<p><strong>ನವದೆಹಲಿ: </strong>2018ರಲ್ಲಿ ಜಾರಿ ನಿರ್ದೇಶನಾಲಯದ(ಇ.ಡಿ) ನಿರ್ದೇಶಕರನ್ನಾಗಿ ಸಂಜಯ್ ಮಿಶ್ರಾ ಅವರನ್ನು ನೇಮಕ ಮಾಡಿರುವ ಆದೇಶದಲ್ಲಿನ ಪೂರ್ವಾನ್ವಯ ಬದಲಾವಣೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ವಜಾಗೊಳಿಸಿದೆ.</p>.<p>ನ್ಯಾಯಮೂರ್ತಿ ಎಲ್ ನಾಗೇಶ್ವರರಾವ್ ನೇತೃತ್ವದ ನ್ಯಾಯಪೀಠ, ‘ಅಪರೂಪ ಮತ್ತು ಅಸಾಧಾರಣ ಪ್ರಕರಣಗಳಲ್ಲಿ ನಿವೃತ್ತಿಯ ವಯಸ್ಸು ಸಮೀಪಿಸಿದ ಅಧಿಕಾರಿಗಳ ಅಧಿಕಾರ ಅವಧಿಯನ್ನು ವಿಸ್ತರಿಸಬಹುದು‘ ಎಂದು ತಿಳಿಸಿದೆ.</p>.<p>‘ಶರ್ಮಾ ಅವರ ಅಧಿಕಾರ ಅವಧಿಯನ್ನು ಎರಡು ವರ್ಷಗಳಿಂದ ಮೂರು ವರ್ಷಕ್ಕೆ ವಿಸ್ತರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್, ಮತ್ತೆ ಅವಧಿ ವಿಸ್ತರಿಸಲು ಸಾಧ್ಯವಿಲ್ಲ ಎಂದು ಸ್ಪಷ್ಪಪಡಿಸಿದೆ.</p>.<p>ಭಾರತೀಯ ಕಂದಾಯ ಸೇವೆ (ಐಆರ್ಎಸ್) ಅಧಿಕಾರಿ ಸಂಜಯ್ ಕುಮಾರ್ ಮಿಶ್ರಾ ಅವರನ್ನು ನವೆಂಬರ್ 19, 2018 ರಂದು ಜಾರಿ ನಿರ್ದೇಶನಾಲಯದ ನಿರ್ದೇಶಕರನ್ನಾಗಿ ಎರಡು ವರ್ಷಗಳ ಅವಧಿಗೆ ನೇಮಕ ಮಾಡಲಾಗಿತ್ತು. ನಂತರ ನ. 13, 2020ರಂದು ಆದೇಶವನ್ನು ಪರಿಷ್ಕರಿಸಿ, ಆ ಎರಡು ವರ್ಷಗಳ ಅವಧಿಯನ್ನು ಮೂರು ವರ್ಷಗಳಿಗೆ ವಿಸ್ತರಿಸಲಾಗಿತ್ತು.</p>.<p>ಮಿಶ್ರಾ ಅವರ ನೇಮಕಾತಿಯಲ್ಲಿ ಮಾಡಲಾಗಿದ್ದ ಈ ಪೂರ್ವಾನ್ವಯ ಬದಲಾವಣೆಯನ್ನು ಪ್ರಶ್ನಿಸಿ ಕಾಮನ್ ಕಾಸ್ ಸ್ವಯಂ ಸೇವಾ ಸಂಸ್ಥೆ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿತ್ತು.</p>.<p><strong>ಇದನ್ನೂ ಓದಿ... <a href="https://www.prajavani.net/world-news/pakistan-deports-over-200-afghan-nationals-864964.html" target="_blank">ಪಾಕಿಸ್ತಾನ: ಮಹಿಳೆಯರು ಸೇರಿ 200 ಅಫ್ಗನ್ ಪ್ರಜೆಗಳ ಗಡಿಪಾರು</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>2018ರಲ್ಲಿ ಜಾರಿ ನಿರ್ದೇಶನಾಲಯದ(ಇ.ಡಿ) ನಿರ್ದೇಶಕರನ್ನಾಗಿ ಸಂಜಯ್ ಮಿಶ್ರಾ ಅವರನ್ನು ನೇಮಕ ಮಾಡಿರುವ ಆದೇಶದಲ್ಲಿನ ಪೂರ್ವಾನ್ವಯ ಬದಲಾವಣೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ವಜಾಗೊಳಿಸಿದೆ.</p>.<p>ನ್ಯಾಯಮೂರ್ತಿ ಎಲ್ ನಾಗೇಶ್ವರರಾವ್ ನೇತೃತ್ವದ ನ್ಯಾಯಪೀಠ, ‘ಅಪರೂಪ ಮತ್ತು ಅಸಾಧಾರಣ ಪ್ರಕರಣಗಳಲ್ಲಿ ನಿವೃತ್ತಿಯ ವಯಸ್ಸು ಸಮೀಪಿಸಿದ ಅಧಿಕಾರಿಗಳ ಅಧಿಕಾರ ಅವಧಿಯನ್ನು ವಿಸ್ತರಿಸಬಹುದು‘ ಎಂದು ತಿಳಿಸಿದೆ.</p>.<p>‘ಶರ್ಮಾ ಅವರ ಅಧಿಕಾರ ಅವಧಿಯನ್ನು ಎರಡು ವರ್ಷಗಳಿಂದ ಮೂರು ವರ್ಷಕ್ಕೆ ವಿಸ್ತರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್, ಮತ್ತೆ ಅವಧಿ ವಿಸ್ತರಿಸಲು ಸಾಧ್ಯವಿಲ್ಲ ಎಂದು ಸ್ಪಷ್ಪಪಡಿಸಿದೆ.</p>.<p>ಭಾರತೀಯ ಕಂದಾಯ ಸೇವೆ (ಐಆರ್ಎಸ್) ಅಧಿಕಾರಿ ಸಂಜಯ್ ಕುಮಾರ್ ಮಿಶ್ರಾ ಅವರನ್ನು ನವೆಂಬರ್ 19, 2018 ರಂದು ಜಾರಿ ನಿರ್ದೇಶನಾಲಯದ ನಿರ್ದೇಶಕರನ್ನಾಗಿ ಎರಡು ವರ್ಷಗಳ ಅವಧಿಗೆ ನೇಮಕ ಮಾಡಲಾಗಿತ್ತು. ನಂತರ ನ. 13, 2020ರಂದು ಆದೇಶವನ್ನು ಪರಿಷ್ಕರಿಸಿ, ಆ ಎರಡು ವರ್ಷಗಳ ಅವಧಿಯನ್ನು ಮೂರು ವರ್ಷಗಳಿಗೆ ವಿಸ್ತರಿಸಲಾಗಿತ್ತು.</p>.<p>ಮಿಶ್ರಾ ಅವರ ನೇಮಕಾತಿಯಲ್ಲಿ ಮಾಡಲಾಗಿದ್ದ ಈ ಪೂರ್ವಾನ್ವಯ ಬದಲಾವಣೆಯನ್ನು ಪ್ರಶ್ನಿಸಿ ಕಾಮನ್ ಕಾಸ್ ಸ್ವಯಂ ಸೇವಾ ಸಂಸ್ಥೆ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿತ್ತು.</p>.<p><strong>ಇದನ್ನೂ ಓದಿ... <a href="https://www.prajavani.net/world-news/pakistan-deports-over-200-afghan-nationals-864964.html" target="_blank">ಪಾಕಿಸ್ತಾನ: ಮಹಿಳೆಯರು ಸೇರಿ 200 ಅಫ್ಗನ್ ಪ್ರಜೆಗಳ ಗಡಿಪಾರು</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>