ಈ ಸಂಬಂಧ ಸಂಕ್ಷಿಪ್ತ ವಿವರಣೆ ನೀಡಬೇಕು ಎಂದು ಸೂಚಿಸಿದ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರಿದ್ದ ಪೀಠವು, ಅರ್ಜಿಯ ಮುಂದಿನ ವಿಚಾರಣೆಯನ್ನು ಮೇ 21ಕ್ಕೆ ನಿಗದಿಪಡಿಸಿತು.
ಸೊರೇನ್ ಪರ ಹಾಜರಿದ್ದ ಹಿರಿಯ ವಕೀಲ ಕಪಿಲ್ ಸಿಬಲ್, ಜಾಮೀನು ದೊರೆತಲ್ಲಿ ಸೊರೇನ್ ಅವರು ಮತ್ತೆ ಜೂನ್ 2ರಂದು ಶರಣಾಗಲಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು. ‘ಈ ಪ್ರಕರಣದಲ್ಲಿ ನನ್ನ ವಿರುದ್ಧ ಯಾವುದೇ ಸಾಕ್ಷ್ಯಗಳು ಇಲ್ಲ. ಈಗ ಜಾಮೀನು ಸಿಗದಿದ್ದಲ್ಲಿ ಚುನಾವಣೆಯೇ ಮುಗಿದುಹೋಗಲಿದೆ’ ಎಂದು ಸೊರೇನ್ ಅರ್ಜಿಯಲ್ಲಿ ಪ್ರತಿಪಾದಿಸಿದ್ದಾರೆ.