<p><strong>ನವದೆಹಲಿ:</strong> ಪಾರದರ್ಶಕತೆ ಉದ್ದೇಶದಿಂದ ತಮ್ಮ ಆಸ್ತಿ ವಿವರಗಳನ್ನು ಸುಪ್ರೀಂ ಕೋರ್ಟ್ನ ವೆಬ್ಸೈಟ್ನಲ್ಲಿ ಪ್ರಕಟಿಸಲು ನ್ಯಾಯಮೂರ್ತಿಗಳ ಸಭೆಯಲ್ಲಿ ನಿರ್ಧರಿಸಲಾಗಿದೆ.</p><p>‘ನ್ಯಾಯಮೂರ್ತಿಗಳು ತಮ್ಮ ಆಸ್ತಿ ವಿವರಗಳನ್ನು ವೆಬ್ಸೈಟ್ನಲ್ಲಿ ಬಹಿರಂಗಪಡಿಸಬೇಕು. ಆದರೆ, ಇದು ಕಡ್ಡಾಯವಲ್ಲ. ಇದು ಸಂಪೂರ್ಣವಾಗಿ ಸ್ವಯಂಪ್ರೇರಿತ ಪ್ರಕ್ರಿಯೆಯಾಗಿರಲಿದೆ. ಆದರೆ, ಆಸ್ತಿ ಕುರಿತು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯು ವಿವರ ಕೇಳಿದಾಗ ನೀಡಲೇಬೇಕಾಗುತ್ತದೆ’ ಎಂದು ಸಭೆಯಲ್ಲಿ ನಿರ್ಧರಿಸಲಾಗಿದೆ. </p><p>ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಸೇರಿದಂತೆ 30 ನ್ಯಾಯಮೂರ್ತಿಗಳು ಈವರೆಗೆ ತಮ್ಮ ಆಸ್ತಿ ವಿವರಗಳನ್ನು ವೆಬ್ಸೈಟ್ನಲ್ಲಿ ಪ್ರಕಟಿಸಿದ್ದಾರೆ. ಇನ್ನುಮುಂದೆ ನ್ಯಾಯಮೂರ್ತಿಗಳು ಅಧಿಕಾರ ವಹಿಸಿಕೊಳ್ಳುವ ಸಂದರ್ಭದಲ್ಲಿ ಈ ಮಾಹಿತಿ ನೀಡಬೇಕಾಗುತ್ತದೆ. ಇತ್ತೀಚೆಗೆ ದೆಹಲಿ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಮನೆಯಲ್ಲಿ ಬೆಂಕಿ ನಂದಿಸುವ ವೇಳೆ ದೊಡ್ಡ ಮೊತ್ತದ ಹಣ ಪತ್ತೆಯಾಗಿತ್ತು. ಇದು ದೊಡ್ಡ ವಿವಾದವನ್ನೇ ಸೃಷ್ಟಿಸಿತ್ತು.</p>.ಪಕ್ಷಾಂತರ ಮಾಡಿದರೂ ಉಪಚುನಾವಣೆ ನಡೆಯದು: ತೆಲಂಗಾಣ CM ಮಾತಿಗೆ ‘ಸುಪ್ರೀಂ’ ಕಿಡಿ.ಸಾಬರಮತಿ ಆಶ್ರಮ ಅಭಿವೃದ್ಧಿ ವಿರೋಧಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪಾರದರ್ಶಕತೆ ಉದ್ದೇಶದಿಂದ ತಮ್ಮ ಆಸ್ತಿ ವಿವರಗಳನ್ನು ಸುಪ್ರೀಂ ಕೋರ್ಟ್ನ ವೆಬ್ಸೈಟ್ನಲ್ಲಿ ಪ್ರಕಟಿಸಲು ನ್ಯಾಯಮೂರ್ತಿಗಳ ಸಭೆಯಲ್ಲಿ ನಿರ್ಧರಿಸಲಾಗಿದೆ.</p><p>‘ನ್ಯಾಯಮೂರ್ತಿಗಳು ತಮ್ಮ ಆಸ್ತಿ ವಿವರಗಳನ್ನು ವೆಬ್ಸೈಟ್ನಲ್ಲಿ ಬಹಿರಂಗಪಡಿಸಬೇಕು. ಆದರೆ, ಇದು ಕಡ್ಡಾಯವಲ್ಲ. ಇದು ಸಂಪೂರ್ಣವಾಗಿ ಸ್ವಯಂಪ್ರೇರಿತ ಪ್ರಕ್ರಿಯೆಯಾಗಿರಲಿದೆ. ಆದರೆ, ಆಸ್ತಿ ಕುರಿತು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯು ವಿವರ ಕೇಳಿದಾಗ ನೀಡಲೇಬೇಕಾಗುತ್ತದೆ’ ಎಂದು ಸಭೆಯಲ್ಲಿ ನಿರ್ಧರಿಸಲಾಗಿದೆ. </p><p>ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಸೇರಿದಂತೆ 30 ನ್ಯಾಯಮೂರ್ತಿಗಳು ಈವರೆಗೆ ತಮ್ಮ ಆಸ್ತಿ ವಿವರಗಳನ್ನು ವೆಬ್ಸೈಟ್ನಲ್ಲಿ ಪ್ರಕಟಿಸಿದ್ದಾರೆ. ಇನ್ನುಮುಂದೆ ನ್ಯಾಯಮೂರ್ತಿಗಳು ಅಧಿಕಾರ ವಹಿಸಿಕೊಳ್ಳುವ ಸಂದರ್ಭದಲ್ಲಿ ಈ ಮಾಹಿತಿ ನೀಡಬೇಕಾಗುತ್ತದೆ. ಇತ್ತೀಚೆಗೆ ದೆಹಲಿ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಮನೆಯಲ್ಲಿ ಬೆಂಕಿ ನಂದಿಸುವ ವೇಳೆ ದೊಡ್ಡ ಮೊತ್ತದ ಹಣ ಪತ್ತೆಯಾಗಿತ್ತು. ಇದು ದೊಡ್ಡ ವಿವಾದವನ್ನೇ ಸೃಷ್ಟಿಸಿತ್ತು.</p>.ಪಕ್ಷಾಂತರ ಮಾಡಿದರೂ ಉಪಚುನಾವಣೆ ನಡೆಯದು: ತೆಲಂಗಾಣ CM ಮಾತಿಗೆ ‘ಸುಪ್ರೀಂ’ ಕಿಡಿ.ಸಾಬರಮತಿ ಆಶ್ರಮ ಅಭಿವೃದ್ಧಿ ವಿರೋಧಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>