<p><strong>ನವದೆಹಲಿ:</strong> ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆಯನ್ನು 33ರಿಂದ 37ಕ್ಕೆ (ಭಾರತದ ಮುಖ್ಯ ನ್ಯಾಯಮೂರ್ತಿಯನ್ನು ಹೊರತುಪಡಿಸಿ) ತ್ವರಿತವಾಗಿ ಹೆಚ್ಚಿಸಲು ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದೆ.</p>.<p>ಈ ಕುರಿತು ಸಂಸತ್ತಿನಲ್ಲಿ ಮಸೂದೆ ಮಂಡಿಸಲು ಕೇಂದ್ರ ಸಚಿವ ಸಂಪುಟ ಮೇ 5ರಂದು ನಿರ್ಧಾರ ತೆಗೆದುಕೊಂಡಿತ್ತು. ಅದರ ಬೆನ್ನಲ್ಲೇ ಸುಗ್ರೀವಾಜ್ಞೆ ಹೊರಡಿಸಲಾಗಿದೆ. </p>.<p>‘ಸುಪ್ರೀಂ ಕೋರ್ಟ್ (ನ್ಯಾಯಮೂರ್ತಿಗಳ ಸಂಖ್ಯೆ) ತಿದ್ದುಪಡಿ ಸುಗ್ರೀವಾಜ್ಞೆ–2026’ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ಸಹಿ ಮಾಡಿದ್ದಾರೆ.</p>.<p>ಆದಾಗ್ಯೂ, ಆರು ತಿಂಗಳೊಳಗೆ ಈ ಸುಗ್ರೀವಾಜ್ಞೆ ಸಂಸತ್ತಿನಲ್ಲಿ ಅಂಗೀಕಾರ ಪಡೆಯಬೇಕು. ಇಲ್ಲದಿದ್ದರೆ ಅದು ರದ್ದಾಗುತ್ತದೆ. ಜುಲೈನಲ್ಲಿ ಮಳೆಗಾಲದ ಅಧಿವೇಶನ ನಡೆಯುವ ಸಾಧ್ಯತೆಯಿದೆ. ಆದರೆ, ಈ ಸುಗ್ರೀವಾಜ್ಞೆಯನ್ನು ತುರ್ತಾಗಿ ತರುವ ಅಗತ್ಯವೇನಿತ್ತು ಎಂಬುದು ಸ್ಪಷ್ಟವಾಗಿಲ್ಲ.</p>.<p>ನ್ಯಾಯಮೂರ್ತಿಗಳ ಸಂಖ್ಯೆಯ ಹೆಚ್ಚಳವು ತ್ವರಿತ ಮತ್ತು ಪರಿಣಾಮಕಾರಿ ನ್ಯಾಯವನ್ನು ಖಾತರಿಪಡಿಸುತ್ತದೆ ಎಂದು ಸರ್ಕಾರ ಈ ಹಿಂದೆ ಹೇಳಿತ್ತು. </p>.<p>ಸಂವಿಧಾನವು ಒಬ್ಬ ಮುಖ್ಯ ನ್ಯಾಯಮೂರ್ತಿ ಮತ್ತು ಇತರ ಏಳು ನ್ಯಾಯಮೂರ್ತಿಗಳಿಗೆ ಅವಕಾಶ ನೀಡಿದ್ದರೂ, ‘ಸುಪ್ರೀಂ ಕೋರ್ಟ್ (ನ್ಯಾಯಮೂರ್ತಿಗಳ ಸಂಖ್ಯೆ) ಕಾಯ್ದೆ–1956’ ನ್ಯಾಯಮೂರ್ತಿಗಳ ಸಂಖ್ಯೆಯನ್ನು 10ಕ್ಕೇರಿಸಲು ಅವಕಾಶ ಮಾಡಿಕೊಟ್ಟಿತು. ಈ ಕಾಯ್ದೆಗೆ ಹಲವು ಬಾರಿ ತಿದ್ದುಪಡಿಗಳಾಗಿದ್ದು, 1960ರಲ್ಲಿ ನ್ಯಾಯಮೂರ್ತಿಗಳ ಸಂಖ್ಯೆ 13ಕ್ಕೆ, 1977ರಲ್ಲಿ 17ಕ್ಕೆ, 1986ರಲ್ಲಿ 25ಕ್ಕೆ, 2008ರಲ್ಲಿ 30ಕ್ಕೆ ಹಾಗೂ 2019ರಲ್ಲಿ ತಿದ್ದುಪಡಿ ಮೂಲಕ ನ್ಯಾಯಮೂರ್ತಿಗಳ ಸಂಖ್ಯೆಯನ್ನು 33ಕ್ಕೆ ಹೆಚ್ಚಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆಯನ್ನು 33ರಿಂದ 37ಕ್ಕೆ (ಭಾರತದ ಮುಖ್ಯ ನ್ಯಾಯಮೂರ್ತಿಯನ್ನು ಹೊರತುಪಡಿಸಿ) ತ್ವರಿತವಾಗಿ ಹೆಚ್ಚಿಸಲು ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದೆ.</p>.<p>ಈ ಕುರಿತು ಸಂಸತ್ತಿನಲ್ಲಿ ಮಸೂದೆ ಮಂಡಿಸಲು ಕೇಂದ್ರ ಸಚಿವ ಸಂಪುಟ ಮೇ 5ರಂದು ನಿರ್ಧಾರ ತೆಗೆದುಕೊಂಡಿತ್ತು. ಅದರ ಬೆನ್ನಲ್ಲೇ ಸುಗ್ರೀವಾಜ್ಞೆ ಹೊರಡಿಸಲಾಗಿದೆ. </p>.<p>‘ಸುಪ್ರೀಂ ಕೋರ್ಟ್ (ನ್ಯಾಯಮೂರ್ತಿಗಳ ಸಂಖ್ಯೆ) ತಿದ್ದುಪಡಿ ಸುಗ್ರೀವಾಜ್ಞೆ–2026’ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ಸಹಿ ಮಾಡಿದ್ದಾರೆ.</p>.<p>ಆದಾಗ್ಯೂ, ಆರು ತಿಂಗಳೊಳಗೆ ಈ ಸುಗ್ರೀವಾಜ್ಞೆ ಸಂಸತ್ತಿನಲ್ಲಿ ಅಂಗೀಕಾರ ಪಡೆಯಬೇಕು. ಇಲ್ಲದಿದ್ದರೆ ಅದು ರದ್ದಾಗುತ್ತದೆ. ಜುಲೈನಲ್ಲಿ ಮಳೆಗಾಲದ ಅಧಿವೇಶನ ನಡೆಯುವ ಸಾಧ್ಯತೆಯಿದೆ. ಆದರೆ, ಈ ಸುಗ್ರೀವಾಜ್ಞೆಯನ್ನು ತುರ್ತಾಗಿ ತರುವ ಅಗತ್ಯವೇನಿತ್ತು ಎಂಬುದು ಸ್ಪಷ್ಟವಾಗಿಲ್ಲ.</p>.<p>ನ್ಯಾಯಮೂರ್ತಿಗಳ ಸಂಖ್ಯೆಯ ಹೆಚ್ಚಳವು ತ್ವರಿತ ಮತ್ತು ಪರಿಣಾಮಕಾರಿ ನ್ಯಾಯವನ್ನು ಖಾತರಿಪಡಿಸುತ್ತದೆ ಎಂದು ಸರ್ಕಾರ ಈ ಹಿಂದೆ ಹೇಳಿತ್ತು. </p>.<p>ಸಂವಿಧಾನವು ಒಬ್ಬ ಮುಖ್ಯ ನ್ಯಾಯಮೂರ್ತಿ ಮತ್ತು ಇತರ ಏಳು ನ್ಯಾಯಮೂರ್ತಿಗಳಿಗೆ ಅವಕಾಶ ನೀಡಿದ್ದರೂ, ‘ಸುಪ್ರೀಂ ಕೋರ್ಟ್ (ನ್ಯಾಯಮೂರ್ತಿಗಳ ಸಂಖ್ಯೆ) ಕಾಯ್ದೆ–1956’ ನ್ಯಾಯಮೂರ್ತಿಗಳ ಸಂಖ್ಯೆಯನ್ನು 10ಕ್ಕೇರಿಸಲು ಅವಕಾಶ ಮಾಡಿಕೊಟ್ಟಿತು. ಈ ಕಾಯ್ದೆಗೆ ಹಲವು ಬಾರಿ ತಿದ್ದುಪಡಿಗಳಾಗಿದ್ದು, 1960ರಲ್ಲಿ ನ್ಯಾಯಮೂರ್ತಿಗಳ ಸಂಖ್ಯೆ 13ಕ್ಕೆ, 1977ರಲ್ಲಿ 17ಕ್ಕೆ, 1986ರಲ್ಲಿ 25ಕ್ಕೆ, 2008ರಲ್ಲಿ 30ಕ್ಕೆ ಹಾಗೂ 2019ರಲ್ಲಿ ತಿದ್ದುಪಡಿ ಮೂಲಕ ನ್ಯಾಯಮೂರ್ತಿಗಳ ಸಂಖ್ಯೆಯನ್ನು 33ಕ್ಕೆ ಹೆಚ್ಚಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>