಾಕೇಶ್ ಕಿಶೋರ್ ಅವರಿಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಲು ಸುಪ್ರೀಂಕೋರ್ಟ್ ಒಲವು ವ್ಯಕ್ತಪಡಿಸಿಲ್ಲ. ಈ ವಿಚಾರದಲ್ಲಿ ಸಿಜೆಐ ಅವರೇ ಮುಂದುವರಿಸಲು ನಿರಾಕರಿಸಿದ್ದನ್ನು ಉಲ್ಲೇಖಿಸಿದೆ.</p>.<p class="title">‘ನ್ಯಾಯಾಲಯದಲ್ಲಿ ಘೋಷಣೆ ಹಾಕುವುದು ಮತ್ತು ಶೂ ಎಸೆಯುವುದು ಸ್ಪಷ್ಟವಾಗಿ ನ್ಯಾಯಾಂಗದ ನಿಂದನೆಯ ಪ್ರಕರಣಗಳಾಗಿವೆ. ಆದರೆ, ಕ್ರಮಕೈಗೊಳ್ಳುವುದು ನ್ಯಾಯಮೂರ್ತಿ ಅವರ ವಿವೇಚನೆಗೆ ಸಹ ಸಂಬಂಧಿಸಿದ್ದಾಗಿದೆ. ನ್ಯಾಯಮೂರ್ತಿ ಅವರು ಈ ವಿಚಾರದಲ್ಲಿ ಕಾನೂನಿನ ಅಡಿಯಲ್ಲಿ ಮುಂದುವರಿಯಬೇಕೆ ಅಥವಾ ಬೇಡವೇ ಎನ್ನುವ ಬಗ್ಗೆ ನಿರ್ಧಾರ ಕೈಗೊಳ್ಳುತ್ತಾರೆ’ ಎಂದು ನ್ಯಾಯಮೂರ್ತಿಗಳಾದ ಸೂರ್ಯಕಾಂತ ಮತ್ತು ಜಾಯ್ಮಾಲ್ಯ ಬಾಗ್ಚಿ ಅವರಿದ್ದ ಪೀಠವು ತಿಳಿಸಿದೆ.</p>.<p class="title">‘ಇಂತಹ ಘಟನೆಗಳು ನಡೆಯದಂತೆ ತಡೆಗಟ್ಟುವ ಕ್ರಮಗಳ ಕುರಿತು ಪರಿಶೀಲನೆ ನಡೆಸಲಾಗುವುದು’ ನ್ಯಾಯಪೀಠವು ತಿಳಿಸಿದೆ.</p>.<p class="title">ಅಕ್ಟೋಬರ್ 6ರಂದು ಶೂ ಎಸೆದ ವಕೀಲ ರಾಕೇಶ್ ಕಿಶೋರ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬೇಕು ಎಂದು ಕೋರಿ ಸುಪ್ರೀಂ ಕೋರ್ಟ್ನ ವಕೀಲ ಸಂಘ (ಎಸ್ಸಿಬಿಎ) ಅರ್ಜಿ ಸಲ್ಲಿಸಿತ್ತು.</p>.<p class="title">‘ಶೂ ಎಸೆದ ವಕೀಲರಿಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದರೆ, ಅವರಿಗೆ ಅನಗತ್ಯ ಪ್ರಾಮುಖ್ಯತೆ ನೀಡಿದಂತಾಗುತ್ತದೆ. ಪ್ರಕರಣದ ಅವಧಿಯೂ ಹೆಚ್ಚಾಗುತ್ತದೆ. ಅದರ ಪಾಡಿಗೆ ಸಹಜವಾಗಿ ಸಾಯಲು ಬಿಡಬೇಕು’ ಎಂದು ನ್ಯಾಯಪೀಠ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>