<p><strong>ನವದೆಹಲಿ:</strong> ತಾವೇ ಅರ್ಜಿದಾರರಾಗಿದ್ದ ವಕೀಲರೊಬ್ಬರಿಗೆ ₹5 ಲಕ್ಷ ದಂಡ ವಿಧಿಸಿರುವ ಸುಪ್ರೀಂ ಕೋರ್ಟ್, ‘ನೀವು ನ್ಯಾಯಾಲಯದ ವಾತಾವರಣ ಹಾಳು ಮಾಡಿದ್ದೀರಿ’ ಎಂದು ಅಸಮಾಧಾನ ವ್ಯಕ್ತಪಡಿಸಿದ ಘಟನೆ ಮಂಗಳವಾರ ನಡೆದಿದೆ.</p><p>ನ್ಯಾ. ವಿಕ್ರಂ ನಾಥ್ ಮತ್ತು ನ್ಯಾ. ಸಂದೀಪ್ ಮೆಹ್ತಾ ಅವರಿದ್ದ ಪೀಠದ ಎದುರು ವಕೀಲ ಸಂದೀಪ್ ತೊಡಿ ಎಂಬುವವರು ತಮ್ಮದೇ ಕೌಟುಂಬಿಕ ಕಲಹದಲ್ಲಿ ವ್ಯಕ್ತಿಯೊಬ್ಬರಿಗೆ ಮುಂಬೈನ ಕೌಟುಂಬಿಕ ನ್ಯಾಯಾಲಯ ನೀಡಿದ್ದ ಜಾಮೀನಿಗೆ ತಡೆಯಾಜ್ಞೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು.</p><p>ಅರ್ಜಿಯಲ್ಲಿ ಕೇಂದ್ರ ಸರ್ಕಾರ, ಮುಂಬೈನ ಕೌಟುಂಬಿಕ ನ್ಯಾಯಾಲಯ ಮತ್ತು ಬಾಂಬೆ ಹೈಕೋರ್ಟ್ ಅನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿತ್ತು.</p><p>‘ನೀವು ನ್ಯಾಯಾಲಯದ ವಾತಾವರಣ ಹಾಳು ಮಾಡಿದ್ದೀರಿ. ವಿವೇಕ ಇರುವ ಯಾವುದೇ ವಕೀಲರು ಸಂವಿಧಾನದ 32ನೇ ವಿಧಿಯಡಿ ಇಂಥ ಕ್ಲುಲ್ಲಕ ಅರ್ಜಿಯನ್ನು ಸಲ್ಲಿಸುವುದಿಲ್ಲ’ ಎಂದು ಅರ್ಜಿಯ ವಿಚಾರಣೆ ನಡೆಸಿದ ಪೀಠದಲ್ಲಿದ್ದ ನ್ಯಾ. ವಿಕ್ರಂ ನಾಥ್ ಅಸಮಾಧಾನ ವ್ಯಕ್ತಪಡಿಸಿದರು.</p><p>ವ್ಯಕ್ತಿಗಳು ತಮ್ಮ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿದರೆ ಅದನ್ನು ಜಾರಿಗೊಳಿಸಲು ಸುಪ್ರೀಂ ಕೋರ್ಟ್ ಸಂಪರ್ಕಿಸಬಹುದು ಎಂದು ಸಾಂವಿಧಾನಿಕ ಹಕ್ಕುಗಳನ್ನು ಖಾತ್ರಿಪಡಿಸುವ 32ನೇ ವಿಧಿಯಲ್ಲಿ ಹೇಳಲಾಗಿದೆ.</p><p>ಅರ್ಜಿ ಸಲ್ಲಿಸಿದ್ದನ್ನು ಗಂಭೀರವಾಗಿ ಪರಿಗಣಿಸಿದ ಸುಪ್ರೀಂ ಕೋರ್ಟ್, ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರಕ್ಕೆ ನಾಲ್ಕು ವಾರದೊಳಗೆ ₹5 ಲಕ್ಷ ದಂಡ ಭರಿಸುವಂತೆ ವಕೀಲ ತೋಡಿಗೆ ನಿರ್ದೇಶಿಸಿತು. ಜತೆಗೆ ಹಣ ಭರಿಸಲಾಗಿದೆಯೇ ಎಂದು ನ್ಯಾಯಾಲಯಕ್ಕೆ ಮಾಹಿತಿ ಸಲ್ಲಿಸಲು ಆರು ವಾರಗಳ ಗಡುವನ್ನು ನೀಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ತಾವೇ ಅರ್ಜಿದಾರರಾಗಿದ್ದ ವಕೀಲರೊಬ್ಬರಿಗೆ ₹5 ಲಕ್ಷ ದಂಡ ವಿಧಿಸಿರುವ ಸುಪ್ರೀಂ ಕೋರ್ಟ್, ‘ನೀವು ನ್ಯಾಯಾಲಯದ ವಾತಾವರಣ ಹಾಳು ಮಾಡಿದ್ದೀರಿ’ ಎಂದು ಅಸಮಾಧಾನ ವ್ಯಕ್ತಪಡಿಸಿದ ಘಟನೆ ಮಂಗಳವಾರ ನಡೆದಿದೆ.</p><p>ನ್ಯಾ. ವಿಕ್ರಂ ನಾಥ್ ಮತ್ತು ನ್ಯಾ. ಸಂದೀಪ್ ಮೆಹ್ತಾ ಅವರಿದ್ದ ಪೀಠದ ಎದುರು ವಕೀಲ ಸಂದೀಪ್ ತೊಡಿ ಎಂಬುವವರು ತಮ್ಮದೇ ಕೌಟುಂಬಿಕ ಕಲಹದಲ್ಲಿ ವ್ಯಕ್ತಿಯೊಬ್ಬರಿಗೆ ಮುಂಬೈನ ಕೌಟುಂಬಿಕ ನ್ಯಾಯಾಲಯ ನೀಡಿದ್ದ ಜಾಮೀನಿಗೆ ತಡೆಯಾಜ್ಞೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು.</p><p>ಅರ್ಜಿಯಲ್ಲಿ ಕೇಂದ್ರ ಸರ್ಕಾರ, ಮುಂಬೈನ ಕೌಟುಂಬಿಕ ನ್ಯಾಯಾಲಯ ಮತ್ತು ಬಾಂಬೆ ಹೈಕೋರ್ಟ್ ಅನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿತ್ತು.</p><p>‘ನೀವು ನ್ಯಾಯಾಲಯದ ವಾತಾವರಣ ಹಾಳು ಮಾಡಿದ್ದೀರಿ. ವಿವೇಕ ಇರುವ ಯಾವುದೇ ವಕೀಲರು ಸಂವಿಧಾನದ 32ನೇ ವಿಧಿಯಡಿ ಇಂಥ ಕ್ಲುಲ್ಲಕ ಅರ್ಜಿಯನ್ನು ಸಲ್ಲಿಸುವುದಿಲ್ಲ’ ಎಂದು ಅರ್ಜಿಯ ವಿಚಾರಣೆ ನಡೆಸಿದ ಪೀಠದಲ್ಲಿದ್ದ ನ್ಯಾ. ವಿಕ್ರಂ ನಾಥ್ ಅಸಮಾಧಾನ ವ್ಯಕ್ತಪಡಿಸಿದರು.</p><p>ವ್ಯಕ್ತಿಗಳು ತಮ್ಮ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿದರೆ ಅದನ್ನು ಜಾರಿಗೊಳಿಸಲು ಸುಪ್ರೀಂ ಕೋರ್ಟ್ ಸಂಪರ್ಕಿಸಬಹುದು ಎಂದು ಸಾಂವಿಧಾನಿಕ ಹಕ್ಕುಗಳನ್ನು ಖಾತ್ರಿಪಡಿಸುವ 32ನೇ ವಿಧಿಯಲ್ಲಿ ಹೇಳಲಾಗಿದೆ.</p><p>ಅರ್ಜಿ ಸಲ್ಲಿಸಿದ್ದನ್ನು ಗಂಭೀರವಾಗಿ ಪರಿಗಣಿಸಿದ ಸುಪ್ರೀಂ ಕೋರ್ಟ್, ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರಕ್ಕೆ ನಾಲ್ಕು ವಾರದೊಳಗೆ ₹5 ಲಕ್ಷ ದಂಡ ಭರಿಸುವಂತೆ ವಕೀಲ ತೋಡಿಗೆ ನಿರ್ದೇಶಿಸಿತು. ಜತೆಗೆ ಹಣ ಭರಿಸಲಾಗಿದೆಯೇ ಎಂದು ನ್ಯಾಯಾಲಯಕ್ಕೆ ಮಾಹಿತಿ ಸಲ್ಲಿಸಲು ಆರು ವಾರಗಳ ಗಡುವನ್ನು ನೀಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>