<p><strong>ನವದೆಹಲಿ</strong>: ನಿವಾಸದಲ್ಲಿ ನಗದು ಪತ್ತೆಯಾದ ಪ್ರಕರಣದಲ್ಲಿ ತಮ್ಮ ವಿರುದ್ಧದ ಆರೋಪಗಳು ಸಾಬೀತಾಗಿವೆ ಎಂದು ಆಂತರಿಕ ವಿಚಾರಣಾ ಸಮಿತಿ ನೀಡಿರುವ ವರದಿಯನ್ನು ಅಮಾನ್ಯ ಮಾಡುವಂತೆ ಕೋರಿ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ ವರ್ಮಾ ಸಲ್ಲಿಸಿದ್ದ ಮೇಲ್ಮನವಿಯನ್ಜು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿದೆ.</p>.<p>‘ನ್ಯಾಯಮೂರ್ತಿ ವರ್ಮಾ ವಿರುದ್ಧದ ಆರೋಪಗಳಿಗೆ ಸಂಬಂಧಿಸಿ ಅಂತರಿಕ ವಿಚಾರಣಾ ಸಮಿತಿಯು ಬಹಳ ಸೂಕ್ಷ್ಮವಾಗಿ ಗಮನಿಸಿ, ವರದಿ ನೀಡಿದೆ. ಈ ಹಿಂದಿನ ಸಿಜೆಐ ಖನ್ನಾ ಕೂಡ ಬಹಳ ಎಚ್ಚರಿಕೆಯಿಂದ ಪ್ರಕ್ರಿಯೆ ಅನುಸರಿಸಿದ್ದಾರೆ’ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.</p>.<p>‘ನ್ಯಾಯಮೂರ್ತಿ ವರ್ಮಾ ಅವರ ವರ್ತನೆ ವಿಶ್ವಾಸ ಮೂಡಿಸುವುದಿಲ್ಲ. ಹೀಗಾಗಿ, ಅವರ ಮೇಲ್ಮನವಿಯನ್ನು ಪರಿಗಣಿಸಲು ಸಾಧ್ಯವಿಲ್ಲ’ ಎಂದು ನ್ಯಾಯಮೂರ್ತಿಗಳಾದ ದೀಪಾಂಕರ ದತ್ತ ಹಾಗೂ ಎ.ಜಿ.ಮಸೀಹ್ ಅವರು ಇದ್ದ ನ್ಯಾಯಪೀಠ ಹೇಳಿದೆ.</p>.<p>ದೆಹಲಿ ಹೈಕೋರ್ಟ್ ನ್ಯಾಯಮೂರ್ತಿಯಾಗಿದ್ದ ಸಂದರ್ಭದಲ್ಲಿ ವರ್ಮಾ ಅವರ ಅಧಿಕೃತ ನಿವಾಸದಲ್ಲಿ ನಗದು ಪತ್ತೆಯಾದ ಆರೋಪ ಕೇಳಿಬಂದಿತ್ತು.</p>.<p>ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಶೀಲ್ ನಾಗು ನೇತೃತ್ವದ ಮೂವರು ನ್ಯಾಯಮೂರ್ತಿಗಳನ್ನು ಒಳಗೊಂಡಿದ್ದ ವಿಚಾರಣಾ ಸಮಿತಿಯು 10 ದಿನ ವಿಚಾರಣೆ ನಡೆಸಿತ್ತು. 55 ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಿ, ಘಟನಾ ಸ್ಥಳಕ್ಕೆ ಭೇಟಿ ನೀಡಿ 64 ಪುಟಗಳ ಈ ವರದಿಯನ್ನು ಸಿದ್ಧಪಡಿಸಿತ್ತು.</p>.<p>ಈಗ, ಈ ವರದಿಯನ್ನು ಅನೂರ್ಜಿತಗೊಳಿಸುವಂತೆ ಕೋರಿ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿರುವುದು ನ್ಯಾಯಮೂರ್ತಿ ವರ್ಮಾ ಅವರಿಗಾದ ದೊಡ್ಡ ಹಿನ್ನಡೆಯಾಗಿದೆ.</p>.<p>‘ನ್ಯಾಯಮೂರ್ತಿ ವರ್ಮಾ ನಿವಾಸದಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿ ನಡೆಸಿದ ಬೆಂಕಿ ನಂದಿಸುವ ಕಾರ್ಯಾಚರಣೆಯ ಚಿತ್ರಗಳು ಹಾಗೂ ವಿಡಿಯೊಗಳನ್ನು, ಸಮಿತಿ ಹಾಗೂ ಈ ಹಿಂದಿನ ಸಿಜೆಐ ಖನ್ನಾ ಅವರು ಸುಪ್ರೀಂ ಕೋರ್ಟ್ ವೆಬ್ಸೈಟ್ನಲ್ಲಿ ಹಾಕಿಲ್ಲ. ನಿಯಮಗಳ ಪ್ರಕಾರ, ಇಂತಹ ಕ್ರಮ ಅಗತ್ಯವಿರಲಿಲ್ಲ ಎಂಬುದು ನಮ್ಮ ಅನಿಸಿಕೆ. ಇದನ್ನು ಹೊರತುಪಡಿಸಿ ಎಲ್ಲ ಪ್ರಕ್ರಿಯೆಗಳನ್ನು ಅನುಸರಿಸಲಾಗಿದೆ’ ಎಂದು ತೀರ್ಪು ಓದಿದ ನ್ಯಾಯಮೂರ್ತಿ ದತ್ತ ಹೇಳಿದರು.</p>.<p>‘ಈ ವಿಚಾರದಲ್ಲಿ ನ್ಯಾಯಮೂರ್ತಿ ವರ್ಮಾ ಅವರ ಮೂಲಭೂತ ಹಕ್ಕುಗಳ ಉಲ್ಲಂಘನೆಯೂ ಆಗಿಲ್ಲ’ ಎಂದ ನ್ಯಾಯಪೀಠ, ‘ಯಾವುದೇ ತಕರಾರುಗಳು ಇದ್ದಲ್ಲಿ, ತಮ್ಮ ವಿರುದ್ಧ ನಡೆಯುವ ವಾಗ್ದಂಡನೆ ಪ್ರಕ್ರಿಯೆ ವೇಳೆ ಪ್ರಸ್ತಾಪಿಸಲು ನ್ಯಾಯಮೂರ್ತಿ ವರ್ಮಾ ಸ್ವತಂತ್ರರು’ ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ನಿವಾಸದಲ್ಲಿ ನಗದು ಪತ್ತೆಯಾದ ಪ್ರಕರಣದಲ್ಲಿ ತಮ್ಮ ವಿರುದ್ಧದ ಆರೋಪಗಳು ಸಾಬೀತಾಗಿವೆ ಎಂದು ಆಂತರಿಕ ವಿಚಾರಣಾ ಸಮಿತಿ ನೀಡಿರುವ ವರದಿಯನ್ನು ಅಮಾನ್ಯ ಮಾಡುವಂತೆ ಕೋರಿ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ ವರ್ಮಾ ಸಲ್ಲಿಸಿದ್ದ ಮೇಲ್ಮನವಿಯನ್ಜು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿದೆ.</p>.<p>‘ನ್ಯಾಯಮೂರ್ತಿ ವರ್ಮಾ ವಿರುದ್ಧದ ಆರೋಪಗಳಿಗೆ ಸಂಬಂಧಿಸಿ ಅಂತರಿಕ ವಿಚಾರಣಾ ಸಮಿತಿಯು ಬಹಳ ಸೂಕ್ಷ್ಮವಾಗಿ ಗಮನಿಸಿ, ವರದಿ ನೀಡಿದೆ. ಈ ಹಿಂದಿನ ಸಿಜೆಐ ಖನ್ನಾ ಕೂಡ ಬಹಳ ಎಚ್ಚರಿಕೆಯಿಂದ ಪ್ರಕ್ರಿಯೆ ಅನುಸರಿಸಿದ್ದಾರೆ’ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.</p>.<p>‘ನ್ಯಾಯಮೂರ್ತಿ ವರ್ಮಾ ಅವರ ವರ್ತನೆ ವಿಶ್ವಾಸ ಮೂಡಿಸುವುದಿಲ್ಲ. ಹೀಗಾಗಿ, ಅವರ ಮೇಲ್ಮನವಿಯನ್ನು ಪರಿಗಣಿಸಲು ಸಾಧ್ಯವಿಲ್ಲ’ ಎಂದು ನ್ಯಾಯಮೂರ್ತಿಗಳಾದ ದೀಪಾಂಕರ ದತ್ತ ಹಾಗೂ ಎ.ಜಿ.ಮಸೀಹ್ ಅವರು ಇದ್ದ ನ್ಯಾಯಪೀಠ ಹೇಳಿದೆ.</p>.<p>ದೆಹಲಿ ಹೈಕೋರ್ಟ್ ನ್ಯಾಯಮೂರ್ತಿಯಾಗಿದ್ದ ಸಂದರ್ಭದಲ್ಲಿ ವರ್ಮಾ ಅವರ ಅಧಿಕೃತ ನಿವಾಸದಲ್ಲಿ ನಗದು ಪತ್ತೆಯಾದ ಆರೋಪ ಕೇಳಿಬಂದಿತ್ತು.</p>.<p>ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಶೀಲ್ ನಾಗು ನೇತೃತ್ವದ ಮೂವರು ನ್ಯಾಯಮೂರ್ತಿಗಳನ್ನು ಒಳಗೊಂಡಿದ್ದ ವಿಚಾರಣಾ ಸಮಿತಿಯು 10 ದಿನ ವಿಚಾರಣೆ ನಡೆಸಿತ್ತು. 55 ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಿ, ಘಟನಾ ಸ್ಥಳಕ್ಕೆ ಭೇಟಿ ನೀಡಿ 64 ಪುಟಗಳ ಈ ವರದಿಯನ್ನು ಸಿದ್ಧಪಡಿಸಿತ್ತು.</p>.<p>ಈಗ, ಈ ವರದಿಯನ್ನು ಅನೂರ್ಜಿತಗೊಳಿಸುವಂತೆ ಕೋರಿ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿರುವುದು ನ್ಯಾಯಮೂರ್ತಿ ವರ್ಮಾ ಅವರಿಗಾದ ದೊಡ್ಡ ಹಿನ್ನಡೆಯಾಗಿದೆ.</p>.<p>‘ನ್ಯಾಯಮೂರ್ತಿ ವರ್ಮಾ ನಿವಾಸದಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿ ನಡೆಸಿದ ಬೆಂಕಿ ನಂದಿಸುವ ಕಾರ್ಯಾಚರಣೆಯ ಚಿತ್ರಗಳು ಹಾಗೂ ವಿಡಿಯೊಗಳನ್ನು, ಸಮಿತಿ ಹಾಗೂ ಈ ಹಿಂದಿನ ಸಿಜೆಐ ಖನ್ನಾ ಅವರು ಸುಪ್ರೀಂ ಕೋರ್ಟ್ ವೆಬ್ಸೈಟ್ನಲ್ಲಿ ಹಾಕಿಲ್ಲ. ನಿಯಮಗಳ ಪ್ರಕಾರ, ಇಂತಹ ಕ್ರಮ ಅಗತ್ಯವಿರಲಿಲ್ಲ ಎಂಬುದು ನಮ್ಮ ಅನಿಸಿಕೆ. ಇದನ್ನು ಹೊರತುಪಡಿಸಿ ಎಲ್ಲ ಪ್ರಕ್ರಿಯೆಗಳನ್ನು ಅನುಸರಿಸಲಾಗಿದೆ’ ಎಂದು ತೀರ್ಪು ಓದಿದ ನ್ಯಾಯಮೂರ್ತಿ ದತ್ತ ಹೇಳಿದರು.</p>.<p>‘ಈ ವಿಚಾರದಲ್ಲಿ ನ್ಯಾಯಮೂರ್ತಿ ವರ್ಮಾ ಅವರ ಮೂಲಭೂತ ಹಕ್ಕುಗಳ ಉಲ್ಲಂಘನೆಯೂ ಆಗಿಲ್ಲ’ ಎಂದ ನ್ಯಾಯಪೀಠ, ‘ಯಾವುದೇ ತಕರಾರುಗಳು ಇದ್ದಲ್ಲಿ, ತಮ್ಮ ವಿರುದ್ಧ ನಡೆಯುವ ವಾಗ್ದಂಡನೆ ಪ್ರಕ್ರಿಯೆ ವೇಳೆ ಪ್ರಸ್ತಾಪಿಸಲು ನ್ಯಾಯಮೂರ್ತಿ ವರ್ಮಾ ಸ್ವತಂತ್ರರು’ ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>