<p><strong>ನವದೆಹಲಿ</strong>: ‘ನೀರಜ್ ಪಾಂಡೆ ಅವರ ನಿರ್ಮಾಣದ, ನಟ ಮನೋಜ್ ಬಾಜಪೇಯ್ ನಟನೆಯ ‘ಘೂಸಖೋರ್ ಪಂಡಿತ್’ ಸಿನಿಮಾದ ಹೆಸರನ್ನು ಬದಲಾಯಿಸಿ, ಪ್ರಚಾರ ಸಾಮಗ್ರಿ ಗಳನ್ನು ಹಿಂದಕ್ಕೆ ಪಡೆಯಲು ಒಪ್ಪಿಗೆ ನೀಡಿದ ಕಾರಣ, ನೆಟ್ಫ್ಲಿಕ್ಸ್ ಸಂಸ್ಥೆಯ ವಿರುದ್ಧ ದಾಖಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಗುರುವಾರ ವಿಲೇವಾರಿ ಮಾಡಿದೆ.</p><p>‘ಹೆಸರು ಬದಲಾಯಿಸುವ ಕುರಿತು ನೀರಜ್ ಪಾಂಡೆ ಪ್ರಮಾಣಪತ್ರ ಸಲ್ಲಿಸಿದ ಕಾರಣ, ಈ ವಿವಾದಕ್ಕೆ ಎಲ್ಲಾ ರೀತಿಯಿಂದಲೂ ಅಂತ್ಯ ಸಿಗುವ ನಿರೀಕ್ಷೆಯಿದೆ. ಹೀಗಾಗಿ ಅರ್ಜಿಯನ್ನು ವಿಲೇವಾರಿ ಮಾಡಲಾಗುವುದು’ ಎಂದು ನ್ಯಾಯಮೂರ್ತಿ ಬಿ.ವಿ.ನಾಗರತ್ನ ಹಾಗೂ ಉಜ್ಜಲ್ ಭುಯಾನ್ ಅವರನ್ನು ಒಳಗೊಂಡ ಪೀಠವು ತಿಳಿಸಿದೆ.</p><p>‘ಸಿನಿಮಾಕ್ಕೆ ಹೊಸ ಹೆಸರು ಇನ್ನಷ್ಟೇ ಅಂತಿಮವಾಗಬೇಕಿದೆ. ಹಿಂದಿನ ಹೆಸರಿಗೆ ಹೋಲುವಂತಿರುವುದಿಲ್ಲ. ‘ಘೂಸಖೋರ್ ಪಂಡಿತ್’ ಶೀರ್ಷಿಕೆಯನ್ನು ಗೌರವಪೂರ್ವಕವಾಗಿ ಹಿಂದಕ್ಕೆ ಪಡೆದಿದ್ದೇನೆ. ಯಾವುದೇ ರೀತಿಯಿಂದಲೂ ಅದನ್ನು ಬಳಸುವುದಿಲ್ಲ’ ಎಂದು ನ್ಯಾಯಾಲಯಕ್ಕೆ ಸಲ್ಲಿಸಿದ ಪ್ರಮಾಣಪತ್ರದಲ್ಲಿ ನೀರಜ್ ಪಾಂಡೆ ತಿಳಿಸಿದ್ದರು.</p><p>ನೆಟ್ಫ್ಲಿಕ್ಸ್ನಲ್ಲಿ ಸಿನಿಮಾ ಬಿಡುಗಡೆ ತಡೆಹಿಡಿಯುವಂತೆ ಭಾರತೀಯ ಬ್ರಾಹ್ಮಣ ಸಮಾಜದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಅತುಲ್ ಮಿಶ್ರಾ ಅವರು ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ನೀರಜ್ ಪಾಂಡೆ ಅವರ ನಿರ್ಮಾಣದ, ನಟ ಮನೋಜ್ ಬಾಜಪೇಯ್ ನಟನೆಯ ‘ಘೂಸಖೋರ್ ಪಂಡಿತ್’ ಸಿನಿಮಾದ ಹೆಸರನ್ನು ಬದಲಾಯಿಸಿ, ಪ್ರಚಾರ ಸಾಮಗ್ರಿ ಗಳನ್ನು ಹಿಂದಕ್ಕೆ ಪಡೆಯಲು ಒಪ್ಪಿಗೆ ನೀಡಿದ ಕಾರಣ, ನೆಟ್ಫ್ಲಿಕ್ಸ್ ಸಂಸ್ಥೆಯ ವಿರುದ್ಧ ದಾಖಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಗುರುವಾರ ವಿಲೇವಾರಿ ಮಾಡಿದೆ.</p><p>‘ಹೆಸರು ಬದಲಾಯಿಸುವ ಕುರಿತು ನೀರಜ್ ಪಾಂಡೆ ಪ್ರಮಾಣಪತ್ರ ಸಲ್ಲಿಸಿದ ಕಾರಣ, ಈ ವಿವಾದಕ್ಕೆ ಎಲ್ಲಾ ರೀತಿಯಿಂದಲೂ ಅಂತ್ಯ ಸಿಗುವ ನಿರೀಕ್ಷೆಯಿದೆ. ಹೀಗಾಗಿ ಅರ್ಜಿಯನ್ನು ವಿಲೇವಾರಿ ಮಾಡಲಾಗುವುದು’ ಎಂದು ನ್ಯಾಯಮೂರ್ತಿ ಬಿ.ವಿ.ನಾಗರತ್ನ ಹಾಗೂ ಉಜ್ಜಲ್ ಭುಯಾನ್ ಅವರನ್ನು ಒಳಗೊಂಡ ಪೀಠವು ತಿಳಿಸಿದೆ.</p><p>‘ಸಿನಿಮಾಕ್ಕೆ ಹೊಸ ಹೆಸರು ಇನ್ನಷ್ಟೇ ಅಂತಿಮವಾಗಬೇಕಿದೆ. ಹಿಂದಿನ ಹೆಸರಿಗೆ ಹೋಲುವಂತಿರುವುದಿಲ್ಲ. ‘ಘೂಸಖೋರ್ ಪಂಡಿತ್’ ಶೀರ್ಷಿಕೆಯನ್ನು ಗೌರವಪೂರ್ವಕವಾಗಿ ಹಿಂದಕ್ಕೆ ಪಡೆದಿದ್ದೇನೆ. ಯಾವುದೇ ರೀತಿಯಿಂದಲೂ ಅದನ್ನು ಬಳಸುವುದಿಲ್ಲ’ ಎಂದು ನ್ಯಾಯಾಲಯಕ್ಕೆ ಸಲ್ಲಿಸಿದ ಪ್ರಮಾಣಪತ್ರದಲ್ಲಿ ನೀರಜ್ ಪಾಂಡೆ ತಿಳಿಸಿದ್ದರು.</p><p>ನೆಟ್ಫ್ಲಿಕ್ಸ್ನಲ್ಲಿ ಸಿನಿಮಾ ಬಿಡುಗಡೆ ತಡೆಹಿಡಿಯುವಂತೆ ಭಾರತೀಯ ಬ್ರಾಹ್ಮಣ ಸಮಾಜದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಅತುಲ್ ಮಿಶ್ರಾ ಅವರು ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>