<p><strong>ನವದೆಹಲಿ</strong>: ಸುಪ್ರೀಂ ಕೋರ್ಟ್ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಭೂಷಣ್ ರಾಮಕೃಷ್ಣ ಗವಾಯಿ (ಬಿ.ಆರ್. ಗವಾಯಿ) ಹೆಸರನ್ನು ಹಾಲಿ ಸಿಜೆಐ ಸಂಜೀವ್ ಖನ್ನಾ ಅವರು ಕೇಂದ್ರ ಸರ್ಕಾರಕ್ಕೆ ಬುಧವಾರ ಶಿಫಾರಸು ಮಾಡಿದ್ದಾರೆ.</p><p>ಗವಾಯಿ ಅವರು ಸುಪ್ರೀಂ ಕೋರ್ಟ್ನಲ್ಲಿ ಖನ್ನಾ ಅವರ ನಂತರದ ಅತ್ಯಂತ ಹಿರಿಯ ನ್ಯಾಯಮೂರ್ತಿಯಾಗಿದ್ದಾರೆ. ಖನ್ನಾ ಅವರು ಸಿಜೆಐ ಸ್ಥಾನದಿಂದ ಮೇ 13ರಂದು ನಿವೃತ್ತರಾಗಲಿದ್ದಾರೆ. ಗವಾಯಿ ಅವರು ದೇಶದ 52ನೆಯ ಸಿಜೆಐ ಆಗಿ ಮೇ 14ರಂದು ಅಧಿಕಾರ ಸ್ವೀಕರಿಸಲಿದ್ದಾರೆ.</p><p>2019ರ ಮೇ 24ರಂದು ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಯಾಗಿ ಪದೋನ್ನತಿ ಪಡೆದ ಗವಾಯಿ ಅವರಿಗೆ ಸಿಜೆಐ ಆಗಿ ಆರು ತಿಂಗಳಿಗೂ ಹೆಚ್ಚಿನ ಅವಧಿ ಸಿಗಲಿದೆ. ಅವರು ಈ ವರ್ಷದ ನವೆಂಬರ್ 23ರಂದು ನಿವೃತ್ತರಾಗಲಿದ್ದಾರೆ.</p><p>ನ್ಯಾಯಮೂರ್ತಿ ಗವಾಯಿ ಅವರು ಪರಿಶಿಷ್ಟ ಜಾತಿಗೆ ಸೇರಿದವರು ಎಂದು ನ್ಯಾಯಾಂಗ ಕಲಾಪಗಳ ವರದಿಗಾರಿಕೆಯಲ್ಲಿ ತೊಡಗಿರುವ ‘ಸುಪ್ರೀಂ ಕೋರ್ಟ್ ಅಬ್ಸರ್ವರ್’ ಜಾಲತಾಣ ಉಲ್ಲೇಖಿಸಿದೆ.</p><p>1960ರ ನವೆಂಬರ್ 24ರಂದು ಅಮರಾವತಿಯಲ್ಲಿ ಜನಿಸಿದ ಗವಾಯಿ ಅವರು ಬಾಂಬೆ ಹೈಕೋರ್ಟ್ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ 2003ರ ನವೆಂಬರ್ 14ರಂದು ಅಧಿಕಾರ ವಹಿಸಿಕೊಂಡರು. 2005ರ ನವೆಂಬರ್ 12ರಂದು ಅವರ ಸೇವೆಯು ಕಾಯಂ ಆಯಿತು.</p><p>ಮಹತ್ವದ ತೀರ್ಪುಗಳನ್ನು ಪ್ರಕಟಿಸಿದ ಸುಪ್ರೀಂ ಕೋರ್ಟ್ನ ಸಂವಿಧಾನ ಪೀಠದ ಭಾಗವಾಗಿ ನ್ಯಾಯಮೂರ್ತಿ ಗವಾಯಿ ಅವರು ಕರ್ತವ್ಯ ನಿರ್ವಹಿಸಿದ್ದಾರೆ.</p><h2>ನ್ಯಾಯಮೂರ್ತಿ ಗವಾಯಿ ಅವರಿದ್ದ ಪೀಠದ ತೀರ್ಪುಗಳು </h2><ul><li><p>ಸಂವಿಧಾನದ 370ನೆಯ ವಿಧಿಯ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿದ ಕೇಂದ್ರದ ತೀರ್ಮಾನವನ್ನು ಎತ್ತಿಹಿಡಿದ ಐವರು ನ್ಯಾಯಮೂರ್ತಿಗಳ ಪೀಠದ ಭಾಗವಾಗಿದ್ದರು. </p></li><li><p>ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಪಡಿಸಿದ ಸಂವಿಧಾನ ಪೀಠದಲ್ಲಿ ನ್ಯಾಯಮೂರ್ತಿ ಗವಾಯಿ ಇದ್ದರು. </p></li><li><p>ನೋಟು ರದ್ದತಿ ತೀರ್ಮಾನವನ್ನು ಬಹುಮತದ ಮೂಲಕ ಎತ್ತಿಹಿಡಿದ ಸಂವಿಧಾನ ಪೀಠದಲ್ಲಿಯೂ ಅವರು ಇದ್ದರು. </p></li><li><p>ಮೀಸಲಾತಿಗಾಗಿ ಪರಿಶಿಷ್ಟ ಜಾತಿಗಳ ಒಳವರ್ಗೀಕರಣದ ಸಾಂವಿಧಾನಿಕ ಅಧಿಕಾರವು ರಾಜ್ಯ ಸರ್ಕಾರಗಳಿಗೆ ಇದೆ ಎಂದು ಬಹುಮತದ ಆಧಾರದಲ್ಲಿ ತೀರ್ಪು ನೀಡಿದ ಏಳು ನ್ಯಾಯಮೂರ್ತಿಗಳ ಪೀಠದಲ್ಲಿ ಅವರು ಒಬ್ಬರಾಗಿದ್ದರು. </p></li><li><p>ಗವಾಯಿ ನೇತೃತ್ವದ ನ್ಯಾಯಪೀಠವು ಇಡೀ ದೇಶಕ್ಕೆ ಅನ್ವಯವಾಗುವ ಮಾರ್ಗಸೂಚಿಯೊಂದನ್ನು ಹೊರಡಿಸಿ ಕಾರಣ ಕೇಳಿ ನೋಟಿಸ್ ಕೊಡದೆ ಯಾವ ಆಸ್ತಿಯನ್ನೂ ಧ್ವಂಸಗೊಳಿಸುವಂತೆ ಇಲ್ಲ ಎಂದು ಹೇಳಿತು. ಸಂಬಂಧಪಟ್ಟ ವ್ಯಕ್ತಿಗೆ ನೋಟಿಸ್ಗೆ ಪ್ರತಿಕ್ರಿಯೆ ನೀಡಲು 15 ದಿನ ಕಾಲಾವಕಾಶ ಕೊಡಬೇಕು ಎಂದು ಹೇಳಿತ್ತು.</p></li></ul>.ಸುಪ್ರೀಂ ಕೋರ್ಟ್ ನೂತನ ಸಿಜೆಐ ನ್ಯಾ. ಸಂಜೀವ್ ಖನ್ನಾ ಅವರ ಮಹತ್ವದ 5 ತೀರ್ಪುಗಳು.ಚುನಾವಣಾ ಆಯುಕ್ತರ ನೇಮಕ: ವಿಚಾರಣೆಯಿಂದ ಹಿಂದೆ ಸರಿದ ಸಿಜೆಐ ಸಂಜೀವ್ ಖನ್ನಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಸುಪ್ರೀಂ ಕೋರ್ಟ್ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಭೂಷಣ್ ರಾಮಕೃಷ್ಣ ಗವಾಯಿ (ಬಿ.ಆರ್. ಗವಾಯಿ) ಹೆಸರನ್ನು ಹಾಲಿ ಸಿಜೆಐ ಸಂಜೀವ್ ಖನ್ನಾ ಅವರು ಕೇಂದ್ರ ಸರ್ಕಾರಕ್ಕೆ ಬುಧವಾರ ಶಿಫಾರಸು ಮಾಡಿದ್ದಾರೆ.</p><p>ಗವಾಯಿ ಅವರು ಸುಪ್ರೀಂ ಕೋರ್ಟ್ನಲ್ಲಿ ಖನ್ನಾ ಅವರ ನಂತರದ ಅತ್ಯಂತ ಹಿರಿಯ ನ್ಯಾಯಮೂರ್ತಿಯಾಗಿದ್ದಾರೆ. ಖನ್ನಾ ಅವರು ಸಿಜೆಐ ಸ್ಥಾನದಿಂದ ಮೇ 13ರಂದು ನಿವೃತ್ತರಾಗಲಿದ್ದಾರೆ. ಗವಾಯಿ ಅವರು ದೇಶದ 52ನೆಯ ಸಿಜೆಐ ಆಗಿ ಮೇ 14ರಂದು ಅಧಿಕಾರ ಸ್ವೀಕರಿಸಲಿದ್ದಾರೆ.</p><p>2019ರ ಮೇ 24ರಂದು ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಯಾಗಿ ಪದೋನ್ನತಿ ಪಡೆದ ಗವಾಯಿ ಅವರಿಗೆ ಸಿಜೆಐ ಆಗಿ ಆರು ತಿಂಗಳಿಗೂ ಹೆಚ್ಚಿನ ಅವಧಿ ಸಿಗಲಿದೆ. ಅವರು ಈ ವರ್ಷದ ನವೆಂಬರ್ 23ರಂದು ನಿವೃತ್ತರಾಗಲಿದ್ದಾರೆ.</p><p>ನ್ಯಾಯಮೂರ್ತಿ ಗವಾಯಿ ಅವರು ಪರಿಶಿಷ್ಟ ಜಾತಿಗೆ ಸೇರಿದವರು ಎಂದು ನ್ಯಾಯಾಂಗ ಕಲಾಪಗಳ ವರದಿಗಾರಿಕೆಯಲ್ಲಿ ತೊಡಗಿರುವ ‘ಸುಪ್ರೀಂ ಕೋರ್ಟ್ ಅಬ್ಸರ್ವರ್’ ಜಾಲತಾಣ ಉಲ್ಲೇಖಿಸಿದೆ.</p><p>1960ರ ನವೆಂಬರ್ 24ರಂದು ಅಮರಾವತಿಯಲ್ಲಿ ಜನಿಸಿದ ಗವಾಯಿ ಅವರು ಬಾಂಬೆ ಹೈಕೋರ್ಟ್ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ 2003ರ ನವೆಂಬರ್ 14ರಂದು ಅಧಿಕಾರ ವಹಿಸಿಕೊಂಡರು. 2005ರ ನವೆಂಬರ್ 12ರಂದು ಅವರ ಸೇವೆಯು ಕಾಯಂ ಆಯಿತು.</p><p>ಮಹತ್ವದ ತೀರ್ಪುಗಳನ್ನು ಪ್ರಕಟಿಸಿದ ಸುಪ್ರೀಂ ಕೋರ್ಟ್ನ ಸಂವಿಧಾನ ಪೀಠದ ಭಾಗವಾಗಿ ನ್ಯಾಯಮೂರ್ತಿ ಗವಾಯಿ ಅವರು ಕರ್ತವ್ಯ ನಿರ್ವಹಿಸಿದ್ದಾರೆ.</p><h2>ನ್ಯಾಯಮೂರ್ತಿ ಗವಾಯಿ ಅವರಿದ್ದ ಪೀಠದ ತೀರ್ಪುಗಳು </h2><ul><li><p>ಸಂವಿಧಾನದ 370ನೆಯ ವಿಧಿಯ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿದ ಕೇಂದ್ರದ ತೀರ್ಮಾನವನ್ನು ಎತ್ತಿಹಿಡಿದ ಐವರು ನ್ಯಾಯಮೂರ್ತಿಗಳ ಪೀಠದ ಭಾಗವಾಗಿದ್ದರು. </p></li><li><p>ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಪಡಿಸಿದ ಸಂವಿಧಾನ ಪೀಠದಲ್ಲಿ ನ್ಯಾಯಮೂರ್ತಿ ಗವಾಯಿ ಇದ್ದರು. </p></li><li><p>ನೋಟು ರದ್ದತಿ ತೀರ್ಮಾನವನ್ನು ಬಹುಮತದ ಮೂಲಕ ಎತ್ತಿಹಿಡಿದ ಸಂವಿಧಾನ ಪೀಠದಲ್ಲಿಯೂ ಅವರು ಇದ್ದರು. </p></li><li><p>ಮೀಸಲಾತಿಗಾಗಿ ಪರಿಶಿಷ್ಟ ಜಾತಿಗಳ ಒಳವರ್ಗೀಕರಣದ ಸಾಂವಿಧಾನಿಕ ಅಧಿಕಾರವು ರಾಜ್ಯ ಸರ್ಕಾರಗಳಿಗೆ ಇದೆ ಎಂದು ಬಹುಮತದ ಆಧಾರದಲ್ಲಿ ತೀರ್ಪು ನೀಡಿದ ಏಳು ನ್ಯಾಯಮೂರ್ತಿಗಳ ಪೀಠದಲ್ಲಿ ಅವರು ಒಬ್ಬರಾಗಿದ್ದರು. </p></li><li><p>ಗವಾಯಿ ನೇತೃತ್ವದ ನ್ಯಾಯಪೀಠವು ಇಡೀ ದೇಶಕ್ಕೆ ಅನ್ವಯವಾಗುವ ಮಾರ್ಗಸೂಚಿಯೊಂದನ್ನು ಹೊರಡಿಸಿ ಕಾರಣ ಕೇಳಿ ನೋಟಿಸ್ ಕೊಡದೆ ಯಾವ ಆಸ್ತಿಯನ್ನೂ ಧ್ವಂಸಗೊಳಿಸುವಂತೆ ಇಲ್ಲ ಎಂದು ಹೇಳಿತು. ಸಂಬಂಧಪಟ್ಟ ವ್ಯಕ್ತಿಗೆ ನೋಟಿಸ್ಗೆ ಪ್ರತಿಕ್ರಿಯೆ ನೀಡಲು 15 ದಿನ ಕಾಲಾವಕಾಶ ಕೊಡಬೇಕು ಎಂದು ಹೇಳಿತ್ತು.</p></li></ul>.ಸುಪ್ರೀಂ ಕೋರ್ಟ್ ನೂತನ ಸಿಜೆಐ ನ್ಯಾ. ಸಂಜೀವ್ ಖನ್ನಾ ಅವರ ಮಹತ್ವದ 5 ತೀರ್ಪುಗಳು.ಚುನಾವಣಾ ಆಯುಕ್ತರ ನೇಮಕ: ವಿಚಾರಣೆಯಿಂದ ಹಿಂದೆ ಸರಿದ ಸಿಜೆಐ ಸಂಜೀವ್ ಖನ್ನಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>