<p><strong>ನವದೆಹಲಿ:</strong> 'ನೀಟ್–ಯುಜಿ' ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ(ಎನ್ಟಿಎ) ಇನ್ನೂ ಪಾಠ ಕಲಿಯದಿರುವುದು ದುರದೃಷ್ಟಕರ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. </p><p>ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ಟಿಎ) ಅನ್ನು ಬಲಿಷ್ಠ ಮತ್ತು ಸ್ವಾಯತ್ತ ವ್ಯವಸ್ಥೆಯೊಂದಿಗೆ ಪುನರ್ರಚಿಸಲು ಅಥವಾ ಬದಲಾಯಿಸಲು ನಿರ್ದೇಶಿಸುವಂತೆ ಅಖಿಲ ಭಾರತ ವೈದ್ಯಕೀಯ ಸಂಘಗಳ ಒಕ್ಕೂಟ (ಎಫ್ಎಐಎಂಎ) ಸುಪ್ರೀಂ ಕೋರ್ಟ್ ಅನ್ನು ಕೋರಿತ್ತು. </p><p>ಈ ಸಂಬಂಧ ವಿಚಾರಣೆ ಕೈಗೆತ್ತಿಕೊಂಡಿರುವ ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಅಲೋಕ್ ಆರಾಧೆ ನೇತೃತ್ವದ ಪೀಠವು, ಸಂಬಂಧಪಟ್ಟವರಿಗೆ ನೋಟಿಸ್ ಜಾರಿ ಮಾಡಿದ್ದು, ಕೇಂದ್ರ, ಎನ್ಟಿಎ ಮತ್ತು ಸಿಬಿಐನಿಂದ ಪ್ರತಿಕ್ರಿಯೆ ಕೇಳಿದೆ. </p><p>ಅಲ್ಲದೆ 2024ರಲ್ಲಿ ನ್ಯಾಯಾಲಯದ ನಿರ್ದೇಶನದ ಕುರಿತು ತೆಗೆದುಕೊಂಡ ಕ್ರಮಗಳ ಕುರಿತು ಗುರುವಾರದೊಳಗೆ ಅಫಿಡವಿಟ್ ಸಲ್ಲಿಸುವಂತೆ ಎನ್ಟಿಎಗೆ ಆದೇಶಿಸಿದೆ. </p><p>ಮೇ 3ರಂದು ನಡೆದಿದ್ದ ನೀಟ್-ಯುಜಿ ಪರೀಕ್ಷೆ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ರದ್ದುಗೊಳಿಸಲಾಗಿತ್ತು. ಇದರಿಂದಾಗಿ 22 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ತೊಂದರೆಗೊಳಗಾಗಿದ್ದಾರೆ. ಪ್ರಕರಣ ಸಂಬಂಧ ಸಿಬಿಐ ತನಿಖೆ ನಡೆಯುತ್ತಿದೆ. ಜೂನ್ 21ರಂದು ಮರು ಪರೀಕ್ಷೆ ನಿಗದಿಯಾಗಿದೆ. </p>.ಟ್ವಿಶಾ ಶರ್ಮಾ ಪ್ರಕರಣ ನಿಭಾಯಿಸಿದ ರೀತಿಯಿಂದ ನೋವಾಗಿದೆ: ಸುಪ್ರೀಂ ಕೋರ್ಟ್ ಬೇಸರ.ನೀಟ್ ರದ್ದುಪಡಿಸಿದ್ದರಿಂದ ಆತ್ಮಹತ್ಯೆ;ಸಂತ್ರಸ್ತ ಕುಟುಂಬಗಳಿಗೆ ಪರಿಹಾರಕ್ಕೆ ಆಗ್ರಹ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> 'ನೀಟ್–ಯುಜಿ' ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ(ಎನ್ಟಿಎ) ಇನ್ನೂ ಪಾಠ ಕಲಿಯದಿರುವುದು ದುರದೃಷ್ಟಕರ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. </p><p>ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ಟಿಎ) ಅನ್ನು ಬಲಿಷ್ಠ ಮತ್ತು ಸ್ವಾಯತ್ತ ವ್ಯವಸ್ಥೆಯೊಂದಿಗೆ ಪುನರ್ರಚಿಸಲು ಅಥವಾ ಬದಲಾಯಿಸಲು ನಿರ್ದೇಶಿಸುವಂತೆ ಅಖಿಲ ಭಾರತ ವೈದ್ಯಕೀಯ ಸಂಘಗಳ ಒಕ್ಕೂಟ (ಎಫ್ಎಐಎಂಎ) ಸುಪ್ರೀಂ ಕೋರ್ಟ್ ಅನ್ನು ಕೋರಿತ್ತು. </p><p>ಈ ಸಂಬಂಧ ವಿಚಾರಣೆ ಕೈಗೆತ್ತಿಕೊಂಡಿರುವ ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಅಲೋಕ್ ಆರಾಧೆ ನೇತೃತ್ವದ ಪೀಠವು, ಸಂಬಂಧಪಟ್ಟವರಿಗೆ ನೋಟಿಸ್ ಜಾರಿ ಮಾಡಿದ್ದು, ಕೇಂದ್ರ, ಎನ್ಟಿಎ ಮತ್ತು ಸಿಬಿಐನಿಂದ ಪ್ರತಿಕ್ರಿಯೆ ಕೇಳಿದೆ. </p><p>ಅಲ್ಲದೆ 2024ರಲ್ಲಿ ನ್ಯಾಯಾಲಯದ ನಿರ್ದೇಶನದ ಕುರಿತು ತೆಗೆದುಕೊಂಡ ಕ್ರಮಗಳ ಕುರಿತು ಗುರುವಾರದೊಳಗೆ ಅಫಿಡವಿಟ್ ಸಲ್ಲಿಸುವಂತೆ ಎನ್ಟಿಎಗೆ ಆದೇಶಿಸಿದೆ. </p><p>ಮೇ 3ರಂದು ನಡೆದಿದ್ದ ನೀಟ್-ಯುಜಿ ಪರೀಕ್ಷೆ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ರದ್ದುಗೊಳಿಸಲಾಗಿತ್ತು. ಇದರಿಂದಾಗಿ 22 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ತೊಂದರೆಗೊಳಗಾಗಿದ್ದಾರೆ. ಪ್ರಕರಣ ಸಂಬಂಧ ಸಿಬಿಐ ತನಿಖೆ ನಡೆಯುತ್ತಿದೆ. ಜೂನ್ 21ರಂದು ಮರು ಪರೀಕ್ಷೆ ನಿಗದಿಯಾಗಿದೆ. </p>.ಟ್ವಿಶಾ ಶರ್ಮಾ ಪ್ರಕರಣ ನಿಭಾಯಿಸಿದ ರೀತಿಯಿಂದ ನೋವಾಗಿದೆ: ಸುಪ್ರೀಂ ಕೋರ್ಟ್ ಬೇಸರ.ನೀಟ್ ರದ್ದುಪಡಿಸಿದ್ದರಿಂದ ಆತ್ಮಹತ್ಯೆ;ಸಂತ್ರಸ್ತ ಕುಟುಂಬಗಳಿಗೆ ಪರಿಹಾರಕ್ಕೆ ಆಗ್ರಹ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>