<p><strong>ನವದೆಹಲಿ:</strong> ದೆಹಲಿ ಮತ್ತು ರಾಷ್ಟ್ರ ರಾಜಧಾನಿಯ ಸುತ್ತಮುತ್ತಲಿನ ಪ್ರದೇಶಗಳ ಬೀದಿ ನಾಯಿಗಳನ್ನು ಹಿಡಿದು, ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಿ ಎಂದು ಸುಪ್ರೀಂ ಕೋರ್ಟ್ ಅಧಿಕಾರಿಗಳಿಗೆ ಸೋಮವಾರ ನಿರ್ದೇಶನ ನೀಡಿದೆ.</p>.<p>ಬೀದಿ ನಾಯಿ ಕಡಿತ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ನ್ಯಾಯಾಲಯವು, ಆ ನಾಯಿಗಳು ಮತ್ತೆ ಬೀದಿಗೆ ಬರಕೂಡದು ಎಂದು ತಾಕೀತು ಮಾಡಿದೆ.</p>.<p>ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದೀವಾಲಾ ಮತ್ತು ಆರ್.ಮಹಾದೇವನ್ ಅವರ ನೇತೃತ್ವದ ನ್ಯಾಯಪೀಠವು ಅಧಿಕಾರಿಗಳಿಗೆ ಈ ರೀತಿಯ ಕೆಲವು ಸೂಚನೆಗಳನ್ನು ನೀಡಿತು.</p>.<p>ಇದೇ ಸಂದರ್ಭದಲ್ಲಿ ನ್ಯಾಯಾಲಯದ ಆದೇಶ ಪಾಲನೆ ಕಾರ್ಯಕ್ಕೆ ಅಡ್ಡಿ ಉಂಟುಮಾಡುವ ವ್ಯಕ್ತಿ ಅಥವಾ ಸಂಸ್ಥೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ. ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವುದಾಗಿಯೂ ತಿಳಿಸಿದೆ.</p>.<p>ಪಾಣಿ ಸಂರಕ್ಷಣೆ ಕಾರ್ಯಕರ್ತರು ಮತ್ತು ‘ಪ್ರಾಣಿ ಪ್ರೇಮಿಗಳು’ ಎಂದು ಕರೆಸಿಕೊಳ್ಳುವವರಿಗೆ ರೇಬಿಸ್ಗೆ ಬಲಿಯಾದ ಮಕ್ಕಳನ್ನು ಮರಳಿ ತಂದುಕೊಡಲು ಸಾಧ್ಯವೇ ಎಂದು ನ್ಯಾಯಪೀಠ ಪ್ರಶ್ನಿಸಿತು.</p>.<p>ನಾಯಿಗಳ ಸೆರೆಹಿಡಿಯುವ ಕಾರ್ಯವನ್ನು ಹೇಗೆ ಅನುಷ್ಠಾನ ಮಾಡಬೇಕು ಎಂಬುದು ಅಧಿಕಾರಿಗಳಿಗೆ ಬಿಟ್ಟಿದ್ದು. ನಗರ ಮತ್ತು ನಗರದ ಹೊರವಲಯವನ್ನು ಬೀದಿನಾಯಿಗಳಿಂದ ಮುಕ್ತಗೊಳಿಸುವುದು ಮೊಟ್ಟ ಮೊದಲ ಆದ್ಯತೆಯಾಗಬೇಕು. ಈ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ಸ್ಪಷ್ಟಪಡಿಸಿತು.</p>.<p>ಆರು ತಿಂಗಳ ಬಳಿಕ ಮತ್ತೆ ಅರ್ಜಿ ವಿಚಾರಣೆ ನಡೆಸುವುದಾಗಿ ನ್ಯಾಯಪೀಠ ತಿಳಿಸಿತು.</p>.<p>ಬೀದಿ ನಾಯಿ ಹಾವಳಿಯಿಂದ ರಾಷ್ಟ್ರ ರಾಜಧಾನಿಯಲ್ಲಿ ರೇಬಿಸ್ ಹೆಚ್ಚಾಗಿರುವ ಕಾರಣ ಜುಲೈ 28ರಂದು ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿತ್ತು.</p>.<div><blockquote>ಕಾಲಮಿತಿಯ ಒಳಗಾಗಿ ದೆಹಲಿ ಸರ್ಕಾರವು ಸುಪ್ರೀಂ ಕೋರ್ಟ್ ಆದೇಶವನ್ನು ಅನುಷ್ಠಾನ ಮಾಡಲಿದೆ</blockquote><span class="attribution">ಕಪಿಲ್ ಮಿಶ್ರಾ ಆಶ್ರಮ ಮನೆ ಅಭಿವೃದ್ಧಿ ಸಚಿವ</span></div>.<div><blockquote>ದೆಹಲಿಯಲ್ಲಿ 3 ಲಕ್ಷ ನಾಯಿಗಳಿವೆ. ಅವುಗಳ ಸ್ಥಳಾಂತರ ಮತ್ತು ನಿರ್ವಹಣೆಗಾಗಿ ಸುಮಾರು ₹15000 ಕೋಟಿ ವೆಚ್ಚವಾಗಲಿದೆ. ದೆಹಲಿ ಸರ್ಕಾರದ ಬಳಿ ಇಷ್ಟು ಹಣ ಇದೆಯೇ?</blockquote><span class="attribution">ಮನೇಕಾ ಗಾಂಧಿ ಪ್ರಾಣಿಗಳ ಹಕ್ಕು ಹೋರಾಟಗಾರ್ತಿ ಮಾಜಿ ಕೇಂದ್ರ ಸಚಿವೆ</span></div>.<h2>ಕೋರ್ಟ್ ಹೇಳಿದ್ದೇನು?</h2><p>lಗುರುಗ್ರಾಮ, ನೊಯಿಡಾ ಮತ್ತು ಗಾಜಿಯಾಬಾದ್ನಲ್ಲಿ ದೆಹಲಿ ಸರ್ಕಾರ ಮತ್ತು ಸ್ಥಳೀಯ ಸ್ಥಂಸ್ಥೆಗಳು ನಿರ್ಮಿಸಿರುವ ಆಶ್ರಯ ಕೇಂದ್ರಗಳಿಗೆ ಬೀದಿ ನಾಯಿಗಳನ್ನು ಸ್ಥಳಾಂತರಿಸಬೇಕು</p><p>lಈ ಆಶ್ರಯ ಕೇಂದ್ರಗಳಲ್ಲಿ ನಾಯಿಗಳ ಕಾಳಜಿಗಾಗಿ ಸಿಬ್ಬಂದಿ ನೇಮಿಸಬೇಕು</p><p>lಈ ಕೇಂದ್ರಗಳನ್ನು ಸಿ.ಸಿ.ಟಿ.ವಿ. ಕ್ಯಾಮೆರಾ ಕಣ್ಗಾವಲಿನಲ್ಲಿ ಇಡಬೇಕು</p><p>lಸ್ಥಳಾಂತರಿಸುವ ನಾಯಿಗಳ ಕುರಿತ ಅಂಕಿಅಂಶವನ್ನು ದಾಖಲಿಸಬೇಕು ಮತ್ತು ಅದನ್ನು ಮುಂದಿನ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಸಲ್ಲಿಸಬೇಕು</p><p>lನಾಯಿ ಕಡಿತ ಪ್ರಕರಣದ ಬಗ್ಗೆ ವರದಿಗಾಗಿ ವಾರದ ಒಳಗಾಗಿ ಸಹಾಯವಾಣಿ ಆರಂಭಿಸಬೇಕು. ದೂರು ದಾಖಲಾದ ನಾಲ್ಕು ಗಂಟೆಗಳ ಒಳಗಾಗಿ ನಾಯಿಯನ್ನು ಹಿಡಿಯಬೇಕು</p><p>lರೇಬಿಸ್ ಲಸಿಕೆ ಲಭ್ಯವಿರುವಂತೆ ನೋಡಿಕೊಳ್ಳಬೇಕು</p><p>ಮಹಾದೇವಿ ಆನೆ ಸ್ಥಳಾಂತರ: ಗುರುವಾರ ‘ಸುಪ್ರೀಂ’ನಲ್ಲಿ ಅರ್ಜಿ ವಿಚಾರಣೆ</p><p>ಮಹಾರಾಷ್ಟ್ರದ ಕೊಲ್ಹಾಪುರದ ಜೈನ ಮಠದ ಆನೆ ‘ಮಹಾದೇವಿ’ (30)ಯನ್ನು ಗುಜರಾತ್ನ ವಂತಾರ ವನ್ಯಜೀವಿ ಸಂರಕ್ಷಣಾ ಕೇಂದ್ರಕ್ಕೆ ಸ್ಥಳಾಂತರಿಸುವ ಆದೇಶವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸಮ್ಮತಿಸಿದೆ.</p><p>ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಹಾಗೂ ನ್ಯಾಯಮೂರ್ತಿಗಳಾದ ಕೆ. ವಿನೋದ್ ಚಂದ್ರನ್, ಎ.ಎಸ್ ಚಂದುಕರ್ ಅವರನ್ನೊಳಗೊಂಡ ನ್ಯಾಯಪೀಠವು ಈ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೆಹಲಿ ಮತ್ತು ರಾಷ್ಟ್ರ ರಾಜಧಾನಿಯ ಸುತ್ತಮುತ್ತಲಿನ ಪ್ರದೇಶಗಳ ಬೀದಿ ನಾಯಿಗಳನ್ನು ಹಿಡಿದು, ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಿ ಎಂದು ಸುಪ್ರೀಂ ಕೋರ್ಟ್ ಅಧಿಕಾರಿಗಳಿಗೆ ಸೋಮವಾರ ನಿರ್ದೇಶನ ನೀಡಿದೆ.</p>.<p>ಬೀದಿ ನಾಯಿ ಕಡಿತ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ನ್ಯಾಯಾಲಯವು, ಆ ನಾಯಿಗಳು ಮತ್ತೆ ಬೀದಿಗೆ ಬರಕೂಡದು ಎಂದು ತಾಕೀತು ಮಾಡಿದೆ.</p>.<p>ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದೀವಾಲಾ ಮತ್ತು ಆರ್.ಮಹಾದೇವನ್ ಅವರ ನೇತೃತ್ವದ ನ್ಯಾಯಪೀಠವು ಅಧಿಕಾರಿಗಳಿಗೆ ಈ ರೀತಿಯ ಕೆಲವು ಸೂಚನೆಗಳನ್ನು ನೀಡಿತು.</p>.<p>ಇದೇ ಸಂದರ್ಭದಲ್ಲಿ ನ್ಯಾಯಾಲಯದ ಆದೇಶ ಪಾಲನೆ ಕಾರ್ಯಕ್ಕೆ ಅಡ್ಡಿ ಉಂಟುಮಾಡುವ ವ್ಯಕ್ತಿ ಅಥವಾ ಸಂಸ್ಥೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ. ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವುದಾಗಿಯೂ ತಿಳಿಸಿದೆ.</p>.<p>ಪಾಣಿ ಸಂರಕ್ಷಣೆ ಕಾರ್ಯಕರ್ತರು ಮತ್ತು ‘ಪ್ರಾಣಿ ಪ್ರೇಮಿಗಳು’ ಎಂದು ಕರೆಸಿಕೊಳ್ಳುವವರಿಗೆ ರೇಬಿಸ್ಗೆ ಬಲಿಯಾದ ಮಕ್ಕಳನ್ನು ಮರಳಿ ತಂದುಕೊಡಲು ಸಾಧ್ಯವೇ ಎಂದು ನ್ಯಾಯಪೀಠ ಪ್ರಶ್ನಿಸಿತು.</p>.<p>ನಾಯಿಗಳ ಸೆರೆಹಿಡಿಯುವ ಕಾರ್ಯವನ್ನು ಹೇಗೆ ಅನುಷ್ಠಾನ ಮಾಡಬೇಕು ಎಂಬುದು ಅಧಿಕಾರಿಗಳಿಗೆ ಬಿಟ್ಟಿದ್ದು. ನಗರ ಮತ್ತು ನಗರದ ಹೊರವಲಯವನ್ನು ಬೀದಿನಾಯಿಗಳಿಂದ ಮುಕ್ತಗೊಳಿಸುವುದು ಮೊಟ್ಟ ಮೊದಲ ಆದ್ಯತೆಯಾಗಬೇಕು. ಈ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ಸ್ಪಷ್ಟಪಡಿಸಿತು.</p>.<p>ಆರು ತಿಂಗಳ ಬಳಿಕ ಮತ್ತೆ ಅರ್ಜಿ ವಿಚಾರಣೆ ನಡೆಸುವುದಾಗಿ ನ್ಯಾಯಪೀಠ ತಿಳಿಸಿತು.</p>.<p>ಬೀದಿ ನಾಯಿ ಹಾವಳಿಯಿಂದ ರಾಷ್ಟ್ರ ರಾಜಧಾನಿಯಲ್ಲಿ ರೇಬಿಸ್ ಹೆಚ್ಚಾಗಿರುವ ಕಾರಣ ಜುಲೈ 28ರಂದು ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿತ್ತು.</p>.<div><blockquote>ಕಾಲಮಿತಿಯ ಒಳಗಾಗಿ ದೆಹಲಿ ಸರ್ಕಾರವು ಸುಪ್ರೀಂ ಕೋರ್ಟ್ ಆದೇಶವನ್ನು ಅನುಷ್ಠಾನ ಮಾಡಲಿದೆ</blockquote><span class="attribution">ಕಪಿಲ್ ಮಿಶ್ರಾ ಆಶ್ರಮ ಮನೆ ಅಭಿವೃದ್ಧಿ ಸಚಿವ</span></div>.<div><blockquote>ದೆಹಲಿಯಲ್ಲಿ 3 ಲಕ್ಷ ನಾಯಿಗಳಿವೆ. ಅವುಗಳ ಸ್ಥಳಾಂತರ ಮತ್ತು ನಿರ್ವಹಣೆಗಾಗಿ ಸುಮಾರು ₹15000 ಕೋಟಿ ವೆಚ್ಚವಾಗಲಿದೆ. ದೆಹಲಿ ಸರ್ಕಾರದ ಬಳಿ ಇಷ್ಟು ಹಣ ಇದೆಯೇ?</blockquote><span class="attribution">ಮನೇಕಾ ಗಾಂಧಿ ಪ್ರಾಣಿಗಳ ಹಕ್ಕು ಹೋರಾಟಗಾರ್ತಿ ಮಾಜಿ ಕೇಂದ್ರ ಸಚಿವೆ</span></div>.<h2>ಕೋರ್ಟ್ ಹೇಳಿದ್ದೇನು?</h2><p>lಗುರುಗ್ರಾಮ, ನೊಯಿಡಾ ಮತ್ತು ಗಾಜಿಯಾಬಾದ್ನಲ್ಲಿ ದೆಹಲಿ ಸರ್ಕಾರ ಮತ್ತು ಸ್ಥಳೀಯ ಸ್ಥಂಸ್ಥೆಗಳು ನಿರ್ಮಿಸಿರುವ ಆಶ್ರಯ ಕೇಂದ್ರಗಳಿಗೆ ಬೀದಿ ನಾಯಿಗಳನ್ನು ಸ್ಥಳಾಂತರಿಸಬೇಕು</p><p>lಈ ಆಶ್ರಯ ಕೇಂದ್ರಗಳಲ್ಲಿ ನಾಯಿಗಳ ಕಾಳಜಿಗಾಗಿ ಸಿಬ್ಬಂದಿ ನೇಮಿಸಬೇಕು</p><p>lಈ ಕೇಂದ್ರಗಳನ್ನು ಸಿ.ಸಿ.ಟಿ.ವಿ. ಕ್ಯಾಮೆರಾ ಕಣ್ಗಾವಲಿನಲ್ಲಿ ಇಡಬೇಕು</p><p>lಸ್ಥಳಾಂತರಿಸುವ ನಾಯಿಗಳ ಕುರಿತ ಅಂಕಿಅಂಶವನ್ನು ದಾಖಲಿಸಬೇಕು ಮತ್ತು ಅದನ್ನು ಮುಂದಿನ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಸಲ್ಲಿಸಬೇಕು</p><p>lನಾಯಿ ಕಡಿತ ಪ್ರಕರಣದ ಬಗ್ಗೆ ವರದಿಗಾಗಿ ವಾರದ ಒಳಗಾಗಿ ಸಹಾಯವಾಣಿ ಆರಂಭಿಸಬೇಕು. ದೂರು ದಾಖಲಾದ ನಾಲ್ಕು ಗಂಟೆಗಳ ಒಳಗಾಗಿ ನಾಯಿಯನ್ನು ಹಿಡಿಯಬೇಕು</p><p>lರೇಬಿಸ್ ಲಸಿಕೆ ಲಭ್ಯವಿರುವಂತೆ ನೋಡಿಕೊಳ್ಳಬೇಕು</p><p>ಮಹಾದೇವಿ ಆನೆ ಸ್ಥಳಾಂತರ: ಗುರುವಾರ ‘ಸುಪ್ರೀಂ’ನಲ್ಲಿ ಅರ್ಜಿ ವಿಚಾರಣೆ</p><p>ಮಹಾರಾಷ್ಟ್ರದ ಕೊಲ್ಹಾಪುರದ ಜೈನ ಮಠದ ಆನೆ ‘ಮಹಾದೇವಿ’ (30)ಯನ್ನು ಗುಜರಾತ್ನ ವಂತಾರ ವನ್ಯಜೀವಿ ಸಂರಕ್ಷಣಾ ಕೇಂದ್ರಕ್ಕೆ ಸ್ಥಳಾಂತರಿಸುವ ಆದೇಶವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸಮ್ಮತಿಸಿದೆ.</p><p>ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಹಾಗೂ ನ್ಯಾಯಮೂರ್ತಿಗಳಾದ ಕೆ. ವಿನೋದ್ ಚಂದ್ರನ್, ಎ.ಎಸ್ ಚಂದುಕರ್ ಅವರನ್ನೊಳಗೊಂಡ ನ್ಯಾಯಪೀಠವು ಈ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>