<p><strong>ನವದೆಹಲಿ: </strong>ಪಂಜಾಬ್ನ ಮಾಜಿ ಡಿಜಿಪಿ ಸುಮೇಧ್ ಸಿಂಗ್ ಸೈನಿ ಬಂಧನಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ತಾತ್ಕಾಲಿಕ ತಡೆ ನೀಡಿದೆ.</p>.<p>ಸುಮೇಧ್ ಅವರು 1991ರಲ್ಲಿ ನಡೆದಿದ್ದ ಜೂನಿಯರ್ ಎಂಜಿನಿಯರ್ ಬಲವಂತ್ ಸಿಂಗ್ ಮುಲ್ತಾನಿ ಕೊಲೆ ಪ್ರಕರಣದಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿದ್ದಾರೆ.</p>.<p>ಪ್ರಕರಣಕ್ಕೆ ಸಂಬಂಧಿಸಿದಂತೆ ಸೈನಿಗೆ ನಿರೀಕ್ಷಣಾ ಜಾಮೀನು ನೀಡಲು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಸೈನಿ, ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.</p>.<p>ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಆರ್.ಎಸ್.ರೆಡ್ಡಿ ಹಾಗೂ ಎಂ.ಆರ್.ಶಾ ಅವರಿದ್ದ ತ್ರಿಸದಸ್ಯ ಪೀಠವು ಮಂಗಳವಾರ ಇದರ ವಿಚಾರಣೆ ನಡೆಸಿತು.</p>.<p>‘ಪ್ರಕರಣ ನಡೆದು 29 ವರ್ಷಗಳು ಉರುಳಿವೆ. ಸೈನಿ ಬಂಧನಕ್ಕೆ ಈಗ ಇಷ್ಟೊಂದು ಆತುರ ತೋರುತ್ತಿರುವುದಾದರೂ ಏಕೆ’ ಎಂದು ಪೀಠವು ಪಂಜಾಬ್ ಸರ್ಕಾರದ ಪರ ಹಿರಿಯ ವಕೀಲ ಸಿದ್ಧಾರ್ಥ್ ಲೂತ್ರಾ ಅವರನ್ನು ಪ್ರಶ್ನಿಸಿತು.</p>.<p>‘ಝೆಡ್ ಪ್ಲಸ್ ಶ್ರೇಣಿಯ ಭದ್ರತೆ ಹೊಂದಿದ್ದ ಮಾಜಿ ಡಿಜಿಪಿ, ಈಗ ತಲೆಮರೆಸಿಕೊಂಡಿದ್ದಾರೆ’ ಎಂದು ಲೂತ್ರಾ ಅವರು ಪೀಠಕ್ಕೆ ತಿಳಿಸಿದರು.</p>.<p>ತನಿಖೆಗೆ ಸಹಕರಿಸುವಂತೆ ಸೈನಿಗೆ ಸೂಚಿಸಿದ ಪೀಠವು ನಾಲ್ಕು ವಾರಗಳ ನಂತರ ಮುಂದಿನ ವಿಚಾರಣೆ ನಡೆಸುವುದಾಗಿ ತಿಳಿಸಿತು. ಮುಂದಿನ ಆದೇಶದವರೆಗೂ ಸೈನಿ ಅವರನ್ನು ಬಂಧಿಸದಂತೆ ನಿರ್ದೇಶಿಸಿತು.</p>.<p>ಸೆಪ್ಟೆಂಬರ್ 8ರಂದು ಹೈಕೋರ್ಟ್, ಸೈನಿ ಅವರ ಎರಡು ಅರ್ಜಿಗಳನ್ನು ತಿರಸ್ಕರಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಪಂಜಾಬ್ನ ಮಾಜಿ ಡಿಜಿಪಿ ಸುಮೇಧ್ ಸಿಂಗ್ ಸೈನಿ ಬಂಧನಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ತಾತ್ಕಾಲಿಕ ತಡೆ ನೀಡಿದೆ.</p>.<p>ಸುಮೇಧ್ ಅವರು 1991ರಲ್ಲಿ ನಡೆದಿದ್ದ ಜೂನಿಯರ್ ಎಂಜಿನಿಯರ್ ಬಲವಂತ್ ಸಿಂಗ್ ಮುಲ್ತಾನಿ ಕೊಲೆ ಪ್ರಕರಣದಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿದ್ದಾರೆ.</p>.<p>ಪ್ರಕರಣಕ್ಕೆ ಸಂಬಂಧಿಸಿದಂತೆ ಸೈನಿಗೆ ನಿರೀಕ್ಷಣಾ ಜಾಮೀನು ನೀಡಲು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಸೈನಿ, ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.</p>.<p>ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಆರ್.ಎಸ್.ರೆಡ್ಡಿ ಹಾಗೂ ಎಂ.ಆರ್.ಶಾ ಅವರಿದ್ದ ತ್ರಿಸದಸ್ಯ ಪೀಠವು ಮಂಗಳವಾರ ಇದರ ವಿಚಾರಣೆ ನಡೆಸಿತು.</p>.<p>‘ಪ್ರಕರಣ ನಡೆದು 29 ವರ್ಷಗಳು ಉರುಳಿವೆ. ಸೈನಿ ಬಂಧನಕ್ಕೆ ಈಗ ಇಷ್ಟೊಂದು ಆತುರ ತೋರುತ್ತಿರುವುದಾದರೂ ಏಕೆ’ ಎಂದು ಪೀಠವು ಪಂಜಾಬ್ ಸರ್ಕಾರದ ಪರ ಹಿರಿಯ ವಕೀಲ ಸಿದ್ಧಾರ್ಥ್ ಲೂತ್ರಾ ಅವರನ್ನು ಪ್ರಶ್ನಿಸಿತು.</p>.<p>‘ಝೆಡ್ ಪ್ಲಸ್ ಶ್ರೇಣಿಯ ಭದ್ರತೆ ಹೊಂದಿದ್ದ ಮಾಜಿ ಡಿಜಿಪಿ, ಈಗ ತಲೆಮರೆಸಿಕೊಂಡಿದ್ದಾರೆ’ ಎಂದು ಲೂತ್ರಾ ಅವರು ಪೀಠಕ್ಕೆ ತಿಳಿಸಿದರು.</p>.<p>ತನಿಖೆಗೆ ಸಹಕರಿಸುವಂತೆ ಸೈನಿಗೆ ಸೂಚಿಸಿದ ಪೀಠವು ನಾಲ್ಕು ವಾರಗಳ ನಂತರ ಮುಂದಿನ ವಿಚಾರಣೆ ನಡೆಸುವುದಾಗಿ ತಿಳಿಸಿತು. ಮುಂದಿನ ಆದೇಶದವರೆಗೂ ಸೈನಿ ಅವರನ್ನು ಬಂಧಿಸದಂತೆ ನಿರ್ದೇಶಿಸಿತು.</p>.<p>ಸೆಪ್ಟೆಂಬರ್ 8ರಂದು ಹೈಕೋರ್ಟ್, ಸೈನಿ ಅವರ ಎರಡು ಅರ್ಜಿಗಳನ್ನು ತಿರಸ್ಕರಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>