ಪವನ ದಿಬ್ಬೂರು ಅವರು ಬೆಂಗಳೂರಿನಲ್ಲಿ ಅಲಯನ್ಸ್ ಬ್ಯುಸಿನೆಸ್ ಸ್ಕೂಲ್ನ ಆಸ್ತಿಯನ್ನು ₹13.05 ಕೋಟಿಗೆ ಹಾಗೂ ಮಧುಕರ್ ಅಂಗೂರ್ ಅವರ ಆಸ್ತಿಯನ್ನು ₹2.47 ಕೋಟಿಗೆ ಖರೀದಿಸಲು ಕ್ರಿಮಿನಲ್ ಸಂಚು ರೂಪಿಸಿದ್ದರು. ಇದರ ಆಧಾರದ ಮೇಲೆ ಪವನ ವಿರುದ್ಧ ಹಣದ ಅಕ್ರಮ ವರ್ಗಾವಣೆ ಕಾಯ್ದೆಯಡಿ ಕ್ರಮಕೈಗೊಳ್ಳುವುದಕ್ಕೆ ಜಾರಿ ನಿರ್ದೇಶನಾಲಯ ಮುಂದಾಗಿತ್ತು. ಇದನ್ನು ಪ್ರಶ್ನಿಸಿ ಪವನ ದಿಬ್ಬೂರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಈ ತೀರ್ಪನ್ನು ಮರುಪರಿಶೀಲಿಸಬೇಕು ಎಂದು ಇ.ಡಿ. ಅರ್ಜಿ ಸಲ್ಲಿಸಿತ್ತು.