ನ್ಯಾಯಮೂರ್ತಿಗಳಾದ ಆರ್.ಎಫ್.ನಾರಿಮನ್, ನವೀನ್ ಸಿನ್ಹಾ ಮತ್ತು ಇಂದಿರಾ ಬ್ಯಾನರ್ಜಿ ಅವರಿದ್ದ ನ್ಯಾಯಪೀಠವು ತೀರ್ಪು ನೀಡಲು ಇನ್ನೂ ಒಂದು ತಿಂಗಳ ಅವಧಿ ವಿಸ್ತರಿಸಲು ಅವಕಾಶ ನೀಡಿದೆ.ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸುರೇಂದ್ರ ಕುಮಾರ್ ಯಾದವ್ ಅವರ ವಿನಂತಿಯ ಮೇರೆಗೆ ಆಗಸ್ಟ್ 19ರಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ.