<p><strong>ನವದೆಹಲಿ:</strong> ರಾಷ್ಟ್ರೀಯ ಉದ್ಯಾನಗಳು ಮತ್ತು ವನ್ಯಜೀವಿ ಅಭಯಾರಣ್ಯಗಳ ಒಂದು ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ಚಟುವಟಿಕೆ ನಡೆಸುವುದನ್ನು ಸುಪ್ರೀಂ ಕೋರ್ಟ್ ಗುರುವಾರ ನಿಷೇಧಿಸಿದೆ.</p>.<p>‘ರಾಷ್ಟ್ರೀಯ ಉದ್ಯಾನಗಳು ಹಾಗೂ ಅಭಯಾರಣ್ಯಗಳ ಒಳಗೆ ಮತ್ತು ಅಂತಹ ಸಂರಕ್ಷಿತ ಪ್ರದೇಶಗಳ ಗಡಿಯಿಂದ ಒಂದು ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆಯನ್ನು ಅನುಮತಿಸಬಾರದು ಎಂದು ನಾವು ನಿರ್ದೇಶಿಸುತ್ತೇವೆ’ ಎಂಬುದಾಗಿ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಕೆ.ವಿನೋದ ಚಂದ್ರನ್ ಅವರ ಪೀಠ ಹೇಳಿದೆ.</p>.<p>‘ಸಂರಕ್ಷಿತ ಪ್ರದೇಶದ ಒಂದು ಕಿ.ಮೀ ವ್ಯಾಪ್ತಿಯೊಳಗೆ ಗಣಿಗಾರಿಕೆ ಚಟುವಟಿಕೆಗಳು ವನ್ಯಜೀವಿಗಳಿಗೆ ಅಪಾಯಕಾರಿ ಎಂಬುದನ್ನು ಈ ನ್ಯಾಯಾಲಯ ಮನಗಂಡಿದೆ. ಈ ಹಿಂದೆ ಗೋವಾ ಫೌಂಡೇಶನ್ ಪ್ರಕರಣದಲ್ಲಿ, ಗೋವಾ ರಾಜ್ಯಕ್ಕೆ ಸಂಬಂಧಿಸಿದಂತೆ ಇದೇ ರೀತಿಯ ನಿರ್ದೇಶನಗಳನ್ನು ನೀಡಲಾಗಿದೆ. ಇದೀಗ ಇಡೀ ದೇಶಕ್ಕೆ ಅನ್ವಯವಾಗುವಂತೆ ಅಂತಹ ನಿರ್ದೇಶನ ನೀಡುತ್ತಿದ್ದೇವೆ’ ಎಂದಿತು.</p>.<p class="bodytext">ಜಾರ್ಖಂಡ್ನ ಸಾರಂಡಾ ಅಭಯಾರಣ್ಯ ಮತ್ತು ಸಾಸಂಗದಾಬುರು ಅರಣ್ಯ ಪ್ರದೇಶಗಳನ್ನು ಮೀಸಲು ಅರಣ್ಯ ಪ್ರದೇಶವಾಗಿ ಘೋಷಿಸುವ ಅಧಿಸೂಚನೆಗೆ ಸಂಬಂಧಿಸಿದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ಈ ಪ್ರದೇಶಗಳನ್ನು ವನ್ಯಜೀವಿ ಅಭಯಾರಣ್ಯವೆಂದು ಘೋಷಿಸುವಂತೆ ಸುಪ್ರೀಂ ಕೋರ್ಟ್, ಜಾರ್ಖಂಡ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ.</p>.<p>ಅರಣ್ಯ ಹಕ್ಕುಗಳ ಕಾಯ್ದೆಯಡಿ ಈ ಪ್ರದೇಶದ ಬುಡಕಟ್ಟು ಜನರು ಮತ್ತು ಅರಣ್ಯವಾಸಿಗಳ ಹಕ್ಕುಗಳನ್ನು ರಕ್ಷಿಸಬೇಕು ಎಂದು ಸ್ಪಷ್ಟಪಡಿಸಿದ ನ್ಯಾಯಾಲಯ, ಈ ಬಗ್ಗೆ ವ್ಯಾಪಕ ಪ್ರಚಾರ ನೀಡುವಂತೆ ಜಾರ್ಖಂಡ್ ಸರ್ಕಾರಕ್ಕೆ ಸೂಚಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರಾಷ್ಟ್ರೀಯ ಉದ್ಯಾನಗಳು ಮತ್ತು ವನ್ಯಜೀವಿ ಅಭಯಾರಣ್ಯಗಳ ಒಂದು ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ಚಟುವಟಿಕೆ ನಡೆಸುವುದನ್ನು ಸುಪ್ರೀಂ ಕೋರ್ಟ್ ಗುರುವಾರ ನಿಷೇಧಿಸಿದೆ.</p>.<p>‘ರಾಷ್ಟ್ರೀಯ ಉದ್ಯಾನಗಳು ಹಾಗೂ ಅಭಯಾರಣ್ಯಗಳ ಒಳಗೆ ಮತ್ತು ಅಂತಹ ಸಂರಕ್ಷಿತ ಪ್ರದೇಶಗಳ ಗಡಿಯಿಂದ ಒಂದು ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆಯನ್ನು ಅನುಮತಿಸಬಾರದು ಎಂದು ನಾವು ನಿರ್ದೇಶಿಸುತ್ತೇವೆ’ ಎಂಬುದಾಗಿ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಕೆ.ವಿನೋದ ಚಂದ್ರನ್ ಅವರ ಪೀಠ ಹೇಳಿದೆ.</p>.<p>‘ಸಂರಕ್ಷಿತ ಪ್ರದೇಶದ ಒಂದು ಕಿ.ಮೀ ವ್ಯಾಪ್ತಿಯೊಳಗೆ ಗಣಿಗಾರಿಕೆ ಚಟುವಟಿಕೆಗಳು ವನ್ಯಜೀವಿಗಳಿಗೆ ಅಪಾಯಕಾರಿ ಎಂಬುದನ್ನು ಈ ನ್ಯಾಯಾಲಯ ಮನಗಂಡಿದೆ. ಈ ಹಿಂದೆ ಗೋವಾ ಫೌಂಡೇಶನ್ ಪ್ರಕರಣದಲ್ಲಿ, ಗೋವಾ ರಾಜ್ಯಕ್ಕೆ ಸಂಬಂಧಿಸಿದಂತೆ ಇದೇ ರೀತಿಯ ನಿರ್ದೇಶನಗಳನ್ನು ನೀಡಲಾಗಿದೆ. ಇದೀಗ ಇಡೀ ದೇಶಕ್ಕೆ ಅನ್ವಯವಾಗುವಂತೆ ಅಂತಹ ನಿರ್ದೇಶನ ನೀಡುತ್ತಿದ್ದೇವೆ’ ಎಂದಿತು.</p>.<p class="bodytext">ಜಾರ್ಖಂಡ್ನ ಸಾರಂಡಾ ಅಭಯಾರಣ್ಯ ಮತ್ತು ಸಾಸಂಗದಾಬುರು ಅರಣ್ಯ ಪ್ರದೇಶಗಳನ್ನು ಮೀಸಲು ಅರಣ್ಯ ಪ್ರದೇಶವಾಗಿ ಘೋಷಿಸುವ ಅಧಿಸೂಚನೆಗೆ ಸಂಬಂಧಿಸಿದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ಈ ಪ್ರದೇಶಗಳನ್ನು ವನ್ಯಜೀವಿ ಅಭಯಾರಣ್ಯವೆಂದು ಘೋಷಿಸುವಂತೆ ಸುಪ್ರೀಂ ಕೋರ್ಟ್, ಜಾರ್ಖಂಡ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ.</p>.<p>ಅರಣ್ಯ ಹಕ್ಕುಗಳ ಕಾಯ್ದೆಯಡಿ ಈ ಪ್ರದೇಶದ ಬುಡಕಟ್ಟು ಜನರು ಮತ್ತು ಅರಣ್ಯವಾಸಿಗಳ ಹಕ್ಕುಗಳನ್ನು ರಕ್ಷಿಸಬೇಕು ಎಂದು ಸ್ಪಷ್ಟಪಡಿಸಿದ ನ್ಯಾಯಾಲಯ, ಈ ಬಗ್ಗೆ ವ್ಯಾಪಕ ಪ್ರಚಾರ ನೀಡುವಂತೆ ಜಾರ್ಖಂಡ್ ಸರ್ಕಾರಕ್ಕೆ ಸೂಚಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>