<p><strong>ನವದೆಹಲಿ:</strong> ಉದ್ಯೋಗಕ್ಕಾಗಿ ಭೂಮಿ ಹಗರಣ ಸಂಬಂಧ ಆರ್ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಹಾಗೂ ಅವರ ಕುಟುಂಬ ಸದಸ್ಯರ ಮೇಲೆ ಸಿಬಿಐ ದಾಖಲಿಸಿರುವ ಎಫ್ಐಆರ್ ರದ್ದು ಮಾಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.</p>.ಉದ್ಯೋಗಕ್ಕಾಗಿ ಭೂಮಿ ಹಗರಣ: ಲಾಲೂ, ರಾಬ್ಡಿ ವಿರುದ್ಧ ದೋಷಾರೋಪ.<p>ನ್ಯಾಯಮೂರ್ತಿಗಳಾದ ಎಂ. ಎಂ. ಸುಂದರೇಶ್ ಮತ್ತು ಎನ್. ಕೋಟೀಶ್ವರ್ ಸಿಂಗ್ ಅವರಿದ್ದ ಪೀಠವು, ಕೆಳ ನ್ಯಾಯಾಲಯದ ವೇಳೆ ವಿಚಾರಣೆಗೆ ಖುದ್ದು ಹಾಜರಾಗುವುದರಿಂದ 77 ವರ್ಷದ ಬಿಹಾರದ ಮಾಜಿ ಮುಖ್ಯಮಂತ್ರಿಗೆ ವಿನಾಯಿತಿ ನೀಡಿದೆ.</p><p>ಈ ಪ್ರಕರಣದಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17A ಅನ್ವಯದ ಬಗ್ಗೆ ಪ್ರಶ್ನಿಸಲು ಇದೇ ವೇಳೆ ಕೋರ್ಟ್ ಅನುಮತಿ ನೀಡಿದೆ.</p><p>ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17A ಅಡಿಯಲ್ಲಿ ದೂರು ದಾಖಲಿಸಲು ಪೂರ್ವನುಮತಿ ಪಡೆಯದ ಕಾರಣ ಎಫ್ಐಆರ್ ತಿರಸ್ಕರಿಸಬೇಕು ಎಂದು ಲಾಲೂ ವಾದಿಸಿದ್ದರು. ಮಾರ್ಚ್ 24ರಂದು ಈ ವಾದವನ್ನು ದೆಹಲಿ ಹೈಕೋರ್ಟ್ ಕೂಡ ತಿರಸ್ಕರಿಸಿತ್ತು.</p>.ಸಂಕ್ರಾಂತಿ ಹಬ್ಬ: ಪಕ್ಷದಿಂದ ಉಚ್ಚಾಟನೆಗೊಂಡಿದ್ದ ಮಗನ ಮನೆಗೆ ಲಾಲೂ ಪ್ರಸಾದ್ ಭೇಟಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಉದ್ಯೋಗಕ್ಕಾಗಿ ಭೂಮಿ ಹಗರಣ ಸಂಬಂಧ ಆರ್ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಹಾಗೂ ಅವರ ಕುಟುಂಬ ಸದಸ್ಯರ ಮೇಲೆ ಸಿಬಿಐ ದಾಖಲಿಸಿರುವ ಎಫ್ಐಆರ್ ರದ್ದು ಮಾಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.</p>.ಉದ್ಯೋಗಕ್ಕಾಗಿ ಭೂಮಿ ಹಗರಣ: ಲಾಲೂ, ರಾಬ್ಡಿ ವಿರುದ್ಧ ದೋಷಾರೋಪ.<p>ನ್ಯಾಯಮೂರ್ತಿಗಳಾದ ಎಂ. ಎಂ. ಸುಂದರೇಶ್ ಮತ್ತು ಎನ್. ಕೋಟೀಶ್ವರ್ ಸಿಂಗ್ ಅವರಿದ್ದ ಪೀಠವು, ಕೆಳ ನ್ಯಾಯಾಲಯದ ವೇಳೆ ವಿಚಾರಣೆಗೆ ಖುದ್ದು ಹಾಜರಾಗುವುದರಿಂದ 77 ವರ್ಷದ ಬಿಹಾರದ ಮಾಜಿ ಮುಖ್ಯಮಂತ್ರಿಗೆ ವಿನಾಯಿತಿ ನೀಡಿದೆ.</p><p>ಈ ಪ್ರಕರಣದಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17A ಅನ್ವಯದ ಬಗ್ಗೆ ಪ್ರಶ್ನಿಸಲು ಇದೇ ವೇಳೆ ಕೋರ್ಟ್ ಅನುಮತಿ ನೀಡಿದೆ.</p><p>ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17A ಅಡಿಯಲ್ಲಿ ದೂರು ದಾಖಲಿಸಲು ಪೂರ್ವನುಮತಿ ಪಡೆಯದ ಕಾರಣ ಎಫ್ಐಆರ್ ತಿರಸ್ಕರಿಸಬೇಕು ಎಂದು ಲಾಲೂ ವಾದಿಸಿದ್ದರು. ಮಾರ್ಚ್ 24ರಂದು ಈ ವಾದವನ್ನು ದೆಹಲಿ ಹೈಕೋರ್ಟ್ ಕೂಡ ತಿರಸ್ಕರಿಸಿತ್ತು.</p>.ಸಂಕ್ರಾಂತಿ ಹಬ್ಬ: ಪಕ್ಷದಿಂದ ಉಚ್ಚಾಟನೆಗೊಂಡಿದ್ದ ಮಗನ ಮನೆಗೆ ಲಾಲೂ ಪ್ರಸಾದ್ ಭೇಟಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>