<p><strong>ನವದೆಹಲಿ:</strong> ಡಿಜಿಟಲ್ ಅರೆಸ್ಟ್ ಪ್ರಕರಣಗಳ ಸಂಬಂಧ ಸಕಾಲಿಕ ಕ್ರಮ ಕೈಗೊಳ್ಳುವಂತೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಮತ್ತು ಇತರ ಬ್ಯಾಂಕುಗಳಿಗೆ ಸುಪ್ರೀಂ ಕೋರ್ಟ್ ಸೋಮವಾರ ನಿರ್ದೇಶನ ನೀಡಿದೆ.</p>.<p>ಡಿಜಿಟಲ್ ವಂಚನೆಗಳಿಂದ ₹54,000 ಕೋಟಿಗೂ ಹೆಚ್ಚು ಹಣವನ್ನು ದೋಚಿರುವುದನ್ನು ಸಂಪೂರ್ಣ ದರೋಡೆ ಅಥವಾ ಡಕಾಯಿತಿ ಪ್ರಕರಣ ಎಂದು ಕರೆದ ಸುಪ್ರೀಂ ಕೋರ್ಟ್, ಬ್ಯಾಂಕ್ ಅಧಿಕಾರಿಗಳ ಸಂಭಾವ್ಯ ಪಿತೂರಿ ಅಥವಾ ನಿರ್ಲಕ್ಷ್ಯದಿಂದ ಇಂತಹ ಘಟನೆಗಳು ಸಂಭವಿಸಿವೆ ಎಂದು ಹೇಳಿದೆ. </p>.<p>ಅಂತಹ ಪ್ರಕರಣಗಳನ್ನು ಪರಿಹರಿಸಲು ಆರ್ಬಿಐ, ಬ್ಯಾಂಕುಗಳು ಮತ್ತು ದೂರಸಂಪರ್ಕ ಇಲಾಖೆಯಂತಹ ಪಾಲುದಾರರೊಂದಿಗೆ ಸಮಾಲೋಚಿಸಿ ಪ್ರಮಾಣಿತ ಕಾರ್ಯಾಚರಣಾ ವಿಧಾನಗಳನ್ನು ರೂಪಿಸುವಂತೆ ನ್ಯಾಯಾಲಯವು ಕೇಂದ್ರಕ್ಕೆ ನಿರ್ದೇಶಿಸಿದೆ.</p>.<p>ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ಎನ್.ವಿ ಅಂಜಾರಿಯಾ ಅವರನ್ನೊಳಗೊಂಡ ಪೀಠವು, ಡಿಜಿಟಲ್ ವಂಚನೆಯಿಂದ ವಂಚಿಸಲ್ಪಟ್ಟ ಮೊತ್ತವು ಅನೇಕ ಸಣ್ಣ ರಾಜ್ಯಗಳ ಬಜೆಟ್ಗಿಂತ ಹೆಚ್ಚಾಗಿದೆ ಎಂದು ಹೇಳಿದೆ.</p>.<p>ಡಿಜಿಟಲ್ ವಂಚನೆ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಅಂತರ-ಇಲಾಖೆಯ ಸಂಸ್ಥೆಗಳು ಭಾರತದಾದ್ಯಂತ ಆರ್ಬಿಐ ರೂಪಿಸಿದ ಎಸ್ಒಪಿಯನ್ನು ಔಪಚಾರಿಕವಾಗಿ ಅಳವಡಿಸಿಕೊಳ್ಳಲು ಮತ್ತು ಕಾರ್ಯಗತಗೊಳಿಸಲು ನಾವು ಕೇಂದ್ರಕ್ಕೆ ನಿರ್ದೇಶಿಸುತ್ತೇವೆ ಎಂದಿದೆ.</p>.<p>ಅಲ್ಲದೇ ಡಿಜಿಟಲ್ ಅರೆಸ್ಟ್ ಪ್ರಕರಣಗಳನ್ನು ಪತ್ತೆಹಚ್ಚಲು ಸಿಬಿಐಗೆ ನಿರ್ದೇಶನ ನೀಡಿದ ಪೀಠ, ಅಂತಹ (ಡಿಜಿಟಲ್ ಅರೆಸ್ಟ್) ಪ್ರಕರಣಗಳಲ್ಲಿ ತನಿಖೆ ಮುಂದುವರಿಸಲು ಫೆಡರಲ್ ತನಿಖಾ ಸಂಸ್ಥೆಗೆ ಅನುಮತಿ ನೀಡುವಂತೆ ಗುಜರಾತ್ ಮತ್ತು ದೆಹಲಿ ಸರ್ಕಾರಕ್ಕೆ ಸೂಚಿಸಿದೆ.</p>. <h2>ಉದಾರವಾದಿ ಧೋರಣೆ ಅಗತ್ಯ</h2><p>ಡಿಜಿಟಲ್ ಅರೆಸ್ಟ್ ಪ್ರಕರಣಗಳಲ್ಲಿ ಪರಿಹಾರಕ್ಕಾಗಿ ಚೌಕಟ್ಟನ್ನು ರೂಪಿಸಲು ಆರ್ಬಿಐ, ದೂರಸಂಪರ್ಕ ಇಲಾಖೆ ಮತ್ತು ಇತರರು ಜಂಟಿಯಾಗಿ ಸಭೆ ನಡೆಸುವಂತೆಯೂ ಕೋರ್ಟ್ ಹೇಳಿದೆ. ಜತೆಗೆ ಡಿಜಿಟಲ್ ಅರೆಸ್ಟ್ ಬಲಿಪಶುಗಳಿಗೆ ಪರಿಹಾರ ನೀಡಲು ಪ್ರಾಯೋಗಿಕ, ಉದಾರವಾದ ವಿಧಾನಗಳ ಅಗತ್ಯವಿದೆ ಎಂದೂ ಅಭಿಪ್ರಾಯಪಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಡಿಜಿಟಲ್ ಅರೆಸ್ಟ್ ಪ್ರಕರಣಗಳ ಸಂಬಂಧ ಸಕಾಲಿಕ ಕ್ರಮ ಕೈಗೊಳ್ಳುವಂತೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಮತ್ತು ಇತರ ಬ್ಯಾಂಕುಗಳಿಗೆ ಸುಪ್ರೀಂ ಕೋರ್ಟ್ ಸೋಮವಾರ ನಿರ್ದೇಶನ ನೀಡಿದೆ.</p>.<p>ಡಿಜಿಟಲ್ ವಂಚನೆಗಳಿಂದ ₹54,000 ಕೋಟಿಗೂ ಹೆಚ್ಚು ಹಣವನ್ನು ದೋಚಿರುವುದನ್ನು ಸಂಪೂರ್ಣ ದರೋಡೆ ಅಥವಾ ಡಕಾಯಿತಿ ಪ್ರಕರಣ ಎಂದು ಕರೆದ ಸುಪ್ರೀಂ ಕೋರ್ಟ್, ಬ್ಯಾಂಕ್ ಅಧಿಕಾರಿಗಳ ಸಂಭಾವ್ಯ ಪಿತೂರಿ ಅಥವಾ ನಿರ್ಲಕ್ಷ್ಯದಿಂದ ಇಂತಹ ಘಟನೆಗಳು ಸಂಭವಿಸಿವೆ ಎಂದು ಹೇಳಿದೆ. </p>.<p>ಅಂತಹ ಪ್ರಕರಣಗಳನ್ನು ಪರಿಹರಿಸಲು ಆರ್ಬಿಐ, ಬ್ಯಾಂಕುಗಳು ಮತ್ತು ದೂರಸಂಪರ್ಕ ಇಲಾಖೆಯಂತಹ ಪಾಲುದಾರರೊಂದಿಗೆ ಸಮಾಲೋಚಿಸಿ ಪ್ರಮಾಣಿತ ಕಾರ್ಯಾಚರಣಾ ವಿಧಾನಗಳನ್ನು ರೂಪಿಸುವಂತೆ ನ್ಯಾಯಾಲಯವು ಕೇಂದ್ರಕ್ಕೆ ನಿರ್ದೇಶಿಸಿದೆ.</p>.<p>ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ಎನ್.ವಿ ಅಂಜಾರಿಯಾ ಅವರನ್ನೊಳಗೊಂಡ ಪೀಠವು, ಡಿಜಿಟಲ್ ವಂಚನೆಯಿಂದ ವಂಚಿಸಲ್ಪಟ್ಟ ಮೊತ್ತವು ಅನೇಕ ಸಣ್ಣ ರಾಜ್ಯಗಳ ಬಜೆಟ್ಗಿಂತ ಹೆಚ್ಚಾಗಿದೆ ಎಂದು ಹೇಳಿದೆ.</p>.<p>ಡಿಜಿಟಲ್ ವಂಚನೆ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಅಂತರ-ಇಲಾಖೆಯ ಸಂಸ್ಥೆಗಳು ಭಾರತದಾದ್ಯಂತ ಆರ್ಬಿಐ ರೂಪಿಸಿದ ಎಸ್ಒಪಿಯನ್ನು ಔಪಚಾರಿಕವಾಗಿ ಅಳವಡಿಸಿಕೊಳ್ಳಲು ಮತ್ತು ಕಾರ್ಯಗತಗೊಳಿಸಲು ನಾವು ಕೇಂದ್ರಕ್ಕೆ ನಿರ್ದೇಶಿಸುತ್ತೇವೆ ಎಂದಿದೆ.</p>.<p>ಅಲ್ಲದೇ ಡಿಜಿಟಲ್ ಅರೆಸ್ಟ್ ಪ್ರಕರಣಗಳನ್ನು ಪತ್ತೆಹಚ್ಚಲು ಸಿಬಿಐಗೆ ನಿರ್ದೇಶನ ನೀಡಿದ ಪೀಠ, ಅಂತಹ (ಡಿಜಿಟಲ್ ಅರೆಸ್ಟ್) ಪ್ರಕರಣಗಳಲ್ಲಿ ತನಿಖೆ ಮುಂದುವರಿಸಲು ಫೆಡರಲ್ ತನಿಖಾ ಸಂಸ್ಥೆಗೆ ಅನುಮತಿ ನೀಡುವಂತೆ ಗುಜರಾತ್ ಮತ್ತು ದೆಹಲಿ ಸರ್ಕಾರಕ್ಕೆ ಸೂಚಿಸಿದೆ.</p>. <h2>ಉದಾರವಾದಿ ಧೋರಣೆ ಅಗತ್ಯ</h2><p>ಡಿಜಿಟಲ್ ಅರೆಸ್ಟ್ ಪ್ರಕರಣಗಳಲ್ಲಿ ಪರಿಹಾರಕ್ಕಾಗಿ ಚೌಕಟ್ಟನ್ನು ರೂಪಿಸಲು ಆರ್ಬಿಐ, ದೂರಸಂಪರ್ಕ ಇಲಾಖೆ ಮತ್ತು ಇತರರು ಜಂಟಿಯಾಗಿ ಸಭೆ ನಡೆಸುವಂತೆಯೂ ಕೋರ್ಟ್ ಹೇಳಿದೆ. ಜತೆಗೆ ಡಿಜಿಟಲ್ ಅರೆಸ್ಟ್ ಬಲಿಪಶುಗಳಿಗೆ ಪರಿಹಾರ ನೀಡಲು ಪ್ರಾಯೋಗಿಕ, ಉದಾರವಾದ ವಿಧಾನಗಳ ಅಗತ್ಯವಿದೆ ಎಂದೂ ಅಭಿಪ್ರಾಯಪಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>