<p><strong>ನವದೆಹಲಿ:</strong> ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದೆಹಲಿ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರಿಗೆ ವೈದ್ಯಕೀಯ ಆಧಾರ ಮೇಲೆ ನೀಡಿದ್ದ ಮಧ್ಯಂತರ ಜಾಮೀನು ಅವಧಿಯನ್ನು ಸೆ.1 ರವರೆಗೆ ಸುಪ್ರೀಂ ಕೋರ್ಟ್ ಇಂದು (ಶುಕ್ರವಾರ) ವಿಸ್ತರಿಸಿದೆ. </p><p>ಸತ್ಯೇಂದ್ರ ಜೈನ್ ಪರ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ವಾದ ಮಂಡಿಸಿ, ಸತ್ಯೇಂದ್ರ ಅವರು ಬೆನ್ನುಮೂಳೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಹಾಗಾಗಿ ಅವರಿಗೆ ಕೆಲವು ದಿನ ಕಾಲಾವಕಾಶ ನೀಡುವಂತೆ ಮನವಿ ಮಾಡಿದ್ದರು.</p><p>ಈ ಅರ್ಜಿ ವಿಚಾರಣೆ ನಡೆಸಿದ, ನ್ಯಾಯಮೂರ್ತಿಗಳಾದ ಎ.ಎಸ್. ಬೋಪಣ್ಣ ಮತ್ತು ಎಂ.ಎಂ. ಸುಂದ್ರೇಶ್ ಅವರಿದ್ದ ನ್ಯಾಯಪೀಠ ಮಧ್ಯಂತರ ಜಾಮೀನು ಅವಧಿಯನ್ನು ಸೆ.1 ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿತು. ಸೆ.1ರಂದು ಮುಂದಿನ ವಿಚಾರಣೆ ನಡೆಸುವುದಾಗಿ ಹೇಳಿತು.</p><p>ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜೈನ್ ಅವರು ಬಂಧನಕ್ಕೆ ಒಳಗಾಗಿದ್ದರು. ಚಿಕಿತ್ಸೆ ಪಡೆದುಕೊಳ್ಳುವುದಕ್ಕಾಗಿ ಜೈನ್ ಅವರಿಗೆ ಸುಪ್ರೀಂ ಕೋರ್ಟ್ ಆರು ವಾರಗಳ ಮಧ್ಯಂತರ ಜಾಮೀನು ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದೆಹಲಿ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರಿಗೆ ವೈದ್ಯಕೀಯ ಆಧಾರ ಮೇಲೆ ನೀಡಿದ್ದ ಮಧ್ಯಂತರ ಜಾಮೀನು ಅವಧಿಯನ್ನು ಸೆ.1 ರವರೆಗೆ ಸುಪ್ರೀಂ ಕೋರ್ಟ್ ಇಂದು (ಶುಕ್ರವಾರ) ವಿಸ್ತರಿಸಿದೆ. </p><p>ಸತ್ಯೇಂದ್ರ ಜೈನ್ ಪರ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ವಾದ ಮಂಡಿಸಿ, ಸತ್ಯೇಂದ್ರ ಅವರು ಬೆನ್ನುಮೂಳೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಹಾಗಾಗಿ ಅವರಿಗೆ ಕೆಲವು ದಿನ ಕಾಲಾವಕಾಶ ನೀಡುವಂತೆ ಮನವಿ ಮಾಡಿದ್ದರು.</p><p>ಈ ಅರ್ಜಿ ವಿಚಾರಣೆ ನಡೆಸಿದ, ನ್ಯಾಯಮೂರ್ತಿಗಳಾದ ಎ.ಎಸ್. ಬೋಪಣ್ಣ ಮತ್ತು ಎಂ.ಎಂ. ಸುಂದ್ರೇಶ್ ಅವರಿದ್ದ ನ್ಯಾಯಪೀಠ ಮಧ್ಯಂತರ ಜಾಮೀನು ಅವಧಿಯನ್ನು ಸೆ.1 ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿತು. ಸೆ.1ರಂದು ಮುಂದಿನ ವಿಚಾರಣೆ ನಡೆಸುವುದಾಗಿ ಹೇಳಿತು.</p><p>ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜೈನ್ ಅವರು ಬಂಧನಕ್ಕೆ ಒಳಗಾಗಿದ್ದರು. ಚಿಕಿತ್ಸೆ ಪಡೆದುಕೊಳ್ಳುವುದಕ್ಕಾಗಿ ಜೈನ್ ಅವರಿಗೆ ಸುಪ್ರೀಂ ಕೋರ್ಟ್ ಆರು ವಾರಗಳ ಮಧ್ಯಂತರ ಜಾಮೀನು ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>