<p><strong>ನವದೆಹಲಿ</strong>: ಜಾತಿ ಸಮೀಕ್ಷೆಗೆ ತಡೆ ನೀಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು(ಪಿಐಎಲ್) ಸುಪ್ರೀಂ ಕೋರ್ಟ್ ವಜಾ ಮಾಡಿದೆ. ಅಲ್ಲದೇ, ಪಿಐಎಲ್ನಲ್ಲಿ ಬಳಸಿದ ಭಾಷೆ ಕುರಿತಂತೆ ಕೋರ್ಟ್, ಅರ್ಜಿದಾರನನ್ನು ತರಾಟೆಗೆ ತೆಗೆದುಕೊಂಡಿದೆ.</p><p>‘ನಿಮ್ಮ ಅರ್ಜಿಯಲ್ಲಿ ಅಸಭ್ಯ ಭಾಷೆ ಬಳಸಿದ್ದೀರಿ. ನಿಮ್ಮ ಅರ್ಜಿಯನ್ನು ಬರೆದವರು ಯಾರು?’ಎಂದು ಕೋಪಗೊಂಡ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು, ಖುದ್ದು ಹಾಜರಾಗಿದ್ದ ಅರ್ಜಿದಾರರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.</p><p>ಅರ್ಜಿಯಲ್ಲಿ ಅಂತಹ ಭಾಷೆಯನ್ನು ಬಳಸಿದ್ದು ಹೇಗೆ? ಯಾರಿಂದ ಬರೆಸಿದ್ದೀರಿ ಎಂದು ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿಪುಲ್ ಎಂ ಪಾಂಚೋಲಿ ಅವರನ್ನೂ ಒಳಗೊಂಡ ಪೀಠದ ನೇತೃತ್ವ ವಹಿಸಿದ್ದ ಸಿಜೆಐ ಅರ್ಜಿದಾರರನ್ನು ಪ್ರಶ್ನಿಸಿದ್ದಾರೆ.</p><p>ಒಂದೇ ಮಗುವನ್ನು ಹೊಂದಿರುವ ಕುಟುಂಬಗಳಿಗೆ ಆರ್ಥಿಕ ನೆರವನ್ನು ಒದಗಿಸಲು ನೀತಿ ರೂಪಿಸಲು ಕೇಂದ್ರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿದ್ದ ಮನವಿಯನ್ನೂ ಪೀಠ ವಜಾಗೊಳಿಸಿದೆ.</p><p>2027ರ ಜನಗಣತಿಯಲ್ಲಿ ನಾಗರಿಕರ ಜಾತಿ ಡೇಟಾವನ್ನು ದಾಖಲಿಸಲು, ವರ್ಗೀಕರಿಸಲು ಮತ್ತು ಪರಿಶೀಲಿಸಲು ಅಳವಡಿಸಿಕೊಳ್ಳಬೇಕಾದ ವಿಧಾನವನ್ನು ಪ್ರಶ್ನಿಸುವ ಪ್ರತ್ಯೇಕ ಪಿಐಎಲ್ ಅನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಫೆಬ್ರುವರಿ 2 ರಂದೇ ನಿರಾಕರಿಸಿತ್ತು. ಹಾಗಾಗಿ, ಈ ಕುರಿತ ಪಿಐಎಲ್ಗಳನ್ನು ವಿಚಾರಣೆಗೆ ಪರಿಗಣಿಸುತ್ತಿಲ್ಲ.</p><p>ಇದು ದೇಶದ 16ನೇ ರಾಷ್ಟ್ರೀಯ ಜನಗಣತಿಯಾಗಿದ್ದು, 1931 ರಿಂದ ಸಮಗ್ರ ಜಾತಿ ಗಣತಿ ಮತ್ತು ಸಂಪೂರ್ಣ ಡಿಜಿಟಲ್ ಆಗಿರುವ ದೇಶದ ಮೊದಲ ಜಾತಿಗಣತಿಯಾಗಿದೆ. </p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಜಾತಿ ಸಮೀಕ್ಷೆಗೆ ತಡೆ ನೀಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು(ಪಿಐಎಲ್) ಸುಪ್ರೀಂ ಕೋರ್ಟ್ ವಜಾ ಮಾಡಿದೆ. ಅಲ್ಲದೇ, ಪಿಐಎಲ್ನಲ್ಲಿ ಬಳಸಿದ ಭಾಷೆ ಕುರಿತಂತೆ ಕೋರ್ಟ್, ಅರ್ಜಿದಾರನನ್ನು ತರಾಟೆಗೆ ತೆಗೆದುಕೊಂಡಿದೆ.</p><p>‘ನಿಮ್ಮ ಅರ್ಜಿಯಲ್ಲಿ ಅಸಭ್ಯ ಭಾಷೆ ಬಳಸಿದ್ದೀರಿ. ನಿಮ್ಮ ಅರ್ಜಿಯನ್ನು ಬರೆದವರು ಯಾರು?’ಎಂದು ಕೋಪಗೊಂಡ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು, ಖುದ್ದು ಹಾಜರಾಗಿದ್ದ ಅರ್ಜಿದಾರರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.</p><p>ಅರ್ಜಿಯಲ್ಲಿ ಅಂತಹ ಭಾಷೆಯನ್ನು ಬಳಸಿದ್ದು ಹೇಗೆ? ಯಾರಿಂದ ಬರೆಸಿದ್ದೀರಿ ಎಂದು ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿಪುಲ್ ಎಂ ಪಾಂಚೋಲಿ ಅವರನ್ನೂ ಒಳಗೊಂಡ ಪೀಠದ ನೇತೃತ್ವ ವಹಿಸಿದ್ದ ಸಿಜೆಐ ಅರ್ಜಿದಾರರನ್ನು ಪ್ರಶ್ನಿಸಿದ್ದಾರೆ.</p><p>ಒಂದೇ ಮಗುವನ್ನು ಹೊಂದಿರುವ ಕುಟುಂಬಗಳಿಗೆ ಆರ್ಥಿಕ ನೆರವನ್ನು ಒದಗಿಸಲು ನೀತಿ ರೂಪಿಸಲು ಕೇಂದ್ರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿದ್ದ ಮನವಿಯನ್ನೂ ಪೀಠ ವಜಾಗೊಳಿಸಿದೆ.</p><p>2027ರ ಜನಗಣತಿಯಲ್ಲಿ ನಾಗರಿಕರ ಜಾತಿ ಡೇಟಾವನ್ನು ದಾಖಲಿಸಲು, ವರ್ಗೀಕರಿಸಲು ಮತ್ತು ಪರಿಶೀಲಿಸಲು ಅಳವಡಿಸಿಕೊಳ್ಳಬೇಕಾದ ವಿಧಾನವನ್ನು ಪ್ರಶ್ನಿಸುವ ಪ್ರತ್ಯೇಕ ಪಿಐಎಲ್ ಅನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಫೆಬ್ರುವರಿ 2 ರಂದೇ ನಿರಾಕರಿಸಿತ್ತು. ಹಾಗಾಗಿ, ಈ ಕುರಿತ ಪಿಐಎಲ್ಗಳನ್ನು ವಿಚಾರಣೆಗೆ ಪರಿಗಣಿಸುತ್ತಿಲ್ಲ.</p><p>ಇದು ದೇಶದ 16ನೇ ರಾಷ್ಟ್ರೀಯ ಜನಗಣತಿಯಾಗಿದ್ದು, 1931 ರಿಂದ ಸಮಗ್ರ ಜಾತಿ ಗಣತಿ ಮತ್ತು ಸಂಪೂರ್ಣ ಡಿಜಿಟಲ್ ಆಗಿರುವ ದೇಶದ ಮೊದಲ ಜಾತಿಗಣತಿಯಾಗಿದೆ. </p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>