ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಡಿಗೆ ತಾಯ್ತನ: ಮಕ್ಕಳನ್ನು ಬಯಸುವ ದಂಪತಿಯ ಜೀವಾಣು ಬಳಕೆ ಪ್ರಶ್ನಿಸಿದ್ದ ಅರ್ಜಿ ವಜಾ

Published 30 ಮೇ 2023, 16:38 IST
Last Updated 30 ಮೇ 2023, 16:38 IST
ಅಕ್ಷರ ಗಾತ್ರ

ನವದೆಹಲಿ: ಬಾಡಿಗೆ ತಾಯ್ತನದ ಮೂಲಕ ಮಕ್ಕಳನ್ನು ಪಡೆದುಕೊಳ್ಳಲು ಮುಂದಾಗುವ ದಂಪತಿಯು ದಾನಿಗಳ ವೀರ್ಯಾಣು ಮತ್ತು ಅಂಡಾಣುಗಳನ್ನು ಬಳಸಿಕೊಳ್ಳಬಾರದು ಎಂಬ ಕೇಂದ್ರ ಆರೋಗ್ಯ ಸಚಿವಾಲಯದ ನಿಯಮವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಮಂಗಳವಾರ ತಿರಸ್ಕರಿಸಿದೆ.

ಈ ನಿಯಮದ ಕುರಿತು ಈಗಾಗಲೇ ವಿಚಾರಣೆ ನಡೆಯುತ್ತಿದೆ ಎಂದು ‌ನ್ಯಾಯಮೂರ್ತಿಗಳಾದ ಬೇಲಾ ಎಂ. ತ್ರಿವೇದಿ ಮತ್ತು ಪ್ರಶಾಂತ್‌ ಕುಮಾರ್‌ ಮಿಶ್ರಾ ಅವರಿದ್ದ ರಜಾಕಾಲದ ಪೀಠವು ಹೇಳಿದೆ. ‘ನಾವು ಯಾಕಾಗಿ ಇಂಥ ಅರ್ಜಿಯನ್ನು ಸ್ವೀಕರಿಸಬೇಕು? ಪ್ರಚಾರ ಸಿಗುತ್ತದೆ ಎಂಬ ಕಾರಣಕ್ಕೆ ನೀವು ಈ ಅರ್ಜಿ ಸಲ್ಲಿಸಿದ್ದೀರಾ ಎಂದು ಪ್ರಶ್ನಿಸಿದೆ.‘

ಬಳಿಕ, ಅರ್ಜಿದಾರರ ಪರ ಹಾಜರಿದ್ದ ವಕೀಲರು ಅರ್ಜಿಯನ್ನು ಹಿಂಪಡೆದರು.

ನಿಯಮ ಏನಿದೆ?: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು 2023ರ ಮಾರ್ಚ್‌ 14ರಂದು ಈ ನಿಯಮವನ್ನು ಹೊರಡಿಸಿತ್ತು.

* ಬಾಡಿಗೆ ತಾಯ್ತನದ ಮೂಲಕ ಮಕ್ಕಳನ್ನು ಪಡೆದುಕೊಳ್ಳಲು ಬಯಸುವ ದಂಪತಿಯು, ತಮ್ಮ ವೀರ್ಯಾಣು ಮತ್ತು ಅಂಡಾಣು ನೀಡಬೇಕು ಎಂದು ನಿಯಮ ರೂಪಿಸಲಾಗಿತ್ತು

* ವಿಧವೆ ಅಥವಾ ವಿಚ್ಛೇದನ ಪಡೆದಿರುವ ಮಹಿಳೆಯು ಮಕ್ಕಳನ್ನು ಬಯಸಿದರೆ, ತನ್ನ ಅಂಡಾಣುವನ್ನು ಮತ್ತು ದಾನಿಯ ವೀರ್ಯಾಣುವನ್ನು ಬಳಸಬೇಕು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT