<p><strong>ನವದೆಹಲಿ:</strong> ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ 10 ಮಂದಿ ಬಿಆರ್ಎಸ್ ಶಾಸಕರ ಅನರ್ಹತೆಗೆ ಸಂಬಂಧಿಸಿದಂತೆ ಮೂರು ತಿಂಗಳ ಒಳಗಾಗಿ ನಿರ್ಧಾರ ಕೈಗೊಳ್ಳುವಂತೆ ತೆಲಂಗಾಣ ವಿಧಾನಸಭೆ ಸ್ಪೀಕರ್ ಅವರಿಗೆ ಸುಪ್ರೀಂ ಕೋರ್ಟ್ ಗುರುವಾರ ಸೂಚಿಸಿದೆ.</p>.<p>ರಾಜಕೀಯ ಪಕ್ಷಾಂತರವನ್ನು ನಿಯಂತ್ರಿಸದಿದ್ದರೆ, ಅದು ಪ್ರಜಾಪ್ರಭುತ್ವಕ್ಕೆ ಧಕ್ಕೆ ತರುವ ಶಕ್ತಿ ಹೊಂದಲಿದೆ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿತು.</p>.<p>ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ನೇತೃತ್ವದ ನ್ಯಾಯಪೀಠವು, ‘ನಾವು ಯಾವುದೇ ನಿರ್ದೇಶನ ನೀಡದಿದ್ದರೆ, ಸ್ಪೀಕರ್ ಮತ್ತದೇ ರೀತಿ ಮಾಡಿ, ‘ಶಸ್ತ್ರಚಿಕಿತ್ಸೆ ಯಶಸ್ವಿ, ರೋಗಿ ಸಾವು’ ಎಂಬ ಸನ್ನಿವೇಶದಂತಾಗಲಿದೆ’ ಎಂದು ಹೇಳಿತು.</p>.<p>ಪಕ್ಷಾಂತರಕ್ಕೆ ಕಡಿವಾಣ ಹಾಕುವುದಕ್ಕಾಗಿ ಪಕ್ಷಾಂತರ ನಿಷೇಧ ಕಾಯ್ದೆ ರೂಪಿಸಲಾಗಿದೆ. ಈ ಕಾಯ್ದೆಯ ಆಧಾರದಲ್ಲಿ ಶಾಸಕರನ್ನು ಅನರ್ಹಗೊಳಿಸುವುದರಿಂದ ಕಾಯ್ದೆಯ ಉದ್ದೇಶ ಈಡೇರುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸುವ ಕೆಲಸವನ್ನು ಸ್ಪೀಕರ್ ಅಥವಾ ಸಭಾಪತಿ ಅವರಿಗೆ ವಹಿಸುವ ಬಗ್ಗೆ ಸಂಸತ್ತು ನಿರ್ಧರಿಸಬೇಕು. ಈ ವಿಷಯದಲ್ಲಿ ಸಲಹೆ ನೀಡುವುದು ನ್ಯಾಯಾಂಗದ ವ್ಯಾಪ್ತಿಗೆ ಒಳಪಡುವುದಿಲ್ಲ ಎಂದು ತಿಳಿಸಿತು.</p>.<p>ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತು ತತ್ವಗಳನ್ನು ರಕ್ಷಿಸುವುದು ಮೂಲಭೂತ ಕರ್ತವ್ಯ. ಈ ವಿಚಾರದಲ್ಲಿ ಪಕ್ಷಾಂತರ ನಿಷೇಧ ಕಾಯ್ದೆಯಡಿ ಶಾಸಕರನ್ನು ಅನರ್ಹಗೊಳಿಸುವ ವಿಧಾನ ಸೂಕ್ತವಾಗಿದೆಯೇ, ಇಲ್ಲವೇ ಎಂಬುದನ್ನು ಪರಿಶೀಲಿಸಬೇಕಿದೆ. ಇಷ್ಟಾಗಿಯೂ ಈ ಕುರಿತು ಸಂಸತ್ತು ಅಂತಿಮ ನಿರ್ಧಾರ ಕೈಗೊಳ್ಳಬೇಕು ಹೇಳಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ 10 ಮಂದಿ ಬಿಆರ್ಎಸ್ ಶಾಸಕರ ಅನರ್ಹತೆಗೆ ಸಂಬಂಧಿಸಿದಂತೆ ಮೂರು ತಿಂಗಳ ಒಳಗಾಗಿ ನಿರ್ಧಾರ ಕೈಗೊಳ್ಳುವಂತೆ ತೆಲಂಗಾಣ ವಿಧಾನಸಭೆ ಸ್ಪೀಕರ್ ಅವರಿಗೆ ಸುಪ್ರೀಂ ಕೋರ್ಟ್ ಗುರುವಾರ ಸೂಚಿಸಿದೆ.</p>.<p>ರಾಜಕೀಯ ಪಕ್ಷಾಂತರವನ್ನು ನಿಯಂತ್ರಿಸದಿದ್ದರೆ, ಅದು ಪ್ರಜಾಪ್ರಭುತ್ವಕ್ಕೆ ಧಕ್ಕೆ ತರುವ ಶಕ್ತಿ ಹೊಂದಲಿದೆ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿತು.</p>.<p>ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ನೇತೃತ್ವದ ನ್ಯಾಯಪೀಠವು, ‘ನಾವು ಯಾವುದೇ ನಿರ್ದೇಶನ ನೀಡದಿದ್ದರೆ, ಸ್ಪೀಕರ್ ಮತ್ತದೇ ರೀತಿ ಮಾಡಿ, ‘ಶಸ್ತ್ರಚಿಕಿತ್ಸೆ ಯಶಸ್ವಿ, ರೋಗಿ ಸಾವು’ ಎಂಬ ಸನ್ನಿವೇಶದಂತಾಗಲಿದೆ’ ಎಂದು ಹೇಳಿತು.</p>.<p>ಪಕ್ಷಾಂತರಕ್ಕೆ ಕಡಿವಾಣ ಹಾಕುವುದಕ್ಕಾಗಿ ಪಕ್ಷಾಂತರ ನಿಷೇಧ ಕಾಯ್ದೆ ರೂಪಿಸಲಾಗಿದೆ. ಈ ಕಾಯ್ದೆಯ ಆಧಾರದಲ್ಲಿ ಶಾಸಕರನ್ನು ಅನರ್ಹಗೊಳಿಸುವುದರಿಂದ ಕಾಯ್ದೆಯ ಉದ್ದೇಶ ಈಡೇರುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸುವ ಕೆಲಸವನ್ನು ಸ್ಪೀಕರ್ ಅಥವಾ ಸಭಾಪತಿ ಅವರಿಗೆ ವಹಿಸುವ ಬಗ್ಗೆ ಸಂಸತ್ತು ನಿರ್ಧರಿಸಬೇಕು. ಈ ವಿಷಯದಲ್ಲಿ ಸಲಹೆ ನೀಡುವುದು ನ್ಯಾಯಾಂಗದ ವ್ಯಾಪ್ತಿಗೆ ಒಳಪಡುವುದಿಲ್ಲ ಎಂದು ತಿಳಿಸಿತು.</p>.<p>ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತು ತತ್ವಗಳನ್ನು ರಕ್ಷಿಸುವುದು ಮೂಲಭೂತ ಕರ್ತವ್ಯ. ಈ ವಿಚಾರದಲ್ಲಿ ಪಕ್ಷಾಂತರ ನಿಷೇಧ ಕಾಯ್ದೆಯಡಿ ಶಾಸಕರನ್ನು ಅನರ್ಹಗೊಳಿಸುವ ವಿಧಾನ ಸೂಕ್ತವಾಗಿದೆಯೇ, ಇಲ್ಲವೇ ಎಂಬುದನ್ನು ಪರಿಶೀಲಿಸಬೇಕಿದೆ. ಇಷ್ಟಾಗಿಯೂ ಈ ಕುರಿತು ಸಂಸತ್ತು ಅಂತಿಮ ನಿರ್ಧಾರ ಕೈಗೊಳ್ಳಬೇಕು ಹೇಳಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>