<p><strong>ನವದೆಹಲಿ:</strong> ವಿದೇಶಗಳಲ್ಲಿರುವ ಎಲ್ಲಾ ಭಾರತೀಯರನ್ನು ಹಿಂದಕ್ಕೆ ಕರೆಸಿಕೊಳ್ಳಬೇಕೆಂದು ಸಲ್ಲಿಸಿದ್ದ ಮನವಿಗೆ ಸಂಬಂಧಿಸಿದ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಾಲ್ಕು ವಾರಗಳ ಕಾಲ ಮುಂದೂಡಿದೆ.</p>.<p>ಕೊರೊನಾ ಸೋಂಕು ತಗುಲಿ ವಿಶ್ವದ 183ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿರುವ ಪ್ರಜೆಗಳು ಅನಾರೋಗ್ಯ ಪೀಡಿತರಾಗಿದ್ದಾರೆ. ಈ ರಾಷ್ಟ್ರಗಳಲ್ಲಿ ಅನೇಕ ಭಾರತೀಯರು ಕೂಡ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ವಿದೇಶಗಳಲ್ಲಿರುವ ಭಾರತೀಯರನ್ನುಕರೆಸಿಕೊಳ್ಳುವ ಸಲುವಾಗಿ ಹಲವು ಮಂದಿ ಸುಪ್ರೀಂಕೋರ್ಟ್ಗೆ ಅರ್ಜಿಸಲ್ಲಿಸಿ ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು. ಇಲ್ಲವೇ ಈ ವಿಚಾರಕ್ಕೆ ಸಂಬಂಧಿಸಿದಂತೆ ಆದೇಶ ಹೊರಡಿಸಬೇಕು ಎಂದು ಅರ್ಜಿ ಸಲ್ಲಿಸಿದ್ದರು.</p>.<p>ಈ ವಿಷಯ ಕುರಿತ ಅರ್ಜಿ ವಿಚಾರಣೆಯನ್ನುಸುಪ್ರೀಂಕೋರ್ಟ್ ನಾಲ್ಕು ವಾರಗಳ ಕಾಲ ಮುಂದೂಡಿರುವುದೆ. ಇದರಿಂದಾಗಿಕೊರೊನಾ ಸೋಂಕಿತರ ಕುಟುಂಬಗಳಲ್ಲಿ ಆತಂಕ ಎದುರಾಗಿದೆ. ತಮ್ಮ ಸಂಬಂಧಿಕರನ್ನು ನೋಡಲು ಹೋಗಲಾರದೆ, ಪರಿತಪಿಸುವಂತಾಗಿದೆ.<br />ಅಂತರರಾಷ್ಟ್ರೀಯ ವಿಮಾನಗಳ ಹಾರಾಟ ರದ್ದಾಗಿರುವುದರಿಂದ ಯಾರೂ ಭಾರತಕ್ಕೆ ಬರುವುದಾಗಲೀ ಇಲ್ಲಿಂದ ಅವರನ್ನು ತಲುಪುವುದಾಗಲೀ ಸಾಧ್ಯವಾಗುತ್ತಿಲ್ಲ. ಇದರಿಂದ ವಿದೇಶಗಳಲ್ಲಿರುವವರು ಅಲ್ಲಿಯೇಅನಿವಾರ್ಯವಾಗಿ ಇರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ವಿದೇಶಗಳಲ್ಲಿರುವ ಸಂಬಂಧಿಕರಲ್ಲಿ ಸಹಜವಾಗಿಆತಂಕಕ್ಕೆ ಕಾರಣವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ವಿದೇಶಗಳಲ್ಲಿರುವ ಎಲ್ಲಾ ಭಾರತೀಯರನ್ನು ಹಿಂದಕ್ಕೆ ಕರೆಸಿಕೊಳ್ಳಬೇಕೆಂದು ಸಲ್ಲಿಸಿದ್ದ ಮನವಿಗೆ ಸಂಬಂಧಿಸಿದ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಾಲ್ಕು ವಾರಗಳ ಕಾಲ ಮುಂದೂಡಿದೆ.</p>.<p>ಕೊರೊನಾ ಸೋಂಕು ತಗುಲಿ ವಿಶ್ವದ 183ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿರುವ ಪ್ರಜೆಗಳು ಅನಾರೋಗ್ಯ ಪೀಡಿತರಾಗಿದ್ದಾರೆ. ಈ ರಾಷ್ಟ್ರಗಳಲ್ಲಿ ಅನೇಕ ಭಾರತೀಯರು ಕೂಡ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ವಿದೇಶಗಳಲ್ಲಿರುವ ಭಾರತೀಯರನ್ನುಕರೆಸಿಕೊಳ್ಳುವ ಸಲುವಾಗಿ ಹಲವು ಮಂದಿ ಸುಪ್ರೀಂಕೋರ್ಟ್ಗೆ ಅರ್ಜಿಸಲ್ಲಿಸಿ ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು. ಇಲ್ಲವೇ ಈ ವಿಚಾರಕ್ಕೆ ಸಂಬಂಧಿಸಿದಂತೆ ಆದೇಶ ಹೊರಡಿಸಬೇಕು ಎಂದು ಅರ್ಜಿ ಸಲ್ಲಿಸಿದ್ದರು.</p>.<p>ಈ ವಿಷಯ ಕುರಿತ ಅರ್ಜಿ ವಿಚಾರಣೆಯನ್ನುಸುಪ್ರೀಂಕೋರ್ಟ್ ನಾಲ್ಕು ವಾರಗಳ ಕಾಲ ಮುಂದೂಡಿರುವುದೆ. ಇದರಿಂದಾಗಿಕೊರೊನಾ ಸೋಂಕಿತರ ಕುಟುಂಬಗಳಲ್ಲಿ ಆತಂಕ ಎದುರಾಗಿದೆ. ತಮ್ಮ ಸಂಬಂಧಿಕರನ್ನು ನೋಡಲು ಹೋಗಲಾರದೆ, ಪರಿತಪಿಸುವಂತಾಗಿದೆ.<br />ಅಂತರರಾಷ್ಟ್ರೀಯ ವಿಮಾನಗಳ ಹಾರಾಟ ರದ್ದಾಗಿರುವುದರಿಂದ ಯಾರೂ ಭಾರತಕ್ಕೆ ಬರುವುದಾಗಲೀ ಇಲ್ಲಿಂದ ಅವರನ್ನು ತಲುಪುವುದಾಗಲೀ ಸಾಧ್ಯವಾಗುತ್ತಿಲ್ಲ. ಇದರಿಂದ ವಿದೇಶಗಳಲ್ಲಿರುವವರು ಅಲ್ಲಿಯೇಅನಿವಾರ್ಯವಾಗಿ ಇರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ವಿದೇಶಗಳಲ್ಲಿರುವ ಸಂಬಂಧಿಕರಲ್ಲಿ ಸಹಜವಾಗಿಆತಂಕಕ್ಕೆ ಕಾರಣವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>