<p><strong>ನವದೆಹಲಿ:</strong> ಗ್ರಾಹಕರ ಹಕ್ಕುಗಳ ರಕ್ಷಣೆಗೆ ಆದೇಶ ಕೋರಿ ಸಲ್ಲಿಕೆಯಾಗಿರುವ ಅರ್ಜಿಯೊಂದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಸೋಮವಾರ ನೋಟಿಸ್ ಜಾರಿಗೊಳಿಸಿದೆ.</p>.<p>ಯಾವುದೇ ಉತ್ಪನ್ನವನ್ನು ಖರೀದಿಸುವ ಗ್ರಾಹಕನಿಗೆ ಉತ್ಪನ್ನವನ್ನು ಮಾರಾಟ ಮಾಡುವ, ಉತ್ಪಾದಿಸುವ ಹಾಗೂ ವಿತರಿಸುವವರ ಮಾಹಿತಿಯನ್ನೂ ತಿಳಿದುಕೊಳ್ಳುವ ಹಕ್ಕು ಇದೆ ಎಂದು ಘೋಷಿಸುವಂತೆ ಕೋರಿ ಅರ್ಜಿ ಸಲ್ಲಿಕೆಯಾಗಿದೆ.</p>.<p class="bodytext">ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನ್ಯಾಯಮೂರ್ತಿ ವಿಕ್ರಮ್ ನಾಥ್ ಹಾಗೂ ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಅವರನ್ನೊಳಗೊಂಡ ಪೀಠವು ಸೂಚನೆ ನೀಡಿದೆ. </p>.<p class="bodytext">ಅಶ್ವಿನ್ ಕುಮಾರ್ ಉಪಾಧ್ಯಾಯ ಎಂಬವರು ಈ ಅರ್ಜಿ ಸಲ್ಲಿಸಿದ್ದಾರೆ. ‘ಪ್ರತೀ ಉತ್ಪನ್ನದ ಮಾರಾಟಗಾರರು, ವಿತರಕರು, ಮಳಿಗೆಯ ಮಾಲೀಕರು ತಮ್ಮ ನೋಂದಣಿ, ಹೆಸರು, ವಿಳಾಸವನ್ನು ಗ್ರಾಹಕರಿಗೆ ಕಾಣುವ ರೀತಿಯಲ್ಲಿ ಪ್ರದರ್ಶಿಸಬೇಕು. ಈ ಮಾಹಿತಿಯನ್ನು ತಿಳಿಯುವುದು ಗ್ರಾಹಕನ ಹಕ್ಕು ಎಂದು ನ್ಯಾಯಾಲಯ ಘೋಷಿಸಬೇಕು’ ಎಂದು ಅರ್ಜಿಯಲ್ಲಿ ಕೋರಲಾಗಿದೆ. </p>.<p class="bodytext">ಉತ್ಪನ್ನಗಳ ಗುಣಮಟ್ಟ ಕಳಪೆ ಆಗಿದ್ದರೆ ಅಥವಾ ಉತ್ಪನ್ನಕ್ಕಾಗಿ ಹಣ ಪಡೆದು ಬಳಿಕ ಅವುಗಳನ್ನು ವಿತರಿಸದೇ ವಂಚಿಸಿದಲ್ಲಿ ಗ್ರಾಹಕರು ದೂರು ನೀಡುವುದಕ್ಕೆ ಇದರಿಂದ ಸಾಧ್ಯವಾಗಲಿದೆ. ಗ್ರಾಹಕರು ವಂಚನೆಗೆ ಒಳಗಾಗದಂತೆ ತಡೆಯಲು ಈ ಹಕ್ಕು ಪ್ರಮುಖ ಎಂದೂ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಗ್ರಾಹಕರ ಹಕ್ಕುಗಳ ರಕ್ಷಣೆಗೆ ಆದೇಶ ಕೋರಿ ಸಲ್ಲಿಕೆಯಾಗಿರುವ ಅರ್ಜಿಯೊಂದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಸೋಮವಾರ ನೋಟಿಸ್ ಜಾರಿಗೊಳಿಸಿದೆ.</p>.<p>ಯಾವುದೇ ಉತ್ಪನ್ನವನ್ನು ಖರೀದಿಸುವ ಗ್ರಾಹಕನಿಗೆ ಉತ್ಪನ್ನವನ್ನು ಮಾರಾಟ ಮಾಡುವ, ಉತ್ಪಾದಿಸುವ ಹಾಗೂ ವಿತರಿಸುವವರ ಮಾಹಿತಿಯನ್ನೂ ತಿಳಿದುಕೊಳ್ಳುವ ಹಕ್ಕು ಇದೆ ಎಂದು ಘೋಷಿಸುವಂತೆ ಕೋರಿ ಅರ್ಜಿ ಸಲ್ಲಿಕೆಯಾಗಿದೆ.</p>.<p class="bodytext">ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನ್ಯಾಯಮೂರ್ತಿ ವಿಕ್ರಮ್ ನಾಥ್ ಹಾಗೂ ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಅವರನ್ನೊಳಗೊಂಡ ಪೀಠವು ಸೂಚನೆ ನೀಡಿದೆ. </p>.<p class="bodytext">ಅಶ್ವಿನ್ ಕುಮಾರ್ ಉಪಾಧ್ಯಾಯ ಎಂಬವರು ಈ ಅರ್ಜಿ ಸಲ್ಲಿಸಿದ್ದಾರೆ. ‘ಪ್ರತೀ ಉತ್ಪನ್ನದ ಮಾರಾಟಗಾರರು, ವಿತರಕರು, ಮಳಿಗೆಯ ಮಾಲೀಕರು ತಮ್ಮ ನೋಂದಣಿ, ಹೆಸರು, ವಿಳಾಸವನ್ನು ಗ್ರಾಹಕರಿಗೆ ಕಾಣುವ ರೀತಿಯಲ್ಲಿ ಪ್ರದರ್ಶಿಸಬೇಕು. ಈ ಮಾಹಿತಿಯನ್ನು ತಿಳಿಯುವುದು ಗ್ರಾಹಕನ ಹಕ್ಕು ಎಂದು ನ್ಯಾಯಾಲಯ ಘೋಷಿಸಬೇಕು’ ಎಂದು ಅರ್ಜಿಯಲ್ಲಿ ಕೋರಲಾಗಿದೆ. </p>.<p class="bodytext">ಉತ್ಪನ್ನಗಳ ಗುಣಮಟ್ಟ ಕಳಪೆ ಆಗಿದ್ದರೆ ಅಥವಾ ಉತ್ಪನ್ನಕ್ಕಾಗಿ ಹಣ ಪಡೆದು ಬಳಿಕ ಅವುಗಳನ್ನು ವಿತರಿಸದೇ ವಂಚಿಸಿದಲ್ಲಿ ಗ್ರಾಹಕರು ದೂರು ನೀಡುವುದಕ್ಕೆ ಇದರಿಂದ ಸಾಧ್ಯವಾಗಲಿದೆ. ಗ್ರಾಹಕರು ವಂಚನೆಗೆ ಒಳಗಾಗದಂತೆ ತಡೆಯಲು ಈ ಹಕ್ಕು ಪ್ರಮುಖ ಎಂದೂ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>