<p><strong>ನವದೆಹಲಿ:</strong> ರಾಜಕೀಯ ಪಕ್ಷಗಳು ‘ಅನಾಮಧೇಯ’ ಮೂಲಗಳಿಂದ ₹2,000ಕ್ಕಿಂತ ಕಡಿಮೆ ನಗದು ದೇಣಿಗೆ ಸ್ವೀಕರಿಸಲು ಅನುಮತಿಸುವ ಆದಾಯ ತೆರಿಗೆ ಕಾಯ್ದೆಯ ನಿಬಂಧನೆಯ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರ ಮತ್ತು ಇತರರ ಪ್ರತಿಕ್ರಿಯೆ ಕೋರಿದೆ.</p>.<p>‘ದೇಣಿಗೆಯ ಮೂಲವನ್ನು ಬಹಿರಂಗಪಡಿಸದೇ ಇರುವುದರಿಂದ ಮತದಾರರಿಗೆ ರಾಜಕೀಯ ಪಕ್ಷಗಳ ಬಳಿಯಿರುವ ನಿಧಿಯ ಮೂಲದ ಬಗ್ಗೆ ಮಾಹಿತಿ ದೊರೆಯುವುದಿಲ್ಲ. ಈ ಪಾರದರ್ಶಕತೆಯ ಕೊರತೆಯು ಚುನಾವಣಾ ಪ್ರಕ್ರಿಯೆಯ ಪರಿಶುದ್ಧತೆಯನ್ನು ಹಾಳು ಮಾಡುತ್ತದೆ’ ಎಂದು ಅರ್ಜಿಯಲ್ಲಿ ಹೇಳಲಾಗಿದೆ. </p>.<p>ನ್ಯಾಯಮೂರ್ತಿಗಳಾದ ವಿಕ್ರಮ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು, ಅರ್ಜಿಯನ್ನು ನಾಲ್ಕು ವಾರಗಳ ಬಳಿಕ ವಿಚಾರಣೆಗೆ ಪಟ್ಟಿ ಮಾಡುವುದಾಗಿ ಸೋಮವಾರ ತಿಳಿಸಿತು.</p>.<p>‘ನೀವು ಆರಂಭದಲ್ಲಿ ಹೈಕೋರ್ಟ್ಗೆ ಏಕೆ ಅರ್ಜಿ ಸಲ್ಲಿಸಲಿಲ್ಲ’ ಎಂದು ಅರ್ಜಿದಾರರಾದ ಖೇಮ್ ಸಿಂಗ್ ಭಾಟಿ ಮತ್ತು ಸ್ನೇಹಾ ಕಲಿತಾ ಅವರ ಪರ ಹಾಜರಾದ ಹಿರಿಯ ವಕೀಲ ವಿಜಯ್ ಹಂಸಾರಿಯಾ ಅವರಲ್ಲಿ ಪೀಠವು ಕೇಳಿತು.</p>.<p>‘ಈ ಅರ್ಜಿಯು ದೇಶದಾದ್ಯಂತ ಎಲ್ಲಾ ರಾಜಕೀಯ ಪಕ್ಷಗಳು ಹಾಗೂ ಅವುಗಳು ಪಡೆಯುವ ದೇಣಿಗೆಗೆ ಸಂಬಂಧಿಸಿದ್ದಾಗಿದೆ’ ಎಂದು ಹಂಸಾರಿಯಾ ಪೀಠಕ್ಕೆ ತಿಳಿಸಿದರು.</p>.<p>ಅರ್ಜಿಯ ವಿಚಾರಣೆಗೆ ಒಪ್ಪಿಕೊಂಡ ಪೀಠವು ಚುನಾವಣಾ ಆಯೋಗ, ಕೇಂದ್ರ ಸರ್ಕಾರ ಮತ್ತು ಬಿಜೆಪಿ ಹಾಗೂ ಕಾಂಗ್ರೆಸ್ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಮತ್ತು ಸಂಬಂಧಪಟ್ಟ ಇತರರಿಗೆ ನೋಟಿಸ್ ಜಾರಿ ಮಾಡಿತು.</p>.<p>1961ರ ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 13ಎ(ಡಿ) ಅನ್ನು ಅಸಾಂವಿಧಾನಿಕ ಎಂದು ರದ್ಧುಗೊಳಿಸುವಂತೆ ಅರ್ಜಿಯಲ್ಲಿ ಕೋರಲಾಗಿದೆ. ಚುನಾವಣಾ ಬಾಂಡ್ ಯೋಜನೆಯನ್ನು ರದ್ಧುಗೊಳಿಸಿ ಸುಪ್ರೀಂ ಕೋರ್ಟ್ ಕಳೆದ ವರ್ಷ ನೀಡಿರುವ ತೀರ್ಪನ್ನೂ ಉಲ್ಲೇಖಿಸಲಾಗಿದೆ.</p>.<p>‘ರಾಜಕೀಯ ಪಕ್ಷಗಳು ತನಗೆ ಯಾವುದೇ ಮೊತ್ತದ ದೇಣಿಗೆ ನೀಡುವ ವ್ಯಕ್ತಿಯ ಹೆಸರು ಮತ್ತು ಇತರ ಎಲ್ಲ ವಿವರಗಳನ್ನು ಬಹಿರಂಗಪಡಿಸಬೇಕು. ರಾಜಕೀಯ ನಿಧಿಯಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳಲು ದೇಣಿಗೆಯನ್ನು ನಗದು ರೂಪದಲ್ಲಿ ಸ್ವೀಕರಿಸಲು ಸಾಧ್ಯವಿಲ್ಲ ಎಂಬ ನಿರ್ದೇಶನ ನೀಡಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರಾಜಕೀಯ ಪಕ್ಷಗಳು ‘ಅನಾಮಧೇಯ’ ಮೂಲಗಳಿಂದ ₹2,000ಕ್ಕಿಂತ ಕಡಿಮೆ ನಗದು ದೇಣಿಗೆ ಸ್ವೀಕರಿಸಲು ಅನುಮತಿಸುವ ಆದಾಯ ತೆರಿಗೆ ಕಾಯ್ದೆಯ ನಿಬಂಧನೆಯ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರ ಮತ್ತು ಇತರರ ಪ್ರತಿಕ್ರಿಯೆ ಕೋರಿದೆ.</p>.<p>‘ದೇಣಿಗೆಯ ಮೂಲವನ್ನು ಬಹಿರಂಗಪಡಿಸದೇ ಇರುವುದರಿಂದ ಮತದಾರರಿಗೆ ರಾಜಕೀಯ ಪಕ್ಷಗಳ ಬಳಿಯಿರುವ ನಿಧಿಯ ಮೂಲದ ಬಗ್ಗೆ ಮಾಹಿತಿ ದೊರೆಯುವುದಿಲ್ಲ. ಈ ಪಾರದರ್ಶಕತೆಯ ಕೊರತೆಯು ಚುನಾವಣಾ ಪ್ರಕ್ರಿಯೆಯ ಪರಿಶುದ್ಧತೆಯನ್ನು ಹಾಳು ಮಾಡುತ್ತದೆ’ ಎಂದು ಅರ್ಜಿಯಲ್ಲಿ ಹೇಳಲಾಗಿದೆ. </p>.<p>ನ್ಯಾಯಮೂರ್ತಿಗಳಾದ ವಿಕ್ರಮ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು, ಅರ್ಜಿಯನ್ನು ನಾಲ್ಕು ವಾರಗಳ ಬಳಿಕ ವಿಚಾರಣೆಗೆ ಪಟ್ಟಿ ಮಾಡುವುದಾಗಿ ಸೋಮವಾರ ತಿಳಿಸಿತು.</p>.<p>‘ನೀವು ಆರಂಭದಲ್ಲಿ ಹೈಕೋರ್ಟ್ಗೆ ಏಕೆ ಅರ್ಜಿ ಸಲ್ಲಿಸಲಿಲ್ಲ’ ಎಂದು ಅರ್ಜಿದಾರರಾದ ಖೇಮ್ ಸಿಂಗ್ ಭಾಟಿ ಮತ್ತು ಸ್ನೇಹಾ ಕಲಿತಾ ಅವರ ಪರ ಹಾಜರಾದ ಹಿರಿಯ ವಕೀಲ ವಿಜಯ್ ಹಂಸಾರಿಯಾ ಅವರಲ್ಲಿ ಪೀಠವು ಕೇಳಿತು.</p>.<p>‘ಈ ಅರ್ಜಿಯು ದೇಶದಾದ್ಯಂತ ಎಲ್ಲಾ ರಾಜಕೀಯ ಪಕ್ಷಗಳು ಹಾಗೂ ಅವುಗಳು ಪಡೆಯುವ ದೇಣಿಗೆಗೆ ಸಂಬಂಧಿಸಿದ್ದಾಗಿದೆ’ ಎಂದು ಹಂಸಾರಿಯಾ ಪೀಠಕ್ಕೆ ತಿಳಿಸಿದರು.</p>.<p>ಅರ್ಜಿಯ ವಿಚಾರಣೆಗೆ ಒಪ್ಪಿಕೊಂಡ ಪೀಠವು ಚುನಾವಣಾ ಆಯೋಗ, ಕೇಂದ್ರ ಸರ್ಕಾರ ಮತ್ತು ಬಿಜೆಪಿ ಹಾಗೂ ಕಾಂಗ್ರೆಸ್ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಮತ್ತು ಸಂಬಂಧಪಟ್ಟ ಇತರರಿಗೆ ನೋಟಿಸ್ ಜಾರಿ ಮಾಡಿತು.</p>.<p>1961ರ ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 13ಎ(ಡಿ) ಅನ್ನು ಅಸಾಂವಿಧಾನಿಕ ಎಂದು ರದ್ಧುಗೊಳಿಸುವಂತೆ ಅರ್ಜಿಯಲ್ಲಿ ಕೋರಲಾಗಿದೆ. ಚುನಾವಣಾ ಬಾಂಡ್ ಯೋಜನೆಯನ್ನು ರದ್ಧುಗೊಳಿಸಿ ಸುಪ್ರೀಂ ಕೋರ್ಟ್ ಕಳೆದ ವರ್ಷ ನೀಡಿರುವ ತೀರ್ಪನ್ನೂ ಉಲ್ಲೇಖಿಸಲಾಗಿದೆ.</p>.<p>‘ರಾಜಕೀಯ ಪಕ್ಷಗಳು ತನಗೆ ಯಾವುದೇ ಮೊತ್ತದ ದೇಣಿಗೆ ನೀಡುವ ವ್ಯಕ್ತಿಯ ಹೆಸರು ಮತ್ತು ಇತರ ಎಲ್ಲ ವಿವರಗಳನ್ನು ಬಹಿರಂಗಪಡಿಸಬೇಕು. ರಾಜಕೀಯ ನಿಧಿಯಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳಲು ದೇಣಿಗೆಯನ್ನು ನಗದು ರೂಪದಲ್ಲಿ ಸ್ವೀಕರಿಸಲು ಸಾಧ್ಯವಿಲ್ಲ ಎಂಬ ನಿರ್ದೇಶನ ನೀಡಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>