<p><strong>ನವದೆಹಲಿ:</strong> ಕಾಯ್ದಿರಿಸಿದ ತೀರ್ಪುಗಳನ್ನು ಮೂರು ತಿಂಗಳೊಳಗೆ ಪ್ರಕಟಿಸುವಂತೆ ಹೈಕೋರ್ಟ್ಗಳಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರ್ದೇಶಿಸಿದೆ.</p>.<p>ವಿಳಂಬವು ದಾವೆದಾರರಿಗೆ ಸರಿಪಡಿಸಲಾಗದ ನಷ್ಟವನ್ನು ಉಂಟು ಮಾಡುತ್ತದೆ ಎಂದಿರುವ ನ್ಯಾಯಾಲಯ, ವೈಯಕ್ತಿಕ ಸ್ವಾತಂತ್ರ್ಯದ ಪ್ರಕರಣಗಳಲ್ಲಿ ತ್ವರಿತ ನಿರ್ಧಾರಗಳನ್ನು ತೆಗೆದುಕೊಳ್ಳುವಂತೆಯೂ ಸೂಚಿಸಿದೆ. </p>.<p>ಹೈಕೋರ್ಟ್ ತೀರ್ಪನ್ನು ಅಪ್ಲೋಡ್ ಮಾಡುವಲ್ಲಿ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ನಡೆಸಿದ ಭಾರತದ ಮುಖ್ಯನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಅವರ ಪೀಠವು ಹೈಕೋರ್ಟ್ಗಳಿಗೆ ಹಲವು ನಿರ್ದೇಶನಗಳನ್ನು ನೀಡಿದೆ. </p>.<p><strong>‘ಸುಪ್ರೀಂ’ ನಿರ್ದೇಶನಗಳು</strong></p><p>* ಜಾಮೀನು ಅರ್ಜಿಗಳ ಕುರಿತ ಆದೇಶಗಳನ್ನು ಅದೇ ದಿನ ಪ್ರಕಟಿಸಬೇಕು. ಒಂದು ವೇಳೆ ಅವುಗಳನ್ನು ಕಾಯ್ದಿರಿಸಿದ್ದರೆ ಮರುದಿನ ಪ್ರಕಟಿಸಿ, ಅಪ್ಲೋಡ್ ಮಾಡಬೇಕು</p>.<p>* ಜಾಮೀನು ಅಥವಾ ಶಿಕ್ಷೆಯ ಅಮಾನತು ಆದೇಶ ಪ್ರಕಟವಾದ ತಕ್ಷಣ ಜೈಲು ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಮತ್ತು ವಿಚಾರಣಾದೀನ ಅಥವಾ ಶಿಕ್ಷೆಗೊಳಗಾದವರನ್ನು ಅದೇ ದಿನ ಅಥವಾ ಹೆಚ್ಚೆಂದರೆ ಮರುದಿನ ಬಿಡುಗಡೆ ಮಾಡಬೇಕು</p>.<p>* ಆದೇಶ ಕಾಯ್ದಿರಿಸಿದ ನಾಲ್ಕು ತಿಂಗಳೊಳಗೆ ತೀರ್ಪು ಪ್ರಕಟಸದಿದ್ದರೆ, ಕಕ್ಷಿದಾರರು ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯನ್ನು ಸಂರ್ಪಕಿಸಿ, ಪ್ರಕರಣವನ್ನು ಬೇರೆ ಪೀಠಕ್ಕೆ ವರ್ಗಾಯಿಸುವಂತೆ ಕೋರಬಹುದು</p>.<p>* ಮುಕ್ತ ನ್ಯಾಯಾಲಯದಲ್ಲಿ ತೀರ್ಪು ನೀಡಿದಾಗ, 24 ಗಂಟೆಗಳ ಒಳಗೆ ತೀರ್ಪನ್ನು ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಬೇಕು </p>.<p>ಸುಪ್ರೀಂ ಕೋರ್ಟ್ ನೀಡಿದ ಈ ನಿರ್ದೇಶನಗಳು ಯಾವುದೇ ನಿರ್ದಿಷ್ಟ ನ್ಯಾಯಮೂರ್ತಿ ಅಥವಾ ಹೈಕೋರ್ಟ್ ತೀರ್ಪಿನ ಕುರಿತ ಆಕ್ಷೇಪಣೆಗಳಲ್ಲ ಎಂಬುದು ಪೀಠ ಸ್ಪಷ್ಟಪಡಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕಾಯ್ದಿರಿಸಿದ ತೀರ್ಪುಗಳನ್ನು ಮೂರು ತಿಂಗಳೊಳಗೆ ಪ್ರಕಟಿಸುವಂತೆ ಹೈಕೋರ್ಟ್ಗಳಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರ್ದೇಶಿಸಿದೆ.</p>.<p>ವಿಳಂಬವು ದಾವೆದಾರರಿಗೆ ಸರಿಪಡಿಸಲಾಗದ ನಷ್ಟವನ್ನು ಉಂಟು ಮಾಡುತ್ತದೆ ಎಂದಿರುವ ನ್ಯಾಯಾಲಯ, ವೈಯಕ್ತಿಕ ಸ್ವಾತಂತ್ರ್ಯದ ಪ್ರಕರಣಗಳಲ್ಲಿ ತ್ವರಿತ ನಿರ್ಧಾರಗಳನ್ನು ತೆಗೆದುಕೊಳ್ಳುವಂತೆಯೂ ಸೂಚಿಸಿದೆ. </p>.<p>ಹೈಕೋರ್ಟ್ ತೀರ್ಪನ್ನು ಅಪ್ಲೋಡ್ ಮಾಡುವಲ್ಲಿ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ನಡೆಸಿದ ಭಾರತದ ಮುಖ್ಯನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಅವರ ಪೀಠವು ಹೈಕೋರ್ಟ್ಗಳಿಗೆ ಹಲವು ನಿರ್ದೇಶನಗಳನ್ನು ನೀಡಿದೆ. </p>.<p><strong>‘ಸುಪ್ರೀಂ’ ನಿರ್ದೇಶನಗಳು</strong></p><p>* ಜಾಮೀನು ಅರ್ಜಿಗಳ ಕುರಿತ ಆದೇಶಗಳನ್ನು ಅದೇ ದಿನ ಪ್ರಕಟಿಸಬೇಕು. ಒಂದು ವೇಳೆ ಅವುಗಳನ್ನು ಕಾಯ್ದಿರಿಸಿದ್ದರೆ ಮರುದಿನ ಪ್ರಕಟಿಸಿ, ಅಪ್ಲೋಡ್ ಮಾಡಬೇಕು</p>.<p>* ಜಾಮೀನು ಅಥವಾ ಶಿಕ್ಷೆಯ ಅಮಾನತು ಆದೇಶ ಪ್ರಕಟವಾದ ತಕ್ಷಣ ಜೈಲು ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಮತ್ತು ವಿಚಾರಣಾದೀನ ಅಥವಾ ಶಿಕ್ಷೆಗೊಳಗಾದವರನ್ನು ಅದೇ ದಿನ ಅಥವಾ ಹೆಚ್ಚೆಂದರೆ ಮರುದಿನ ಬಿಡುಗಡೆ ಮಾಡಬೇಕು</p>.<p>* ಆದೇಶ ಕಾಯ್ದಿರಿಸಿದ ನಾಲ್ಕು ತಿಂಗಳೊಳಗೆ ತೀರ್ಪು ಪ್ರಕಟಸದಿದ್ದರೆ, ಕಕ್ಷಿದಾರರು ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯನ್ನು ಸಂರ್ಪಕಿಸಿ, ಪ್ರಕರಣವನ್ನು ಬೇರೆ ಪೀಠಕ್ಕೆ ವರ್ಗಾಯಿಸುವಂತೆ ಕೋರಬಹುದು</p>.<p>* ಮುಕ್ತ ನ್ಯಾಯಾಲಯದಲ್ಲಿ ತೀರ್ಪು ನೀಡಿದಾಗ, 24 ಗಂಟೆಗಳ ಒಳಗೆ ತೀರ್ಪನ್ನು ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಬೇಕು </p>.<p>ಸುಪ್ರೀಂ ಕೋರ್ಟ್ ನೀಡಿದ ಈ ನಿರ್ದೇಶನಗಳು ಯಾವುದೇ ನಿರ್ದಿಷ್ಟ ನ್ಯಾಯಮೂರ್ತಿ ಅಥವಾ ಹೈಕೋರ್ಟ್ ತೀರ್ಪಿನ ಕುರಿತ ಆಕ್ಷೇಪಣೆಗಳಲ್ಲ ಎಂಬುದು ಪೀಠ ಸ್ಪಷ್ಟಪಡಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>