<p><strong>ನವದೆಹಲಿ</strong>: ಎನ್ಸಿಇಆರ್ಟಿ 8ನೇ ತರಗತಿಯ ಪಠ್ಯದಲ್ಲಿ 'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ವಿಷಯವನ್ನು ಸೇರಿಸಿರುವ ಕುರಿತು ಸ್ವಯಂಪ್ರೇರಿತ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಬುಧವಾರ ನಿರ್ಧರಿಸಿದೆ.</p><p>ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಪರಿಷತ್ತಿನ (ಎನ್ಸಿಇಆರ್ಟಿ) ಈ ಕ್ರಮವು ನ್ಯಾಯಾಂಗ ವ್ಯವಸ್ಥೆಗೆ ಕಳಂಕ ತರುವ 'ಉದ್ದೇಶಪೂರ್ವಕ' ಹಾಗೂ 'ಲೆಕ್ಕಾಚಾರದ' ಕ್ರಮದಂತೆ ತೋರುತ್ತದೆ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠವು ಹೇಳಿದೆ.</p><p>ಈ ವಿಚಾರವನ್ನು ಸ್ವಯಂಪ್ರೇರಿತವಾಗಿ ವಿಚಾರಣೆಗೆ ಪರಿಗಣಿಸುವಂತೆ ಹಿರಿಯ ವಕೀಲರಾದ ಕಪಿಲ್ ಸಿಬಲ್ ಮತ್ತು ಎ.ಎಂ. ಸಿಂಘ್ವಿ ಅವರು ನ್ಯಾಯಾಲಯವನ್ನು ಒತ್ತಾಯಿಸಿದರು.</p><p>ನ್ಯಾಯಾಂಗವೇ ಭ್ರಷ್ಟವಾಗಿದೆ ಎಂಬುದಾಗಿ 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋಧಿಸುತ್ತಿರುವುದು ಬೇಸರ ತಂದಿದೆ ಎಂದು ಸಿಬಲ್ ಹೇಳಿದ್ದಾರೆ.</p><p>ಈ ಸಂಬಂಧ, ಪರಿಷ್ಕೃತ ಪಠ್ಯದ ಬಗ್ಗೆ ನ್ಯಾಯಪೀಠವು ಗಂಭೀರ ಆಕ್ಷೇಪ ವ್ಯಕ್ತಪಡಿಸಿದೆ.</p><p>'ಸಂಸ್ಥೆಯನ್ನು ಮಾನಹಾನಿ ಮಾಡಲು ಯಾರಿಗೂ ಅವಕಾಶ ನೀಡುವುದಿಲ್ಲ. ಇಂತಹ ಪ್ರಯತ್ನಗಳನ್ನು ಹೇಗೆ ಎದುರಿಸಬೇಕು ಎಂಬುದು ತಿಳಿದಿದೆ' ಎಂದು ನ್ಯಾ. ಸೂರ್ಯಕಾಂತ್ ಹೇಳಿದ್ದಾರೆ.</p><p><strong>ಪರಿಷ್ಕೃತ ಪಠ್ಯದಲ್ಲಿ ಏನಿದೆ?<br></strong>ಎನ್ಸಿಇಆರ್ಟಿಯು 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿ 'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಹಾಗೂ 'ಸಾಕಷ್ಟು ಪ್ರಕರಣಗಳು ಬಾಕಿ' ವಿಷಯಗಳನ್ನು ಸೇರಿಸಿದೆ. 'ಸಮಾಜದಲ್ಲಿ ನ್ಯಾಯಾಂಗದ ಪಾತ್ರ' ಎಂಬ ಶೀರ್ಷಿಕೆಯ ಅಧ್ಯಾಯದಲ್ಲಿ ಈ ವಿಚಾರಗಳು ಇವೆ.</p><p>'ನ್ಯಾಯದಾನ ವಿಳಂಬವಾದರೆ, ನ್ಯಾಯ ನಿರಾಕರಿಸಿದಂತೆ' ಹಾಗೂ 'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಎಂಬ ಎರಡು ಭಾಗಗಳಲ್ಲಿ, ಭ್ರಷ್ಟಾಚಾರ ಮತ್ತು ಪ್ರಕರಣಗಳ ಬಾಕಿ ಸೇರಿದಂತೆ ನ್ಯಾಯಾಂಗ ಎದುರಿಸುತ್ತಿರುವ ಸವಾಲುಗಳನ್ನು ವಿವರಿಸಲಾಗಿದೆ.</p><p>ಪರಿಷ್ಕರಣೆಗೂ ಮುನ್ನ, ನ್ಯಾಯಾಂಗದ ರಚನೆ ಹಾಗೂ ಪಾತ್ರದ ಕುರಿತ ವಿಚಾರಗಳು ಪಠ್ಯದಲ್ಲಿದ್ದವು.</p>.ಓಎಂಸಿ ಗಣಿ ಅಕ್ರಮ: ಗಡಿ ಗುರುತಿಗೆ ಮತ್ತೆ ಆರು ವಾರಗಳ ಅವಕಾಶ ನೀಡಿದ ಸುಪ್ರೀಂ.ನೀಟ್–ಪಿ.ಜಿ ಕಟ್ ಆಫ್ ಕಡಿತ; ಅವಲೋಕಿಸಬೇಕಿದೆ: ಸುಪ್ರೀಂ ಕೋರ್ಟ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಎನ್ಸಿಇಆರ್ಟಿ 8ನೇ ತರಗತಿಯ ಪಠ್ಯದಲ್ಲಿ 'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ವಿಷಯವನ್ನು ಸೇರಿಸಿರುವ ಕುರಿತು ಸ್ವಯಂಪ್ರೇರಿತ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಬುಧವಾರ ನಿರ್ಧರಿಸಿದೆ.</p><p>ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಪರಿಷತ್ತಿನ (ಎನ್ಸಿಇಆರ್ಟಿ) ಈ ಕ್ರಮವು ನ್ಯಾಯಾಂಗ ವ್ಯವಸ್ಥೆಗೆ ಕಳಂಕ ತರುವ 'ಉದ್ದೇಶಪೂರ್ವಕ' ಹಾಗೂ 'ಲೆಕ್ಕಾಚಾರದ' ಕ್ರಮದಂತೆ ತೋರುತ್ತದೆ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠವು ಹೇಳಿದೆ.</p><p>ಈ ವಿಚಾರವನ್ನು ಸ್ವಯಂಪ್ರೇರಿತವಾಗಿ ವಿಚಾರಣೆಗೆ ಪರಿಗಣಿಸುವಂತೆ ಹಿರಿಯ ವಕೀಲರಾದ ಕಪಿಲ್ ಸಿಬಲ್ ಮತ್ತು ಎ.ಎಂ. ಸಿಂಘ್ವಿ ಅವರು ನ್ಯಾಯಾಲಯವನ್ನು ಒತ್ತಾಯಿಸಿದರು.</p><p>ನ್ಯಾಯಾಂಗವೇ ಭ್ರಷ್ಟವಾಗಿದೆ ಎಂಬುದಾಗಿ 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋಧಿಸುತ್ತಿರುವುದು ಬೇಸರ ತಂದಿದೆ ಎಂದು ಸಿಬಲ್ ಹೇಳಿದ್ದಾರೆ.</p><p>ಈ ಸಂಬಂಧ, ಪರಿಷ್ಕೃತ ಪಠ್ಯದ ಬಗ್ಗೆ ನ್ಯಾಯಪೀಠವು ಗಂಭೀರ ಆಕ್ಷೇಪ ವ್ಯಕ್ತಪಡಿಸಿದೆ.</p><p>'ಸಂಸ್ಥೆಯನ್ನು ಮಾನಹಾನಿ ಮಾಡಲು ಯಾರಿಗೂ ಅವಕಾಶ ನೀಡುವುದಿಲ್ಲ. ಇಂತಹ ಪ್ರಯತ್ನಗಳನ್ನು ಹೇಗೆ ಎದುರಿಸಬೇಕು ಎಂಬುದು ತಿಳಿದಿದೆ' ಎಂದು ನ್ಯಾ. ಸೂರ್ಯಕಾಂತ್ ಹೇಳಿದ್ದಾರೆ.</p><p><strong>ಪರಿಷ್ಕೃತ ಪಠ್ಯದಲ್ಲಿ ಏನಿದೆ?<br></strong>ಎನ್ಸಿಇಆರ್ಟಿಯು 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿ 'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಹಾಗೂ 'ಸಾಕಷ್ಟು ಪ್ರಕರಣಗಳು ಬಾಕಿ' ವಿಷಯಗಳನ್ನು ಸೇರಿಸಿದೆ. 'ಸಮಾಜದಲ್ಲಿ ನ್ಯಾಯಾಂಗದ ಪಾತ್ರ' ಎಂಬ ಶೀರ್ಷಿಕೆಯ ಅಧ್ಯಾಯದಲ್ಲಿ ಈ ವಿಚಾರಗಳು ಇವೆ.</p><p>'ನ್ಯಾಯದಾನ ವಿಳಂಬವಾದರೆ, ನ್ಯಾಯ ನಿರಾಕರಿಸಿದಂತೆ' ಹಾಗೂ 'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಎಂಬ ಎರಡು ಭಾಗಗಳಲ್ಲಿ, ಭ್ರಷ್ಟಾಚಾರ ಮತ್ತು ಪ್ರಕರಣಗಳ ಬಾಕಿ ಸೇರಿದಂತೆ ನ್ಯಾಯಾಂಗ ಎದುರಿಸುತ್ತಿರುವ ಸವಾಲುಗಳನ್ನು ವಿವರಿಸಲಾಗಿದೆ.</p><p>ಪರಿಷ್ಕರಣೆಗೂ ಮುನ್ನ, ನ್ಯಾಯಾಂಗದ ರಚನೆ ಹಾಗೂ ಪಾತ್ರದ ಕುರಿತ ವಿಚಾರಗಳು ಪಠ್ಯದಲ್ಲಿದ್ದವು.</p>.ಓಎಂಸಿ ಗಣಿ ಅಕ್ರಮ: ಗಡಿ ಗುರುತಿಗೆ ಮತ್ತೆ ಆರು ವಾರಗಳ ಅವಕಾಶ ನೀಡಿದ ಸುಪ್ರೀಂ.ನೀಟ್–ಪಿ.ಜಿ ಕಟ್ ಆಫ್ ಕಡಿತ; ಅವಲೋಕಿಸಬೇಕಿದೆ: ಸುಪ್ರೀಂ ಕೋರ್ಟ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>