<p><strong>ನವದೆಹಲಿ:</strong> ಭಯೋತ್ಪಾದನಾ ಚಟುವಟಿಕೆಯ ಜೊತೆ ನಂಟು ಹೊಂದಿರುವ ತ್ರಿವಳಿ ಕೊಲೆ ಪ್ರಕರಣದ ಅಪರಾಧಿ ಗುಲಾಂ ಮೊಹಮ್ಮದ್ ಭಟ್ನನ್ನು ಅವಧಿಪೂರ್ವ ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.</p>.<p>ಆದರೆ, ನ್ಯಾಯಮೂರ್ತಿಗಳಾದ ಅಹ್ಸಾನುದ್ದೀನ್ ಅಮಾನುಲ್ಲಾ ಹಾಗೂ ಎಸ್.ವಿ.ಎನ್. ಭಟ್ಟಿ ಅವರನ್ನೊಳಗೊಂಡ ಪೀಠವು, ಬಾಕಿ ಇರುವ ಮತ್ತೊಂದು ಪ್ರಕರಣದಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಲು ಅವಕಾಶ ಕೊಟ್ಟಿತು.</p>.<p>27 ವರ್ಷ ಶಿಕ್ಷೆ ಅನುಭವಿಸಿರುವುದರಿಂದ, ಬಿಡುಗಡೆ ಮಾಡುವಂತೆ ಕೋರಿ ಭಟ್ ಸಲ್ಲಿಸಿದ್ದ ಮನವಿಯನ್ನು ನ್ಯಾಯಪೀಠ ವಿಚಾರಣೆ ನಡೆಸಿತು.</p>.<p>ಹಿರಿಯ ವಕೀಲ ಗೋನ್ಸಾಲ್ವೆಸ್ ಅವರು ಭಟ್ ಪರ ವಾದ ಮಂಡಿಸಿದರೆ, ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ. ನಟರಾಜ್ ಕೇಂದ್ರಾಡಳಿತ ಪ್ರದೇಶವನ್ನು ಪ್ರತಿನಿಧಿಸಿದರು.</p>.<p>ಸೇನಾ ಮಾಹಿತಿದಾರರ ನಿವಾಸಕ್ಕೆ ನುಗ್ಗಿ ಎಕೆ–47 ರೈಫಲ್ನಿಂದ ಗುಂಡಿನ ದಾಳಿ ನಡೆಸಿದ್ದರಿಂದ ಮೂವರು ಮೃತಪಟ್ಟಿದ್ದರು. ಸ್ಫೋಟಕ ಸಾಧನಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಭಟ್ ವಿರುದ್ಧ ಪ್ರಾಸಿಕ್ಯೂಷನ್ ಆರೋಪಿಸಿದೆ.</p>.<p>ಸೇನೆಗೆ ಮಾಹಿತಿ ನೀಡುತ್ತಾರೆ ಎಂದು ಜನರನ್ನು ಕೊಲ್ಲುವುದು ಭಯೋತ್ಪಾದಕ ಕೃತ್ಯ. ಆದ್ದರಿಂದ ಅವಧಿಪೂರ್ವ ಬಿಡುಗಡೆ ಮಾಡಬಾರದು ಎಂಬ ನಟರಾಜ್ ವಾದವನ್ನು ಪುರಸ್ಕರಿಸಿದ ನ್ಯಾಯಪೀಠವು, ಬಿಡುಗಡೆಗೆ ನಿರಾಕರಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಭಯೋತ್ಪಾದನಾ ಚಟುವಟಿಕೆಯ ಜೊತೆ ನಂಟು ಹೊಂದಿರುವ ತ್ರಿವಳಿ ಕೊಲೆ ಪ್ರಕರಣದ ಅಪರಾಧಿ ಗುಲಾಂ ಮೊಹಮ್ಮದ್ ಭಟ್ನನ್ನು ಅವಧಿಪೂರ್ವ ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.</p>.<p>ಆದರೆ, ನ್ಯಾಯಮೂರ್ತಿಗಳಾದ ಅಹ್ಸಾನುದ್ದೀನ್ ಅಮಾನುಲ್ಲಾ ಹಾಗೂ ಎಸ್.ವಿ.ಎನ್. ಭಟ್ಟಿ ಅವರನ್ನೊಳಗೊಂಡ ಪೀಠವು, ಬಾಕಿ ಇರುವ ಮತ್ತೊಂದು ಪ್ರಕರಣದಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಲು ಅವಕಾಶ ಕೊಟ್ಟಿತು.</p>.<p>27 ವರ್ಷ ಶಿಕ್ಷೆ ಅನುಭವಿಸಿರುವುದರಿಂದ, ಬಿಡುಗಡೆ ಮಾಡುವಂತೆ ಕೋರಿ ಭಟ್ ಸಲ್ಲಿಸಿದ್ದ ಮನವಿಯನ್ನು ನ್ಯಾಯಪೀಠ ವಿಚಾರಣೆ ನಡೆಸಿತು.</p>.<p>ಹಿರಿಯ ವಕೀಲ ಗೋನ್ಸಾಲ್ವೆಸ್ ಅವರು ಭಟ್ ಪರ ವಾದ ಮಂಡಿಸಿದರೆ, ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ. ನಟರಾಜ್ ಕೇಂದ್ರಾಡಳಿತ ಪ್ರದೇಶವನ್ನು ಪ್ರತಿನಿಧಿಸಿದರು.</p>.<p>ಸೇನಾ ಮಾಹಿತಿದಾರರ ನಿವಾಸಕ್ಕೆ ನುಗ್ಗಿ ಎಕೆ–47 ರೈಫಲ್ನಿಂದ ಗುಂಡಿನ ದಾಳಿ ನಡೆಸಿದ್ದರಿಂದ ಮೂವರು ಮೃತಪಟ್ಟಿದ್ದರು. ಸ್ಫೋಟಕ ಸಾಧನಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಭಟ್ ವಿರುದ್ಧ ಪ್ರಾಸಿಕ್ಯೂಷನ್ ಆರೋಪಿಸಿದೆ.</p>.<p>ಸೇನೆಗೆ ಮಾಹಿತಿ ನೀಡುತ್ತಾರೆ ಎಂದು ಜನರನ್ನು ಕೊಲ್ಲುವುದು ಭಯೋತ್ಪಾದಕ ಕೃತ್ಯ. ಆದ್ದರಿಂದ ಅವಧಿಪೂರ್ವ ಬಿಡುಗಡೆ ಮಾಡಬಾರದು ಎಂಬ ನಟರಾಜ್ ವಾದವನ್ನು ಪುರಸ್ಕರಿಸಿದ ನ್ಯಾಯಪೀಠವು, ಬಿಡುಗಡೆಗೆ ನಿರಾಕರಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>