<p><strong>ನವದೆಹಲಿ</strong>: ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು(ಪಿಐಎಲ್) ದುರ್ಬಳಕೆ ಮಾಡಿಕೊಳ್ಳುತ್ತಿರುವ ಕುರಿತಂತೆ ಸುಪ್ರೀಂ ಕೋರ್ಟ್ ಮಂಗಳವಾರ ಅಸಮಾಧಾನ ವ್ಯಕ್ತಪಡಿಸಿದೆ.</p>.<p>‘ಇವು ಈಗ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳಾಗಿ ಉಳಿದಿಲ್ಲ. ಅವುಗಳು ‘ಖಾಸಗಿ ಹಿತಾಸಕ್ತಿ ಅರ್ಜಿ’, ‘ಪ್ರಚಾರ ಹಿತಾಸಕ್ತಿ ಅರ್ಜಿ’, ‘ಪೈಸಾ ಆಸಕ್ತಿಯ ದಾವೆ’ ಹಾಗೂ ‘ರಾಜಕೀಯ ಹಿತಾಸಕ್ತಿ ವ್ಯಾಜ್ಯ’ಗಳಾಗಿವೆ’ ಎಂದು ಹೇಳಿದೆ.</p>.<p>ಶಬರಿಮಲೆ ಸೇರಿ ಧಾರ್ಮಿಕ ಸ್ಥಳಗಳಲ್ಲಿ ಮಹಿಳೆಯರ ವಿರುದ್ಧ ತಾರತಮ್ಯ ಮಾಡಲಾಗುತ್ತಿದೆ ಎಂದು ದೂರಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಒಂಬತ್ತು ಸದಸ್ಯರ ಸಂವಿಧಾನ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.</p>.<p>ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ, ಎಂ.ಎಂ.ಸುಂದ್ರೇಶ್, ಅಹ್ಸಾನುದ್ದೀನ್ ಅಮಾನುಲ್ಲಾ, ಅರವಿಂದ ಕುಮಾರ್, ಆಗಸ್ಟೀನ್ ಜಾರ್ಜ್ ಮಸೀಹ್, ಪ್ರಸನ್ನ ಬಿ.ವರಾಳೆ, ಆರ್.ಮಹಾದೇವನ್ ಹಾಗೂ ಜಾಯ್ಮಾಲ್ಯಾ ಬಾಗ್ಚಿ ಈ ಪೀಠದಲ್ಲಿದ್ದಾರೆ.</p>.<p>‘10 ರಿಂದ 50 ವರ್ಷ ವಯೋಮಾನದ ಮಹಿಳೆಯರು ಕೇರಳದ ಶಬರಿಮಲೆ ದೇವಸ್ಥಾನ ಪ್ರವೇಶಿಸುವುದರ ಮೇಲಿನ ನಿಷೇಧ ಪ್ರಶ್ನಿಸಿ ಇಂಡಿಯನ್ ಯಂಗ್ ಲಾಯರ್ಸ್ ಅಸೋಸಿಯೇಷನ್ 2006ರಲ್ಲಿ ಪಿಐಎಲ್ ಸಲ್ಲಿಸಿದೆ. ಈ ಪಿಐಎಲ್ನ ಉದ್ದೇಶವಾದರೂ ಏನು’ ಎಂದು ಪೀಠ ಇದೇ ವೇಳೆ ಪ್ರಶ್ನಿಸಿದೆ.</p>.<p>ಆಗ, ಇಂಡಿಯನ್ ಯಂಗ್ ಲಾಯರ್ಸ್ ಅಸೋಸಿಯೇಷನ್ ಪರ ಹಾಜರಿದ್ದ ವಕೀಲ ರವಿಪ್ರಕಾಶ್ ಗುಪ್ತ ಅವರು,‘2006ರ ಜೂನ್ನಲ್ಲಿ ನಾಲ್ಕು ದಿನಪತ್ರಿಕೆಗಳಲ್ಲಿ ಪ್ರಕಟವಾಗಿದ್ದ ಲೇಖನಗಳ ಆಧಾರದಲ್ಲಿ ಈ ಪಿಐಎಲ್ ಸಲ್ಲಿಸಲಾಗಿದೆ’ ಎಂದು ಪೀಠದ ಗಮನಕ್ಕೆ ತಂದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ,‘ಈ ಪಿಐಎಲ್ಅನ್ನು ಸಾರಾಸಗಟಾಗಿ ತಿರಸ್ಕರಿಸಬೇಕಾಗಿತ್ತು’ ಎಂದರು.</p>.<p>‘ಒಂದು ಪಿಐಎಲ್ ಸಲ್ಲಿಸುವುದಕ್ಕೆ ಈ ಲೇಖನ ಹೇಗೆ ಆಧಾರವಾಗಬಲ್ಲದು? ಪಿಐಎಲ್ ಸಲ್ಲಿಸುವ ಉದ್ದೇಶಕ್ಕಾಗಿಯೇ ಲೇಖನಗಳನ್ನು ಬರೆಯುವುದು ಬಹಳ ಸುಲಭ’ ಎಂದೂ ಹೇಳಿದರು. </p>.<p>‘ಜನಸಾಮಾನ್ಯರ ಹಿತದೃಷ್ಟಿಯಿಂದ ಹೈಕೋರ್ಟ್ಗಳಲ್ಲಿ ಮತ್ತು ಸುಪ್ರೀಂ ಕೋರ್ಟ್ನಲ್ಲಿ ಪಿಐಎಲ್ ಸಲ್ಲಿಸುವುದನ್ನು ನಾವು ಪುರಸ್ಕರಿಸುತ್ತಾ ಬಂದಿದ್ದೇವೆ. ಆದರೆ, ಪತ್ರಿಕೆಗಳಲ್ಲಿ ಪ್ರಕಟವಾದ ಲೇಖನಗಳನ್ನು ಮುಂದಿಟ್ಟುಕೊಂಡು ಪಿಐಎಲ್ ಸಲ್ಲಿಸುವದನ್ನು ಒಪ್ಪುವುದಿಲ್ಲ’ ಎಂದು ನ್ಯಾಯಮೂರ್ತಿ ಬಿ.ವಿ.ನಾಗರತ್ನ ಹೇಳಿದರು.</p>.<p>‘ಮುಖ್ಯ ನ್ಯಾಯಮೂರ್ತಿಗಳು ದಿನವೂ ನೂರಾರು ಪತ್ರಗಳನ್ನು ಸ್ವೀಕರಿಸುತ್ತಾರೆ. ಅವುಗಳನ್ನೆಲ್ಲ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನಾಗಿ ಪರಿಗಣಿಸಲು ಸಾಧ್ಯವೇ’ ಎಂದು ಅವರು ಪ್ರಶ್ನಿಸಿದರು.</p>.<p>ನಂತರ ಪೀಠವು ಅರ್ಜಿಗಳ ವಿಚಾರಣೆಯನ್ನು ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು(ಪಿಐಎಲ್) ದುರ್ಬಳಕೆ ಮಾಡಿಕೊಳ್ಳುತ್ತಿರುವ ಕುರಿತಂತೆ ಸುಪ್ರೀಂ ಕೋರ್ಟ್ ಮಂಗಳವಾರ ಅಸಮಾಧಾನ ವ್ಯಕ್ತಪಡಿಸಿದೆ.</p>.<p>‘ಇವು ಈಗ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳಾಗಿ ಉಳಿದಿಲ್ಲ. ಅವುಗಳು ‘ಖಾಸಗಿ ಹಿತಾಸಕ್ತಿ ಅರ್ಜಿ’, ‘ಪ್ರಚಾರ ಹಿತಾಸಕ್ತಿ ಅರ್ಜಿ’, ‘ಪೈಸಾ ಆಸಕ್ತಿಯ ದಾವೆ’ ಹಾಗೂ ‘ರಾಜಕೀಯ ಹಿತಾಸಕ್ತಿ ವ್ಯಾಜ್ಯ’ಗಳಾಗಿವೆ’ ಎಂದು ಹೇಳಿದೆ.</p>.<p>ಶಬರಿಮಲೆ ಸೇರಿ ಧಾರ್ಮಿಕ ಸ್ಥಳಗಳಲ್ಲಿ ಮಹಿಳೆಯರ ವಿರುದ್ಧ ತಾರತಮ್ಯ ಮಾಡಲಾಗುತ್ತಿದೆ ಎಂದು ದೂರಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಒಂಬತ್ತು ಸದಸ್ಯರ ಸಂವಿಧಾನ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.</p>.<p>ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ, ಎಂ.ಎಂ.ಸುಂದ್ರೇಶ್, ಅಹ್ಸಾನುದ್ದೀನ್ ಅಮಾನುಲ್ಲಾ, ಅರವಿಂದ ಕುಮಾರ್, ಆಗಸ್ಟೀನ್ ಜಾರ್ಜ್ ಮಸೀಹ್, ಪ್ರಸನ್ನ ಬಿ.ವರಾಳೆ, ಆರ್.ಮಹಾದೇವನ್ ಹಾಗೂ ಜಾಯ್ಮಾಲ್ಯಾ ಬಾಗ್ಚಿ ಈ ಪೀಠದಲ್ಲಿದ್ದಾರೆ.</p>.<p>‘10 ರಿಂದ 50 ವರ್ಷ ವಯೋಮಾನದ ಮಹಿಳೆಯರು ಕೇರಳದ ಶಬರಿಮಲೆ ದೇವಸ್ಥಾನ ಪ್ರವೇಶಿಸುವುದರ ಮೇಲಿನ ನಿಷೇಧ ಪ್ರಶ್ನಿಸಿ ಇಂಡಿಯನ್ ಯಂಗ್ ಲಾಯರ್ಸ್ ಅಸೋಸಿಯೇಷನ್ 2006ರಲ್ಲಿ ಪಿಐಎಲ್ ಸಲ್ಲಿಸಿದೆ. ಈ ಪಿಐಎಲ್ನ ಉದ್ದೇಶವಾದರೂ ಏನು’ ಎಂದು ಪೀಠ ಇದೇ ವೇಳೆ ಪ್ರಶ್ನಿಸಿದೆ.</p>.<p>ಆಗ, ಇಂಡಿಯನ್ ಯಂಗ್ ಲಾಯರ್ಸ್ ಅಸೋಸಿಯೇಷನ್ ಪರ ಹಾಜರಿದ್ದ ವಕೀಲ ರವಿಪ್ರಕಾಶ್ ಗುಪ್ತ ಅವರು,‘2006ರ ಜೂನ್ನಲ್ಲಿ ನಾಲ್ಕು ದಿನಪತ್ರಿಕೆಗಳಲ್ಲಿ ಪ್ರಕಟವಾಗಿದ್ದ ಲೇಖನಗಳ ಆಧಾರದಲ್ಲಿ ಈ ಪಿಐಎಲ್ ಸಲ್ಲಿಸಲಾಗಿದೆ’ ಎಂದು ಪೀಠದ ಗಮನಕ್ಕೆ ತಂದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ,‘ಈ ಪಿಐಎಲ್ಅನ್ನು ಸಾರಾಸಗಟಾಗಿ ತಿರಸ್ಕರಿಸಬೇಕಾಗಿತ್ತು’ ಎಂದರು.</p>.<p>‘ಒಂದು ಪಿಐಎಲ್ ಸಲ್ಲಿಸುವುದಕ್ಕೆ ಈ ಲೇಖನ ಹೇಗೆ ಆಧಾರವಾಗಬಲ್ಲದು? ಪಿಐಎಲ್ ಸಲ್ಲಿಸುವ ಉದ್ದೇಶಕ್ಕಾಗಿಯೇ ಲೇಖನಗಳನ್ನು ಬರೆಯುವುದು ಬಹಳ ಸುಲಭ’ ಎಂದೂ ಹೇಳಿದರು. </p>.<p>‘ಜನಸಾಮಾನ್ಯರ ಹಿತದೃಷ್ಟಿಯಿಂದ ಹೈಕೋರ್ಟ್ಗಳಲ್ಲಿ ಮತ್ತು ಸುಪ್ರೀಂ ಕೋರ್ಟ್ನಲ್ಲಿ ಪಿಐಎಲ್ ಸಲ್ಲಿಸುವುದನ್ನು ನಾವು ಪುರಸ್ಕರಿಸುತ್ತಾ ಬಂದಿದ್ದೇವೆ. ಆದರೆ, ಪತ್ರಿಕೆಗಳಲ್ಲಿ ಪ್ರಕಟವಾದ ಲೇಖನಗಳನ್ನು ಮುಂದಿಟ್ಟುಕೊಂಡು ಪಿಐಎಲ್ ಸಲ್ಲಿಸುವದನ್ನು ಒಪ್ಪುವುದಿಲ್ಲ’ ಎಂದು ನ್ಯಾಯಮೂರ್ತಿ ಬಿ.ವಿ.ನಾಗರತ್ನ ಹೇಳಿದರು.</p>.<p>‘ಮುಖ್ಯ ನ್ಯಾಯಮೂರ್ತಿಗಳು ದಿನವೂ ನೂರಾರು ಪತ್ರಗಳನ್ನು ಸ್ವೀಕರಿಸುತ್ತಾರೆ. ಅವುಗಳನ್ನೆಲ್ಲ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನಾಗಿ ಪರಿಗಣಿಸಲು ಸಾಧ್ಯವೇ’ ಎಂದು ಅವರು ಪ್ರಶ್ನಿಸಿದರು.</p>.<p>ನಂತರ ಪೀಠವು ಅರ್ಜಿಗಳ ವಿಚಾರಣೆಯನ್ನು ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>