<p><strong>ನವದೆಹಲಿ:</strong> ಜಾತ್ಯತೀತ, ಪಾರದರ್ಶಕ ಮತ್ತು ನ್ಯಾಯವನ್ನು ಉತ್ತೇಜಿಸಲು ರಾಜಕೀಯ ಪಕ್ಷಗಳ ನೋಂದಣಿ ಮತ್ತು ನಿಯಂತ್ರಣಕ್ಕಾಗಿ ನಿಯಮಗಳನ್ನು ರೂಪಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗೆ ಸಂಬಂಧಿಸಿದಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.</p>.<p>ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜಾಯ್ಮಾಲ್ಯ ಬಾಗ್ಚಿ ಅವರ ಪೀಠವು ಈ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಲು ಶುಕ್ರವಾರ ನಿರ್ಧರಿಸಿತು. ಅಲ್ಲದೆ ಅರ್ಜಿಯು ನೋಂದಾಯಿತ ರಾಷ್ಟ್ರೀಯ ರಾಜಕೀಯ ಪಕ್ಷಗಳನ್ನು ಒಳಗೊಳ್ಳುವಂತೆ ಉಲ್ಲೇಖಿಸಲು ಪೀಠವು ಅರ್ಜಿದಾರ ಅಶ್ವಿನಿ ಉಪಾಧ್ಯಾಯ ಅವರಿಗೆ ಹೇಳಿತು.</p>.<p>ಈ ಅರ್ಜಿ ಕುರಿತು ಪ್ರತಿಕ್ರಿಯಿಸುವಂತೆ ಕೇಂದ್ರ ಸರ್ಕಾರ, ಭಾರತ ಕಾನೂನು ಆಯೋಗಕ್ಕೂ ಪೀಠ ನೋಟಿಸ್ ಜಾರಿ ಮಾಡಿತು.</p>.<p>ದೇಶದಲ್ಲಿ ರಾಜಕೀಯ ಪಕ್ಷಗಳಿಗೆ ಯಾವುದೇ ನಿಯಮ ಮತ್ತು ನಿಬಂಧನೆಗಳಿಲ್ಲ. ಇದರಿಂದಾಗಿ ಅನೇಕ ಪ್ರತ್ಯೇಕತಾವಾದಿಗಳು ದೇಣಿಗೆ ಸಂಗ್ರಹಿಸಲು ತಮ್ಮದೇ ಆದ ರಾಜಕೀಯ ಪಕ್ಷಗಳನ್ನು ರಚಿಸಿಕೊಂಡಿದ್ದಾರೆ. ಈ ಪಕ್ಷಗಳ ಕೆಲ ಪದಾಧಿಕಾರಿಗಳು ಪೊಲೀಸರ ರಕ್ಷಣೆಯನ್ನೂ ಪಡೆಯುತ್ತಿದ್ದಾರೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಜಾತ್ಯತೀತ, ಪಾರದರ್ಶಕ ಮತ್ತು ನ್ಯಾಯವನ್ನು ಉತ್ತೇಜಿಸಲು ರಾಜಕೀಯ ಪಕ್ಷಗಳ ನೋಂದಣಿ ಮತ್ತು ನಿಯಂತ್ರಣಕ್ಕಾಗಿ ನಿಯಮಗಳನ್ನು ರೂಪಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗೆ ಸಂಬಂಧಿಸಿದಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.</p>.<p>ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜಾಯ್ಮಾಲ್ಯ ಬಾಗ್ಚಿ ಅವರ ಪೀಠವು ಈ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಲು ಶುಕ್ರವಾರ ನಿರ್ಧರಿಸಿತು. ಅಲ್ಲದೆ ಅರ್ಜಿಯು ನೋಂದಾಯಿತ ರಾಷ್ಟ್ರೀಯ ರಾಜಕೀಯ ಪಕ್ಷಗಳನ್ನು ಒಳಗೊಳ್ಳುವಂತೆ ಉಲ್ಲೇಖಿಸಲು ಪೀಠವು ಅರ್ಜಿದಾರ ಅಶ್ವಿನಿ ಉಪಾಧ್ಯಾಯ ಅವರಿಗೆ ಹೇಳಿತು.</p>.<p>ಈ ಅರ್ಜಿ ಕುರಿತು ಪ್ರತಿಕ್ರಿಯಿಸುವಂತೆ ಕೇಂದ್ರ ಸರ್ಕಾರ, ಭಾರತ ಕಾನೂನು ಆಯೋಗಕ್ಕೂ ಪೀಠ ನೋಟಿಸ್ ಜಾರಿ ಮಾಡಿತು.</p>.<p>ದೇಶದಲ್ಲಿ ರಾಜಕೀಯ ಪಕ್ಷಗಳಿಗೆ ಯಾವುದೇ ನಿಯಮ ಮತ್ತು ನಿಬಂಧನೆಗಳಿಲ್ಲ. ಇದರಿಂದಾಗಿ ಅನೇಕ ಪ್ರತ್ಯೇಕತಾವಾದಿಗಳು ದೇಣಿಗೆ ಸಂಗ್ರಹಿಸಲು ತಮ್ಮದೇ ಆದ ರಾಜಕೀಯ ಪಕ್ಷಗಳನ್ನು ರಚಿಸಿಕೊಂಡಿದ್ದಾರೆ. ಈ ಪಕ್ಷಗಳ ಕೆಲ ಪದಾಧಿಕಾರಿಗಳು ಪೊಲೀಸರ ರಕ್ಷಣೆಯನ್ನೂ ಪಡೆಯುತ್ತಿದ್ದಾರೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>