<p><strong>ನವದೆಹಲಿ</strong>: ದೇಶದಲ್ಲಿ ಘನ ತ್ಯಾಜ್ಯ ನಿರ್ವಹಣೆಯನ್ನು (ಎಸ್ಎಂಡಬ್ಲ್ಯು) ಮನಸ್ಸಿಗೆ ಬಂದಂತೆ ಮಾಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಈ ಕುರಿತು ದೇಶದಾದ್ಯಂತ ಏಕರೂಪ ವ್ಯವಸ್ಥೆ ಜಾರಿಗೊಳಿಸಲು ಕೆಲ ನಿರ್ದೇಶನಗಳನ್ನು ನೀಡಿದೆ. </p>.<p>ಸ್ವಚ್ಛ ಮತ್ತು ಆರೋಗ್ಯಕರ ಪರಿಸರ ಹೊಂದುವ ಹಕ್ಕನ್ನು ಜೀವಿಸುವ ಹಕ್ಕಿನಿಂದ ಬೇರ್ಪಡಿಸಲು ಆಗದು ಎಂದಿರುವ ಸುಪ್ರೀಂ ಕೋರ್ಟ್, ‘ಘನತ್ಯಾಜ್ಯ ವಿಲೇವಾರಿಯನ್ನು ನಿರ್ಲಕ್ಷಿಸುವುದು ಆರ್ಥಿಕತೆಗಷ್ಟೇ ಅಲ್ಲದೇ, ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತದೆ’ ಎಂದಿದೆ. </p>.<p>ಭೋಪಾಲ್ ಮುನ್ಸಿಪಲ್ ಕಾರ್ಪೋರೇಷನ್ಗೆ ಸಂಬಂಧಿಸಿದಂತೆ ಹಸಿರು ನ್ಯಾಯಪೀಠ (ಎನ್ಜಿಟಿ) ಹೊರಡಿಸಿದ್ದ ಎರಡು ಆದೇಶಗಳಿಗೆ ಸಂಬಂಧಿಸಿದ ಮೇಲ್ಮನವಿ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಂಕಜ್ ಮಿತ್ತಲ್ ಮತ್ತು ಎಸ್.ವಿ.ಎನ್.ಭಟ್ಟಿ ಅವರ ಪೀಠ, ಈ ವರ್ಷದ ಏಪ್ರಿಲ್ 1ರಿಂದ ಜಾರಿಯಾಗಲಿರುವ ಎಸ್ಡಬ್ಲ್ಯುಎಂ ಹೊಸ ನಿಯಮಗಳ (2026) ಕಟ್ಟುನಿಟ್ಟಿನ ಜಾರಿಗೆ ನಿರ್ದೇಶಿಸಿದೆ. ಅಲ್ಲದೆ ಈ ನಿಟ್ಟಿನಲ್ಲಿ ಕಾರ್ಯಾಂಗದ ಕಾರ್ಯವಿಧಾನವನ್ನು ಖಚಿತಪಡಿಸಿಕೊಳ್ಳಲು ಮಾರ್ಗಸೂಚಿ ಹೊರಡಿಸಿದೆ.</p>.<h2>ಮಾರ್ಗಸೂಚಿಯಲ್ಲಿ ಏನೇನಿದೆ?</h2>.<p>* ತ್ಯಾಜ್ಯ ಮುಕ್ತ ಭಾರತವನ್ನು ಖಚಿತಪಡಿಸಿಕೊಳ್ಳುವುದು ಪ್ರತಿಯೊಬ್ಬ ಭಾಗಿದಾರರ ಕರ್ತವ್ಯ. ತ್ಯಾಜ್ಯ ಮೂಲದಲ್ಲಿಯೇ ಪ್ರತ್ಯೇಕವಾಗಬೇಕು</p>.<p>* ಪರಿಸರ ರಕ್ಷಣೆ ಮತ್ತು ಜನರ ಯೋಗಕ್ಷೇಮ ಖಚಿತಪಡಿಸಿಕೊಳ್ಳುವುದು ರಾಜ್ಯ ಸರ್ಕಾರಗಳ ಜವಾಬ್ದಾರಿ</p>.<p>* ತ್ಯಾಜ್ಯ ವಿಂಗಡಣೆ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ಕೆ ಜನಪ್ರತಿನಿಧಿಗಳು, ಕೌನ್ಸಿಲರ್ಗಳು, ಮೇಯರ್ಗಳು, ಅಧ್ಯಕ್ಷರುಗಳು ಪ್ರಮುಖ ಸಹಾಯಕರಾಗಿರುತ್ತಾರೆ</p>.<p>* ಘನ ತ್ಯಾಜ್ಯ ನಿರ್ವಹಣೆಯ ಮೂಲಸೌಕರ್ಯದ ಶೋಧನೆ ಜಿಲ್ಲಾಧಿಕಾರಿಗಳ ಮೂಲಕ ನಡೆಯಬೇಕು. ಅಲ್ಲಿ ಗುರುತಿಸಲಾದ ಸಮಸ್ಯೆಗಳು ಮತ್ತು ತೆಗೆದುಕೊಂಡ ಕ್ರಮಗಳ ಕುರಿತು ಜಿಲ್ಲಾಧಿಕಾರಿಗಳು ಮುಖ್ಯ ಕಾರ್ಯದರ್ಶಿಗೆ ಕಾಲ ಕಾಲಕ್ಕೆ ವರದಿ ನೀಡಬೇಕು </p>.<p>* ನಗರ ಅಥವಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣಾ ಘಟಕಗಳ ಸ್ಥಾಪನೆ, ಕಾರ್ಯಗತಗೊಳಿಸುವಿಕೆ ಮತ್ತು ನಿರ್ವಹಣೆಯ ಮೇಲ್ವಿಚಾರಣೆಯ ಜವಾಬ್ದಾರಿ ಜಿಲ್ಲಾಧಿಕಾರಿಗೆ</p>.<p>* ಘನತ್ಯಾಜ್ಯ ವಿಂಗಡಣೆಗೆ (ಹಸಿ ಕಸ, ಒಣ ಕಸ, ಸ್ಯಾನಿಟರಿ ಕಸ) ಅಗತ್ಯವಿರುವ ಮೂಲ ಸೌಕರ್ಯವನ್ನು ಗುರುತಿಸಿ, ತ್ವರಿತವಾಗಿ ಕಾರ್ಯಾರಂಭ ಆಗುವಂತೆ ಮಾಡುವ ಜವಾಬ್ದಾರಿ ಮಾಲಿನ್ಯ ನಿಯಂತ್ರಣ ಮಂಡಳಿಯದ್ದು</p>.<p>* ಘನ ತ್ಯಾಜ್ಯ ನಿರ್ವಹಣಾ ಪದ್ಧತಿಗಳ ಕುರಿತು ಶಾಲಾ ಪಠ್ಯಗಳಲ್ಲಿ ವಿಷಯ ಸೇರಿಸಲಾಗಿದೆಯೇ ಎಂಬುದನ್ನು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಖಚಿತಪಡಿಸಿಕೊಳ್ಳಬೇಕು</p>.<p>* ಎಸ್ಡಬ್ಲ್ಯುಎಂನ 2026 ನಿಯಮಗಳ ಕುರಿತ ಸಾರಾಂಶವನ್ನು ಆಯಾ ರಾಜ್ಯಗಳು ಅಥವಾ ಕೇಂದ್ರಾಡಳಿತ ಪ್ರದೇಶಗಳು ಸ್ಥಳೀಯ ಭಾಷೆಗಳಿಗೆ ಅನುವಾದಿಸಬೇಕು</p>.<p>* ಈ ನಿಯಮಗಳನ್ನು ಪಾಲಿಸಲು ವಿಫಲವಾದರೆ ಅದು ಆಡಳಿತಾತ್ಮಕ ಲೋಪ ಆಗುತ್ತದೆ. ಅದರ ಜತೆಗೆ ಸ್ಥಳೀಯ ಅಧಿಕಾರಿಗಳ ವಿರುದ್ಧ ತಕ್ಷಣವೇ ದಂಡ ವಿಧಿಸುವುದೂ ಸೇರಿದಂತೆ ಮೂರು ಹಂತದ ಕ್ರಮಗಳನ್ನು ತೆಗೆದುಕೊಳ್ಳಬಹುದಾಗಿದೆ</p>.<p>* ನಿರಂತರ ನಿರ್ಲಕ್ಷ್ಯ ವಹಿಸಿದರೆ, ಪರಿಸರ ಕಾನೂನುಗಳ ಅಡಿಯಲ್ಲಿ ಕ್ರಿಮಿನಲ್ ಮೊಕದ್ದಮೆಗೂ ಕಾರಣವಾಗುತ್ತದೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೇಶದಲ್ಲಿ ಘನ ತ್ಯಾಜ್ಯ ನಿರ್ವಹಣೆಯನ್ನು (ಎಸ್ಎಂಡಬ್ಲ್ಯು) ಮನಸ್ಸಿಗೆ ಬಂದಂತೆ ಮಾಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಈ ಕುರಿತು ದೇಶದಾದ್ಯಂತ ಏಕರೂಪ ವ್ಯವಸ್ಥೆ ಜಾರಿಗೊಳಿಸಲು ಕೆಲ ನಿರ್ದೇಶನಗಳನ್ನು ನೀಡಿದೆ. </p>.<p>ಸ್ವಚ್ಛ ಮತ್ತು ಆರೋಗ್ಯಕರ ಪರಿಸರ ಹೊಂದುವ ಹಕ್ಕನ್ನು ಜೀವಿಸುವ ಹಕ್ಕಿನಿಂದ ಬೇರ್ಪಡಿಸಲು ಆಗದು ಎಂದಿರುವ ಸುಪ್ರೀಂ ಕೋರ್ಟ್, ‘ಘನತ್ಯಾಜ್ಯ ವಿಲೇವಾರಿಯನ್ನು ನಿರ್ಲಕ್ಷಿಸುವುದು ಆರ್ಥಿಕತೆಗಷ್ಟೇ ಅಲ್ಲದೇ, ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತದೆ’ ಎಂದಿದೆ. </p>.<p>ಭೋಪಾಲ್ ಮುನ್ಸಿಪಲ್ ಕಾರ್ಪೋರೇಷನ್ಗೆ ಸಂಬಂಧಿಸಿದಂತೆ ಹಸಿರು ನ್ಯಾಯಪೀಠ (ಎನ್ಜಿಟಿ) ಹೊರಡಿಸಿದ್ದ ಎರಡು ಆದೇಶಗಳಿಗೆ ಸಂಬಂಧಿಸಿದ ಮೇಲ್ಮನವಿ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಂಕಜ್ ಮಿತ್ತಲ್ ಮತ್ತು ಎಸ್.ವಿ.ಎನ್.ಭಟ್ಟಿ ಅವರ ಪೀಠ, ಈ ವರ್ಷದ ಏಪ್ರಿಲ್ 1ರಿಂದ ಜಾರಿಯಾಗಲಿರುವ ಎಸ್ಡಬ್ಲ್ಯುಎಂ ಹೊಸ ನಿಯಮಗಳ (2026) ಕಟ್ಟುನಿಟ್ಟಿನ ಜಾರಿಗೆ ನಿರ್ದೇಶಿಸಿದೆ. ಅಲ್ಲದೆ ಈ ನಿಟ್ಟಿನಲ್ಲಿ ಕಾರ್ಯಾಂಗದ ಕಾರ್ಯವಿಧಾನವನ್ನು ಖಚಿತಪಡಿಸಿಕೊಳ್ಳಲು ಮಾರ್ಗಸೂಚಿ ಹೊರಡಿಸಿದೆ.</p>.<h2>ಮಾರ್ಗಸೂಚಿಯಲ್ಲಿ ಏನೇನಿದೆ?</h2>.<p>* ತ್ಯಾಜ್ಯ ಮುಕ್ತ ಭಾರತವನ್ನು ಖಚಿತಪಡಿಸಿಕೊಳ್ಳುವುದು ಪ್ರತಿಯೊಬ್ಬ ಭಾಗಿದಾರರ ಕರ್ತವ್ಯ. ತ್ಯಾಜ್ಯ ಮೂಲದಲ್ಲಿಯೇ ಪ್ರತ್ಯೇಕವಾಗಬೇಕು</p>.<p>* ಪರಿಸರ ರಕ್ಷಣೆ ಮತ್ತು ಜನರ ಯೋಗಕ್ಷೇಮ ಖಚಿತಪಡಿಸಿಕೊಳ್ಳುವುದು ರಾಜ್ಯ ಸರ್ಕಾರಗಳ ಜವಾಬ್ದಾರಿ</p>.<p>* ತ್ಯಾಜ್ಯ ವಿಂಗಡಣೆ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ಕೆ ಜನಪ್ರತಿನಿಧಿಗಳು, ಕೌನ್ಸಿಲರ್ಗಳು, ಮೇಯರ್ಗಳು, ಅಧ್ಯಕ್ಷರುಗಳು ಪ್ರಮುಖ ಸಹಾಯಕರಾಗಿರುತ್ತಾರೆ</p>.<p>* ಘನ ತ್ಯಾಜ್ಯ ನಿರ್ವಹಣೆಯ ಮೂಲಸೌಕರ್ಯದ ಶೋಧನೆ ಜಿಲ್ಲಾಧಿಕಾರಿಗಳ ಮೂಲಕ ನಡೆಯಬೇಕು. ಅಲ್ಲಿ ಗುರುತಿಸಲಾದ ಸಮಸ್ಯೆಗಳು ಮತ್ತು ತೆಗೆದುಕೊಂಡ ಕ್ರಮಗಳ ಕುರಿತು ಜಿಲ್ಲಾಧಿಕಾರಿಗಳು ಮುಖ್ಯ ಕಾರ್ಯದರ್ಶಿಗೆ ಕಾಲ ಕಾಲಕ್ಕೆ ವರದಿ ನೀಡಬೇಕು </p>.<p>* ನಗರ ಅಥವಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣಾ ಘಟಕಗಳ ಸ್ಥಾಪನೆ, ಕಾರ್ಯಗತಗೊಳಿಸುವಿಕೆ ಮತ್ತು ನಿರ್ವಹಣೆಯ ಮೇಲ್ವಿಚಾರಣೆಯ ಜವಾಬ್ದಾರಿ ಜಿಲ್ಲಾಧಿಕಾರಿಗೆ</p>.<p>* ಘನತ್ಯಾಜ್ಯ ವಿಂಗಡಣೆಗೆ (ಹಸಿ ಕಸ, ಒಣ ಕಸ, ಸ್ಯಾನಿಟರಿ ಕಸ) ಅಗತ್ಯವಿರುವ ಮೂಲ ಸೌಕರ್ಯವನ್ನು ಗುರುತಿಸಿ, ತ್ವರಿತವಾಗಿ ಕಾರ್ಯಾರಂಭ ಆಗುವಂತೆ ಮಾಡುವ ಜವಾಬ್ದಾರಿ ಮಾಲಿನ್ಯ ನಿಯಂತ್ರಣ ಮಂಡಳಿಯದ್ದು</p>.<p>* ಘನ ತ್ಯಾಜ್ಯ ನಿರ್ವಹಣಾ ಪದ್ಧತಿಗಳ ಕುರಿತು ಶಾಲಾ ಪಠ್ಯಗಳಲ್ಲಿ ವಿಷಯ ಸೇರಿಸಲಾಗಿದೆಯೇ ಎಂಬುದನ್ನು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಖಚಿತಪಡಿಸಿಕೊಳ್ಳಬೇಕು</p>.<p>* ಎಸ್ಡಬ್ಲ್ಯುಎಂನ 2026 ನಿಯಮಗಳ ಕುರಿತ ಸಾರಾಂಶವನ್ನು ಆಯಾ ರಾಜ್ಯಗಳು ಅಥವಾ ಕೇಂದ್ರಾಡಳಿತ ಪ್ರದೇಶಗಳು ಸ್ಥಳೀಯ ಭಾಷೆಗಳಿಗೆ ಅನುವಾದಿಸಬೇಕು</p>.<p>* ಈ ನಿಯಮಗಳನ್ನು ಪಾಲಿಸಲು ವಿಫಲವಾದರೆ ಅದು ಆಡಳಿತಾತ್ಮಕ ಲೋಪ ಆಗುತ್ತದೆ. ಅದರ ಜತೆಗೆ ಸ್ಥಳೀಯ ಅಧಿಕಾರಿಗಳ ವಿರುದ್ಧ ತಕ್ಷಣವೇ ದಂಡ ವಿಧಿಸುವುದೂ ಸೇರಿದಂತೆ ಮೂರು ಹಂತದ ಕ್ರಮಗಳನ್ನು ತೆಗೆದುಕೊಳ್ಳಬಹುದಾಗಿದೆ</p>.<p>* ನಿರಂತರ ನಿರ್ಲಕ್ಷ್ಯ ವಹಿಸಿದರೆ, ಪರಿಸರ ಕಾನೂನುಗಳ ಅಡಿಯಲ್ಲಿ ಕ್ರಿಮಿನಲ್ ಮೊಕದ್ದಮೆಗೂ ಕಾರಣವಾಗುತ್ತದೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>