ಕೇಂದ್ರ ಸರ್ಕಾರದ ನೋಟು ಅಮಾನ್ಯೀಕರಣದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ಕುರಿತಾದ ತೀರ್ಪು ಕಾಯ್ದಿರಿಸಿರುವ ನ್ಯಾಯಮೂರ್ತಿ ಎಸ್.ಎ. ನಜೀರ್ ನೇತೃತ್ವದ ಸುಪ್ರೀಂ ಕೋರ್ಟ್ನ ಐವರು ನ್ಯಾಯಾಧೀಶರ ಸಂವಿಧಾನ ಪೀಠ, ಹಿರಿಯ ವಕೀಲರಾದ ಪಿ. ಚಿದಂಬರಂ, ಶ್ಯಾಮ್ ದಿವಾನ್, ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಸೇರಿದಂತೆ ಸರ್ಕಾರ, ಆರ್ಬಿಐ, ಅರ್ಜಿದಾರರ ಪರ ವಕೀಲರ ವಾದಗಳನ್ನು ಆಲಿಸಿತು.