<p><strong>ನವದೆಹಲಿ:</strong> ಅಸ್ಸಾಂ ಮುಖ್ಯಮಂತ್ರಿ ಹಿಮಂತಾ ಬಿಸ್ವಾ ಶರ್ಮಾ ಹಾಗೂ ಅವರ ಪತ್ನಿ ಹಲವು ಪಾಸ್ಪೋರ್ಟ್ಗಳನ್ನು ಹೊಂದಿದ್ದು, ವಿದೇಶಗಳಲ್ಲಿ ಬಹಿಂಗಪಡಿಸದ ಆಸ್ತಿ ಹೊಂದಿದ್ದಾರೆ ಎನ್ನುವ ಆರೋಪದ ಮೇಲೆ ದಾಖಲಾಗಿರುವ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ಪವನ್ ಖೇರಾ ಅವರಿಗೆ ಸುಪ್ರೀಂಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ.</p><p>ನ್ಯಾಯಮೂರ್ತಿಗಳಾದ ಜೆ.ಕೆ. ಮಾಹೇಶ್ವರಿ, ಅತುಲ್.ಎಸ್. ಚಾಂದೂರ್ಕರ್ ನೇತೃತ್ವದ ನ್ಯಾಯಪೀಠ, ರಾಜಕೀಯ ದ್ವೇಷದ ವಿಚಾರಣೆಯಿಂದ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಧಕ್ಕೆಯಾಗದಂತೆ ಕ್ರಿಮಿನಲ್ ಪ್ರಕರಣವನ್ನು ವಸ್ತುನಿಷ್ಠತೆ ಹಾಗೂ ಜಾಗರೂಕತೆಯಿಂದ ನಡೆಸಬೇಕು’ ಎಂದು ತಿಳಿಸಿ ಜಾಮೀನು ಮಂಜೂರು ಮಾಡಿದೆ.</p><p>‘ಈ ಪ್ರಕರಣದಲ್ಲಿ ರಾಜಕೀಯ ಪ್ರೇರಿತ ಆರೋಪ–ಪ್ರತ್ಯಾರೋಪ ನಡೆದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ವಶಕ್ಕೆ ಪಡೆದು ವಿಚಾರಣೆ ಒಳಪಡಿಸುವುದನ್ನು ಬಹಿರಂಗಪಡಿಸುವ ಬದಲಾಗಿ ಆರೋಪಗಳ ಸತ್ಯಾಸತ್ಯತೆಯನ್ನು ವಿಚಾರಣೆ ವೇಳೆ ಕೂಡ ನಡೆಸಬಹುದು. ವೈಯಕ್ತಿಕ ಸ್ವಾತಂತ್ರ್ಯ ಎಂಬುದು ಪಾಲಿಸಬೇಕಾದ ಮೂಲಭೂತ ಹಕ್ಕು ಆಗಿದೆ’ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.</p><p>ಪೊಲೀಸರ ತನಿಖೆಗೆ ಸಹಕರಿಸುವಂತೆ ಖೇರಾ ಅವರಿಗೆ ತಿಳಿಸಿದ ನ್ಯಾಯಾಲಯ, ಅಗತ್ಯಬಿದ್ದರೆ ಪೊಲೀಸ್ ಠಾಣೆಗೂ ತೆರಳಬೇಕು ಎಂದು ತಿಳಿಸಿದೆ. ಸಕ್ಷಮ ನ್ಯಾಯಾಲಯದ ಪೂರ್ವಾನುಮತಿಯಿಲ್ಲದೇ, ದೇಶ ಬಿಟ್ಟು ತೆರಳುವಂತಿಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಅಸ್ಸಾಂ ಮುಖ್ಯಮಂತ್ರಿ ಹಿಮಂತಾ ಬಿಸ್ವಾ ಶರ್ಮಾ ಹಾಗೂ ಅವರ ಪತ್ನಿ ಹಲವು ಪಾಸ್ಪೋರ್ಟ್ಗಳನ್ನು ಹೊಂದಿದ್ದು, ವಿದೇಶಗಳಲ್ಲಿ ಬಹಿಂಗಪಡಿಸದ ಆಸ್ತಿ ಹೊಂದಿದ್ದಾರೆ ಎನ್ನುವ ಆರೋಪದ ಮೇಲೆ ದಾಖಲಾಗಿರುವ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ಪವನ್ ಖೇರಾ ಅವರಿಗೆ ಸುಪ್ರೀಂಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ.</p><p>ನ್ಯಾಯಮೂರ್ತಿಗಳಾದ ಜೆ.ಕೆ. ಮಾಹೇಶ್ವರಿ, ಅತುಲ್.ಎಸ್. ಚಾಂದೂರ್ಕರ್ ನೇತೃತ್ವದ ನ್ಯಾಯಪೀಠ, ರಾಜಕೀಯ ದ್ವೇಷದ ವಿಚಾರಣೆಯಿಂದ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಧಕ್ಕೆಯಾಗದಂತೆ ಕ್ರಿಮಿನಲ್ ಪ್ರಕರಣವನ್ನು ವಸ್ತುನಿಷ್ಠತೆ ಹಾಗೂ ಜಾಗರೂಕತೆಯಿಂದ ನಡೆಸಬೇಕು’ ಎಂದು ತಿಳಿಸಿ ಜಾಮೀನು ಮಂಜೂರು ಮಾಡಿದೆ.</p><p>‘ಈ ಪ್ರಕರಣದಲ್ಲಿ ರಾಜಕೀಯ ಪ್ರೇರಿತ ಆರೋಪ–ಪ್ರತ್ಯಾರೋಪ ನಡೆದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ವಶಕ್ಕೆ ಪಡೆದು ವಿಚಾರಣೆ ಒಳಪಡಿಸುವುದನ್ನು ಬಹಿರಂಗಪಡಿಸುವ ಬದಲಾಗಿ ಆರೋಪಗಳ ಸತ್ಯಾಸತ್ಯತೆಯನ್ನು ವಿಚಾರಣೆ ವೇಳೆ ಕೂಡ ನಡೆಸಬಹುದು. ವೈಯಕ್ತಿಕ ಸ್ವಾತಂತ್ರ್ಯ ಎಂಬುದು ಪಾಲಿಸಬೇಕಾದ ಮೂಲಭೂತ ಹಕ್ಕು ಆಗಿದೆ’ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.</p><p>ಪೊಲೀಸರ ತನಿಖೆಗೆ ಸಹಕರಿಸುವಂತೆ ಖೇರಾ ಅವರಿಗೆ ತಿಳಿಸಿದ ನ್ಯಾಯಾಲಯ, ಅಗತ್ಯಬಿದ್ದರೆ ಪೊಲೀಸ್ ಠಾಣೆಗೂ ತೆರಳಬೇಕು ಎಂದು ತಿಳಿಸಿದೆ. ಸಕ್ಷಮ ನ್ಯಾಯಾಲಯದ ಪೂರ್ವಾನುಮತಿಯಿಲ್ಲದೇ, ದೇಶ ಬಿಟ್ಟು ತೆರಳುವಂತಿಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>