<p><strong>ನವದೆಹಲಿ</strong>: ವೈವಾಹಿಕ ವಿವಾದದ ಕಾರಣದಿಂದಾಗಿ, ಆರು ತಿಂಗಳ ವಯಸ್ಸಿನ ಅವಳಿ ಮಕ್ಕಳನ್ನು ತಾಯಿಯಿಂದ ಬೇರ್ಪಡಿಸಿದ್ದ ಪತಿಯನ್ನು ತರಾಟೆಗೆ ತೆಗೆದುಕೊಂಡಿರುವ ಸುಪ್ರೀಂ ಕೋರ್ಟ್, ‘ಇದು ಅತ್ಯಂತ ಕ್ರೂರವಾದ ನಡೆ’ ಎಂದು ಹೇಳಿದೆ.</p>.<p>ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ಎನ್.ವಿ. ಅಂಜಾರಿಯಾ ಅವರ ನೇತೃತ್ವದ ಪೀಠ, ‘ಮಕ್ಕಳ ಕಲ್ಯಾಣವೇ ಅತ್ಯಂತ ಮುಖ್ಯ. ಚಿಕ್ಕ ಮಕ್ಕಳನ್ನು ತಾಯಿಯ ಆರೈಕೆಯಿಂದ ವಂಚಿತರನ್ನಾಗಿ ಮಾಡಲು ಸಾಧ್ಯವಿಲ್ಲ’ ಎಂದು ಪೀಠ ಅಭಿಪ್ರಾಯಪಟ್ಟಿದೆ.</p>.<p>ಈಗ ಆ ಮಕ್ಕಳಿಗೆ ಒಂದೂವರೆ ವರ್ಷವಾಗಿದೆ. ದಂಪತಿಯು ತಮ್ಮ ಮಕ್ಕಳೊಂದಿಗೆ ನ್ಯಾಯಮೂರ್ತಿಗಳ ಎದುರು ಫೆಬ್ರುವರಿ 26ರಂದು ಹಾಜರಾಗುವಂತೆ ಪೀಠ ಸೂಚಿಸಿದೆ. </p>.<p>‘ತನ್ನ ಪತ್ನಿ ಲಖನೌದಲ್ಲಿ ದಾಖಲಿಸಿರುವ ಪ್ರಕರಣವನ್ನು ಪಂಜಾಬ್ಗೆ ವರ್ಗಾಯಿಸಬೇಕು’ ಎಂದು ಪತಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ವಿಚಾರಣೆ ಸಂದರ್ಭದಲ್ಲಿ ಪತಿಯ ಪರ ವಕೀಲರು, ‘ಅವಳಿ ಮಕ್ಕಳ ವಿಷಯದಲ್ಲಿ ನ್ಯಾಯಾಲಯವು ಯಥಾಸ್ಥಿತಿ ಕಾಯ್ದುಕೊಳ್ಳಬೇಕು. ಬದಲಾವಣೆ ಮಾಡಿದರೆ ಅದು ಮಕ್ಕಳ ಮೇಲೆ ಪರಿಣಾಮ ಬೀರಬಹುದು’ ಎಂದು ವಾದಿಸಿದರು.</p>.<p>‘ಆರು ತಿಂಗಳ ಮಕ್ಕಳಿಗೆ ತಾಯಿ ನೀಡುವ ಆರೈಕೆಯನ್ನು ಯಾವುದೇ ದಾದಿ ಅಥವಾ ಅಜ್ಜಿ ನೀಡಲು ಸಾಧ್ಯವಿಲ್ಲ’ ಎಂದು ಪೀಠ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ವೈವಾಹಿಕ ವಿವಾದದ ಕಾರಣದಿಂದಾಗಿ, ಆರು ತಿಂಗಳ ವಯಸ್ಸಿನ ಅವಳಿ ಮಕ್ಕಳನ್ನು ತಾಯಿಯಿಂದ ಬೇರ್ಪಡಿಸಿದ್ದ ಪತಿಯನ್ನು ತರಾಟೆಗೆ ತೆಗೆದುಕೊಂಡಿರುವ ಸುಪ್ರೀಂ ಕೋರ್ಟ್, ‘ಇದು ಅತ್ಯಂತ ಕ್ರೂರವಾದ ನಡೆ’ ಎಂದು ಹೇಳಿದೆ.</p>.<p>ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ಎನ್.ವಿ. ಅಂಜಾರಿಯಾ ಅವರ ನೇತೃತ್ವದ ಪೀಠ, ‘ಮಕ್ಕಳ ಕಲ್ಯಾಣವೇ ಅತ್ಯಂತ ಮುಖ್ಯ. ಚಿಕ್ಕ ಮಕ್ಕಳನ್ನು ತಾಯಿಯ ಆರೈಕೆಯಿಂದ ವಂಚಿತರನ್ನಾಗಿ ಮಾಡಲು ಸಾಧ್ಯವಿಲ್ಲ’ ಎಂದು ಪೀಠ ಅಭಿಪ್ರಾಯಪಟ್ಟಿದೆ.</p>.<p>ಈಗ ಆ ಮಕ್ಕಳಿಗೆ ಒಂದೂವರೆ ವರ್ಷವಾಗಿದೆ. ದಂಪತಿಯು ತಮ್ಮ ಮಕ್ಕಳೊಂದಿಗೆ ನ್ಯಾಯಮೂರ್ತಿಗಳ ಎದುರು ಫೆಬ್ರುವರಿ 26ರಂದು ಹಾಜರಾಗುವಂತೆ ಪೀಠ ಸೂಚಿಸಿದೆ. </p>.<p>‘ತನ್ನ ಪತ್ನಿ ಲಖನೌದಲ್ಲಿ ದಾಖಲಿಸಿರುವ ಪ್ರಕರಣವನ್ನು ಪಂಜಾಬ್ಗೆ ವರ್ಗಾಯಿಸಬೇಕು’ ಎಂದು ಪತಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ವಿಚಾರಣೆ ಸಂದರ್ಭದಲ್ಲಿ ಪತಿಯ ಪರ ವಕೀಲರು, ‘ಅವಳಿ ಮಕ್ಕಳ ವಿಷಯದಲ್ಲಿ ನ್ಯಾಯಾಲಯವು ಯಥಾಸ್ಥಿತಿ ಕಾಯ್ದುಕೊಳ್ಳಬೇಕು. ಬದಲಾವಣೆ ಮಾಡಿದರೆ ಅದು ಮಕ್ಕಳ ಮೇಲೆ ಪರಿಣಾಮ ಬೀರಬಹುದು’ ಎಂದು ವಾದಿಸಿದರು.</p>.<p>‘ಆರು ತಿಂಗಳ ಮಕ್ಕಳಿಗೆ ತಾಯಿ ನೀಡುವ ಆರೈಕೆಯನ್ನು ಯಾವುದೇ ದಾದಿ ಅಥವಾ ಅಜ್ಜಿ ನೀಡಲು ಸಾಧ್ಯವಿಲ್ಲ’ ಎಂದು ಪೀಠ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>