<p><strong>ನವದೆಹಲಿ:</strong> ಐ-ಪ್ಯಾಕ್ ಕಚೇರಿ ಮತ್ತು ಅದರ ನಿರ್ದೇಶಕರ ನಿವಾಸದ ಮೇಲೆ ಇ.ಡಿ ದಾಳಿ ನಡೆಸಿದ ಸಂದರ್ಭದಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಪಶ್ಚಿಮ ಬಂಗಾಳದ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಇಂದು (ಗುರುವಾರ) ನೋಟಿಸ್ ಜಾರಿಗೊಳಿಸಿದೆ.</p><p>ಇ.ಡಿ ತನಿಖೆಗೆ ಅಡ್ಡಿಪಡಿಸಿರುವುದು ತುಂಬಾ ಗಂಭೀರ ಎಂದು ಪರಿಗಣಿಸಿರುವ ಸುಪ್ರೀಂ ಕೋರ್ಟ್, ರಾಜ್ಯ ಸರ್ಕಾರ ಹಸ್ತಕ್ಷೇಪ ನಡೆಸಬಹುದೇ ಎಂಬುದರ ಕುರಿತು ಪರಿಶೀಲನೆ ನಡೆಸುವುದಾಗಿ ಒಪ್ಪಿಕೊಂಡಿದೆ. </p>.I-PAC Raids: ಮಮತಾ ಬ್ಯಾನರ್ಜಿ ಹಸ್ತಕ್ಷೇಪ ನಡೆಸಿರುವುದು ಆಘಾತಕಾರಿ ಎಂದ ಇ.ಡಿ.ಐ–ಪ್ಯಾಕ್ ಮೇಲಿನ ದಾಳಿ: ಏನನ್ನೂ ವಶಕ್ಕೆ ಪಡೆದಿಲ್ಲ ಎಂದ ಇ.ಡಿ.<p>ಇದೇ ಸಂದರ್ಭದಲ್ಲಿ ಪಶ್ಚಿಮ ಬಂಗಾಳದಲ್ಲಿ ಇ.ಡಿ ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಫ್ಐಆರ್ಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಅಲ್ಲದೆ ಸಿಸಿಟಿವಿ ದೃಶ್ಯಗಳನ್ನು ನಾಶಪಡಿಸದಂತೆ ಪೊಲೀಸರಿಗೆ ನಿರ್ದೇಶನ ನೀಡಿದೆ. </p><p>ಕಲ್ಲಿದ್ದಲು ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ 8ರಂದು ಸಾಲ್ಟ್ ಲೇಕ್ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್ ಕಚೇರಿ ಮತ್ತು ಅದರ ನಿರ್ದೇಶಕ ಪ್ರತೀಕ್ ಜೈನ್ ಮೇಲೆ ಇ.ಡಿ ದಾಳಿ ನಡೆಸಿತ್ತು. ಈ ಸಂದರ್ಭದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸ್ಥಳಕ್ಕೆ ಬಂದು ಕಡತಗಳನ್ನು ವಶಕ್ಕೆ ಪಡೆದಿದ್ದರು ಎಂದು ಆರೋಪಿಸಲಾಗಿದೆ. </p><p>ಸಿಬಿಐ ವಿಚಾರಣೆ ಕೋರಿ ಸುಪ್ರೀಂ ಕೋರ್ಟ್ಗೆ ಇ.ಡಿ ಅರ್ಜಿ ಸಲ್ಲಿಸಿತ್ತು. ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಹಾಗೂ ವಿಪುಲ್ ಪಂಚೋಲಿ ಒಳಗೊಂಡ ಪೀಠವು ಅರ್ಜಿಗಳ ವಿಚಾರಣೆ ನಡೆಸಿತು. </p><p>ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳ ಸರ್ಕಾರ, ಡಿಜಿಪಿ ರಾಜೀವ್ ಕುಮಾರ್ ಮತ್ತು ರಾಜ್ಯದ ಉನ್ನತ ಪೊಲೀಸ್ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. </p><p>ನೆಲದ ಕಾನೂನಿನ ಪಾಲನೆ, ತನಿಖಾ ಸಂಸ್ಥೆಗಳಿಗೆ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಅನುವು ಮಾಡುವುದು, ಅಪರಾಧಿಗಳಿಗೆ ರಕ್ಷಣೆ ನೀಡುವುದನ್ನು ತಪ್ಪಿಸುವ ಉದ್ದೇಶದಿಂದ ಪ್ರಕರಣದ ವಿಚಾರಣೆ ನಡೆಸುವುದು ಅನಿವಾರ್ಯ ಎಂದಿದೆ. </p><p>ಪ್ರಕರಣದ ಕುರಿತು ಮುಂದಿನ ವಿಚಾರಣೆಯನ್ನು ಫೆಬ್ರುವರಿ 3ಕ್ಕೆ ಮುಂದೂಡಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಐ-ಪ್ಯಾಕ್ ಕಚೇರಿ ಮತ್ತು ಅದರ ನಿರ್ದೇಶಕರ ನಿವಾಸದ ಮೇಲೆ ಇ.ಡಿ ದಾಳಿ ನಡೆಸಿದ ಸಂದರ್ಭದಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಪಶ್ಚಿಮ ಬಂಗಾಳದ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಇಂದು (ಗುರುವಾರ) ನೋಟಿಸ್ ಜಾರಿಗೊಳಿಸಿದೆ.</p><p>ಇ.ಡಿ ತನಿಖೆಗೆ ಅಡ್ಡಿಪಡಿಸಿರುವುದು ತುಂಬಾ ಗಂಭೀರ ಎಂದು ಪರಿಗಣಿಸಿರುವ ಸುಪ್ರೀಂ ಕೋರ್ಟ್, ರಾಜ್ಯ ಸರ್ಕಾರ ಹಸ್ತಕ್ಷೇಪ ನಡೆಸಬಹುದೇ ಎಂಬುದರ ಕುರಿತು ಪರಿಶೀಲನೆ ನಡೆಸುವುದಾಗಿ ಒಪ್ಪಿಕೊಂಡಿದೆ. </p>.I-PAC Raids: ಮಮತಾ ಬ್ಯಾನರ್ಜಿ ಹಸ್ತಕ್ಷೇಪ ನಡೆಸಿರುವುದು ಆಘಾತಕಾರಿ ಎಂದ ಇ.ಡಿ.ಐ–ಪ್ಯಾಕ್ ಮೇಲಿನ ದಾಳಿ: ಏನನ್ನೂ ವಶಕ್ಕೆ ಪಡೆದಿಲ್ಲ ಎಂದ ಇ.ಡಿ.<p>ಇದೇ ಸಂದರ್ಭದಲ್ಲಿ ಪಶ್ಚಿಮ ಬಂಗಾಳದಲ್ಲಿ ಇ.ಡಿ ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಫ್ಐಆರ್ಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಅಲ್ಲದೆ ಸಿಸಿಟಿವಿ ದೃಶ್ಯಗಳನ್ನು ನಾಶಪಡಿಸದಂತೆ ಪೊಲೀಸರಿಗೆ ನಿರ್ದೇಶನ ನೀಡಿದೆ. </p><p>ಕಲ್ಲಿದ್ದಲು ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ 8ರಂದು ಸಾಲ್ಟ್ ಲೇಕ್ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್ ಕಚೇರಿ ಮತ್ತು ಅದರ ನಿರ್ದೇಶಕ ಪ್ರತೀಕ್ ಜೈನ್ ಮೇಲೆ ಇ.ಡಿ ದಾಳಿ ನಡೆಸಿತ್ತು. ಈ ಸಂದರ್ಭದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸ್ಥಳಕ್ಕೆ ಬಂದು ಕಡತಗಳನ್ನು ವಶಕ್ಕೆ ಪಡೆದಿದ್ದರು ಎಂದು ಆರೋಪಿಸಲಾಗಿದೆ. </p><p>ಸಿಬಿಐ ವಿಚಾರಣೆ ಕೋರಿ ಸುಪ್ರೀಂ ಕೋರ್ಟ್ಗೆ ಇ.ಡಿ ಅರ್ಜಿ ಸಲ್ಲಿಸಿತ್ತು. ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಹಾಗೂ ವಿಪುಲ್ ಪಂಚೋಲಿ ಒಳಗೊಂಡ ಪೀಠವು ಅರ್ಜಿಗಳ ವಿಚಾರಣೆ ನಡೆಸಿತು. </p><p>ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳ ಸರ್ಕಾರ, ಡಿಜಿಪಿ ರಾಜೀವ್ ಕುಮಾರ್ ಮತ್ತು ರಾಜ್ಯದ ಉನ್ನತ ಪೊಲೀಸ್ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. </p><p>ನೆಲದ ಕಾನೂನಿನ ಪಾಲನೆ, ತನಿಖಾ ಸಂಸ್ಥೆಗಳಿಗೆ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಅನುವು ಮಾಡುವುದು, ಅಪರಾಧಿಗಳಿಗೆ ರಕ್ಷಣೆ ನೀಡುವುದನ್ನು ತಪ್ಪಿಸುವ ಉದ್ದೇಶದಿಂದ ಪ್ರಕರಣದ ವಿಚಾರಣೆ ನಡೆಸುವುದು ಅನಿವಾರ್ಯ ಎಂದಿದೆ. </p><p>ಪ್ರಕರಣದ ಕುರಿತು ಮುಂದಿನ ವಿಚಾರಣೆಯನ್ನು ಫೆಬ್ರುವರಿ 3ಕ್ಕೆ ಮುಂದೂಡಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>