<p><strong>ನವದೆಹಲಿ</strong>: ಹಿಂದಿ ಮಾತನಾಡುವಂತೆ ಒತ್ತಾಯಿಸಿ ಕೇರಳದ ಇಬ್ಬರು ವಿದ್ಯಾರ್ಥಿಗಳ ಮೇಲೆ ದೆಹಲಿಯ ಸ್ಥಳೀಯರು ಮತ್ತು ಪೊಲೀಸರು ಹಲ್ಲೆ ನಡೆಸಿದ್ದಾರೆ ಎನ್ನಲಾದ ಪ್ರಕರಣದ ಬಗ್ಗೆ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ‘ನಾವೆಲ್ಲ ಒಂದೇ ದೇಶದವರು’ ಎಂದು ಹೇಳಿದೆ.</p>.<p>‘ದೇಶದೊಳಗಿನ ಜನರನ್ನು ಸಂಸ್ಕೃತಿ ಮತ್ತು ಜನಾಂಗೀಯ ಭಿನ್ನತೆಯ ಕಾರಣಕ್ಕಾಗಿ ಗುರಿಯಾಗಿಸುತ್ತಿರುವುದು ದುಃಖಕರ’ ಎಂದು ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಅಲೋಕ್ ಅರಾಧೆ ಅವರ ಪೀಠ ಬೇಸರ ವ್ಯಕ್ತಪಡಿಸಿದೆ.</p>.<p>ದೆಹಲಿ ವಿಶ್ವವಿದ್ಯಾಲಯದ ಜಾಕೀರ್ ಹುಸೇನ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿ, ಹಿಂದಿ ಭಾಷೆಯಲ್ಲಿ ಮಾತನಾಡುವಂತೆ ಬಲವಂತಪಡಿಸಲಾಗಿದೆ ಮತ್ತು ಅವರ ಸಾಂಪ್ರದಾಯಿಕ ಉಡುಗೆ(ಲುಂಗಿ) ಬಗ್ಗೆ ಅಪಹಾಸ್ಯ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.</p>.<p>ಅರುಣಾಚಲ ಪ್ರದೇಶದ ವಿದ್ಯಾರ್ಥಿಯು ದೆಹಲಿಯಲ್ಲಿ ಹತ್ಯೆಯಾಗಿರುವ ಪ್ರಕರಣ ಸೇರಿದಂತೆ ಈಶಾನ್ಯ ರಾಜ್ಯಗಳ ಜನರ ಮೇಲೆ ನಡೆದ ಸರಣಿ ದಾಳಿಗಳ ಬಗ್ಗೆ ಕಳವಳ ವ್ಯಕ್ತಪಡಿಸಿ 2015ರಲ್ಲಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ಈ ಅಭಿಪ್ರಾಯ ವ್ಯಕ್ತಪಡಿಸಿದೆ.</p>.<p>ಈ ವಿಚಾರಕ್ಕೆ ಸಂಬಂಧಿಸಿ ಸಮಿತಿಯನ್ನು ರಚಿಸುವಂತೆ ಮತ್ತು ಜನಾಂಗೀಯ ತಾರತಮ್ಯ, ಹಿಂಸಾಚಾರ ಮತ್ತು ದೌರ್ಜನ್ಯಗಳಿಗೆ ಸಂಬಂಧಿಸಿ ಕಠಿಣ ಕ್ರಮ ಕೈಗೊಳ್ಳುವ ಹಾಗೂ ಜನಾಂಗೀಯ ದ್ವೇಷದ ಅಪರಾಧಗಳ ನಿಗ್ರಹಕ್ಕೆ ಸಲಹೆ ನೀಡುವ ಅಧಿಕಾರವನ್ನು ಸಮಿತಿಗೆ ನೀಡುವಂತೆ ನ್ಯಾಯಾಲಯವು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.</p>.<p>‘ಲುಂಗಿ ಧರಿಸಿದ ಕಾರಣಕ್ಕೆ ಕೇರಳದ ವ್ಯಕ್ತಿಗೆ ದೆಹಲಿಯಲ್ಲಿ ಅಪಹಾಸ್ಯ ಮಾಡಿರುವ ಸುದ್ದಿಯನ್ನು ನಾವು ಇತ್ತೀಚೆಗೆ ಓದಿದ್ದೇವೆ. ಜನರು ಸಾಮರಸ್ಯದಿಂದ ಬದುಕುತ್ತಿರುವ ಈ ದೇಶದಲ್ಲಿ ಇದು ಸ್ವೀಕಾರಾರ್ಹವಲ್ಲ. ಈ ಬಗ್ಗೆ ನೀವು ಗಮನಹರಿಸಲೇಬೇಕು’ ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ ನಟರಾಜ್ ಅವರಿಗೆ ನ್ಯಾಯಾಲಯ ಸೂಚಿಸಿದೆ.</p>.<p>ಈಗಾಗಲೇ ಸಮಿತಿಯನ್ನು ರಚಿಸಲಾಗಿದೆ ಎಂದು ಸಾಲಿಸಿಟರ್ ಜನರಲ್ ಉತ್ತರಕ್ಕೆ ಪ್ರತಿಕ್ರಿಯಿಸಿದ ಅರ್ಜಿದಾರರ ಪರ ವಕೀಲರು ಸಮಿತಿಯ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಹಿಂದಿ ಮಾತನಾಡುವಂತೆ ಒತ್ತಾಯಿಸಿ ಕೇರಳದ ಇಬ್ಬರು ವಿದ್ಯಾರ್ಥಿಗಳ ಮೇಲೆ ದೆಹಲಿಯ ಸ್ಥಳೀಯರು ಮತ್ತು ಪೊಲೀಸರು ಹಲ್ಲೆ ನಡೆಸಿದ್ದಾರೆ ಎನ್ನಲಾದ ಪ್ರಕರಣದ ಬಗ್ಗೆ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ‘ನಾವೆಲ್ಲ ಒಂದೇ ದೇಶದವರು’ ಎಂದು ಹೇಳಿದೆ.</p>.<p>‘ದೇಶದೊಳಗಿನ ಜನರನ್ನು ಸಂಸ್ಕೃತಿ ಮತ್ತು ಜನಾಂಗೀಯ ಭಿನ್ನತೆಯ ಕಾರಣಕ್ಕಾಗಿ ಗುರಿಯಾಗಿಸುತ್ತಿರುವುದು ದುಃಖಕರ’ ಎಂದು ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಅಲೋಕ್ ಅರಾಧೆ ಅವರ ಪೀಠ ಬೇಸರ ವ್ಯಕ್ತಪಡಿಸಿದೆ.</p>.<p>ದೆಹಲಿ ವಿಶ್ವವಿದ್ಯಾಲಯದ ಜಾಕೀರ್ ಹುಸೇನ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿ, ಹಿಂದಿ ಭಾಷೆಯಲ್ಲಿ ಮಾತನಾಡುವಂತೆ ಬಲವಂತಪಡಿಸಲಾಗಿದೆ ಮತ್ತು ಅವರ ಸಾಂಪ್ರದಾಯಿಕ ಉಡುಗೆ(ಲುಂಗಿ) ಬಗ್ಗೆ ಅಪಹಾಸ್ಯ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.</p>.<p>ಅರುಣಾಚಲ ಪ್ರದೇಶದ ವಿದ್ಯಾರ್ಥಿಯು ದೆಹಲಿಯಲ್ಲಿ ಹತ್ಯೆಯಾಗಿರುವ ಪ್ರಕರಣ ಸೇರಿದಂತೆ ಈಶಾನ್ಯ ರಾಜ್ಯಗಳ ಜನರ ಮೇಲೆ ನಡೆದ ಸರಣಿ ದಾಳಿಗಳ ಬಗ್ಗೆ ಕಳವಳ ವ್ಯಕ್ತಪಡಿಸಿ 2015ರಲ್ಲಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ಈ ಅಭಿಪ್ರಾಯ ವ್ಯಕ್ತಪಡಿಸಿದೆ.</p>.<p>ಈ ವಿಚಾರಕ್ಕೆ ಸಂಬಂಧಿಸಿ ಸಮಿತಿಯನ್ನು ರಚಿಸುವಂತೆ ಮತ್ತು ಜನಾಂಗೀಯ ತಾರತಮ್ಯ, ಹಿಂಸಾಚಾರ ಮತ್ತು ದೌರ್ಜನ್ಯಗಳಿಗೆ ಸಂಬಂಧಿಸಿ ಕಠಿಣ ಕ್ರಮ ಕೈಗೊಳ್ಳುವ ಹಾಗೂ ಜನಾಂಗೀಯ ದ್ವೇಷದ ಅಪರಾಧಗಳ ನಿಗ್ರಹಕ್ಕೆ ಸಲಹೆ ನೀಡುವ ಅಧಿಕಾರವನ್ನು ಸಮಿತಿಗೆ ನೀಡುವಂತೆ ನ್ಯಾಯಾಲಯವು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.</p>.<p>‘ಲುಂಗಿ ಧರಿಸಿದ ಕಾರಣಕ್ಕೆ ಕೇರಳದ ವ್ಯಕ್ತಿಗೆ ದೆಹಲಿಯಲ್ಲಿ ಅಪಹಾಸ್ಯ ಮಾಡಿರುವ ಸುದ್ದಿಯನ್ನು ನಾವು ಇತ್ತೀಚೆಗೆ ಓದಿದ್ದೇವೆ. ಜನರು ಸಾಮರಸ್ಯದಿಂದ ಬದುಕುತ್ತಿರುವ ಈ ದೇಶದಲ್ಲಿ ಇದು ಸ್ವೀಕಾರಾರ್ಹವಲ್ಲ. ಈ ಬಗ್ಗೆ ನೀವು ಗಮನಹರಿಸಲೇಬೇಕು’ ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ ನಟರಾಜ್ ಅವರಿಗೆ ನ್ಯಾಯಾಲಯ ಸೂಚಿಸಿದೆ.</p>.<p>ಈಗಾಗಲೇ ಸಮಿತಿಯನ್ನು ರಚಿಸಲಾಗಿದೆ ಎಂದು ಸಾಲಿಸಿಟರ್ ಜನರಲ್ ಉತ್ತರಕ್ಕೆ ಪ್ರತಿಕ್ರಿಯಿಸಿದ ಅರ್ಜಿದಾರರ ಪರ ವಕೀಲರು ಸಮಿತಿಯ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>