<p><strong>ನವದೆಹಲಿ</strong>: ‘ಸಂವಿಧಾನ ರಚನಾಕಾರರ ಕಲ್ಪನೆಯಂತೆ ರಾಜ್ಯಪಾಲರು ಹಾಗೂ ಸಂಬಂಧಪಟ್ಟ ರಾಜ್ಯ ಸರ್ಕಾರಗಳ ನಡುವೆ ಸೌಹಾರ್ದ ಸಂಬಂಧ ಇದೆಯೇ’ ಎಂದು ಸುಪ್ರಿಂ ಕೋರ್ಟ್ ಬುಧವಾರ ಪ್ರಶ್ನಿಸಿದೆ.</p>.<p>ಮುಖ್ಯನ್ಯಾಯಮೂರ್ತಿ ಬಿ.ಆರ್.ಗವಾಯಿ ನೇತೃತ್ವದ ಐವರು ಸದಸ್ಯರು ಇರುವ ಸಂವಿಧಾನ ಪೀಠವು, ರಾಜ್ಯಪಾಲರ ನೇಮಕ ಮತ್ತು ಅಧಿಕಾರ ಕುರಿತು ಸಂವಿಧಾನ ರಚನಾಸಭೆಯಲ್ಲಿ ನಡೆದ ಚರ್ಚೆಗಳನ್ನು ಉಲ್ಲೇಖಿಸಿ, ಕೇಂದ್ರದ ಪರ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಈ ಪ್ರಶ್ನೆ ಕೇಳಿದೆ.</p>.<p>ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ವಿಕ್ರಮನಾಥ್, ಪಿ.ಎಸ್.ನರಸಿಂಹ ಹಾಗೂ ಎ.ಎಸ್.ಚಂದೂರ್ಕರ್ ಅವರು ಸಹ ಈ ಪೀಠದಲ್ಲಿದ್ದಾರೆ.</p>.<p>ಶಾಸನಸಭೆಗಳಲ್ಲಿ ಅಂಗೀಕಾರಗೊಂಡ ಮಸೂದೆಗಳಿಗೆ ಅಂಕಿತ ಹಾಕುವುದಕ್ಕೆ ರಾಷ್ಟ್ರಪತಿ ಹಾಗೂ ರಾಜ್ಯಪಾಲರಿಗೆ ಕಾಲಮಿತಿ ನಿಗದಿ ಮಾಡುವುದಕ್ಕೆ ಸಂಬಂಧಿಸಿ ರಾಷ್ಟ್ರಪತಿ ಅವರು ಸುಪ್ರೀಂ ಕೋರ್ಟ್ ಸಲಹೆ ಕೇಳಿದ್ದಾರೆ. ಈ ಕುರಿತಂತೆ ಬುಧವಾರವೂ ವಿಚಾರಣೆ ಮುಂದುವರಿಯಿತು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಮೆಹ್ತಾ,‘ಈ ವಿಚಾರಕ್ಕೆ ಸಂಬಂಧಿಸಿ ವಿವಿಧ ಸ್ತರಗಳಲ್ಲಿ ವ್ಯಾಪಕ ಟೀಕೆಗಳು ವ್ಯಕ್ತವಾಗಿವೆ. ಇದರ ಹೊರತಾಗಿ ಅವಲೋಕಿಸಿದಾಗ, ರಾಜಕೀಯವಾಗಿ ಆಶ್ರಯ ಬೇಡುವವರಿಗಾಗಿ ರಾಜ್ಯಪಾಲರ ಹುದ್ದೆ ಸೃಷ್ಟಿಸಿಲ್ಲ. ರಾಜ್ಯಪಾಲರಿಗೆ ಇರುವ ಅಧಿಕಾರಗಳು ಹಾಗೂ ಜವಾಬ್ದಾರಿಗಳ ಕುರಿತು ಸಂವಿಧಾನದಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ’ ಎಂದರು.</p>.<p>‘ಸಂವಿಧಾನದಲ್ಲಿ ಉಲ್ಲೇಖಿಸಿರುವಂತೆ ಒಕ್ಕೂಟ ವ್ಯವಸ್ಥೆಯನ್ನು ಗಮನದಲ್ಲಿ ಇಟ್ಟುಕೊಂಡೇ ರಾಜ್ಯಪಾಲರ ನೇಮಕ ಹಾಗೂ ಅವರ ಪಾತ್ರ ಕುರಿತಂತೆ ಸಂವಿಧಾನರಚನಾ ಸಭೆಯಲ್ಲಿ ವ್ಯಾಪಕ ಚರ್ಚೆಗಳು ನಡೆದಿವೆ’ ಎಂದೂ ಮೆಹ್ತಾ ಪೀಠಕ್ಕೆ ತಿಳಿಸಿದರು. </p>.<div><blockquote>ರಾಜ್ಯಪಾಲ ಮತ್ತು ಸರ್ಕಾರ ಎರಡು ಶಕ್ತಿಕೇಂದ್ರಗಳಾಗಿದ್ದು ಅನೇಕ ವಿಷಯಗಳು ಕುರಿತು ಸಮಾಲೋಚನೆಗಳು ನಡೆಯುವ ಜೊತೆಗೆ ಈ ಎರಡು ‘ಶಕ್ತಿ ಕೇಂದ್ರ’ಗಳ ನಡುವೆ ಸೌಹಾರ್ದ ಸಂಬಂಧ ಇದೆಯೇ?</blockquote><span class="attribution">– ಸುಪ್ರೀಂ ಕೋರ್ಟ್</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಸಂವಿಧಾನ ರಚನಾಕಾರರ ಕಲ್ಪನೆಯಂತೆ ರಾಜ್ಯಪಾಲರು ಹಾಗೂ ಸಂಬಂಧಪಟ್ಟ ರಾಜ್ಯ ಸರ್ಕಾರಗಳ ನಡುವೆ ಸೌಹಾರ್ದ ಸಂಬಂಧ ಇದೆಯೇ’ ಎಂದು ಸುಪ್ರಿಂ ಕೋರ್ಟ್ ಬುಧವಾರ ಪ್ರಶ್ನಿಸಿದೆ.</p>.<p>ಮುಖ್ಯನ್ಯಾಯಮೂರ್ತಿ ಬಿ.ಆರ್.ಗವಾಯಿ ನೇತೃತ್ವದ ಐವರು ಸದಸ್ಯರು ಇರುವ ಸಂವಿಧಾನ ಪೀಠವು, ರಾಜ್ಯಪಾಲರ ನೇಮಕ ಮತ್ತು ಅಧಿಕಾರ ಕುರಿತು ಸಂವಿಧಾನ ರಚನಾಸಭೆಯಲ್ಲಿ ನಡೆದ ಚರ್ಚೆಗಳನ್ನು ಉಲ್ಲೇಖಿಸಿ, ಕೇಂದ್ರದ ಪರ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಈ ಪ್ರಶ್ನೆ ಕೇಳಿದೆ.</p>.<p>ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ವಿಕ್ರಮನಾಥ್, ಪಿ.ಎಸ್.ನರಸಿಂಹ ಹಾಗೂ ಎ.ಎಸ್.ಚಂದೂರ್ಕರ್ ಅವರು ಸಹ ಈ ಪೀಠದಲ್ಲಿದ್ದಾರೆ.</p>.<p>ಶಾಸನಸಭೆಗಳಲ್ಲಿ ಅಂಗೀಕಾರಗೊಂಡ ಮಸೂದೆಗಳಿಗೆ ಅಂಕಿತ ಹಾಕುವುದಕ್ಕೆ ರಾಷ್ಟ್ರಪತಿ ಹಾಗೂ ರಾಜ್ಯಪಾಲರಿಗೆ ಕಾಲಮಿತಿ ನಿಗದಿ ಮಾಡುವುದಕ್ಕೆ ಸಂಬಂಧಿಸಿ ರಾಷ್ಟ್ರಪತಿ ಅವರು ಸುಪ್ರೀಂ ಕೋರ್ಟ್ ಸಲಹೆ ಕೇಳಿದ್ದಾರೆ. ಈ ಕುರಿತಂತೆ ಬುಧವಾರವೂ ವಿಚಾರಣೆ ಮುಂದುವರಿಯಿತು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಮೆಹ್ತಾ,‘ಈ ವಿಚಾರಕ್ಕೆ ಸಂಬಂಧಿಸಿ ವಿವಿಧ ಸ್ತರಗಳಲ್ಲಿ ವ್ಯಾಪಕ ಟೀಕೆಗಳು ವ್ಯಕ್ತವಾಗಿವೆ. ಇದರ ಹೊರತಾಗಿ ಅವಲೋಕಿಸಿದಾಗ, ರಾಜಕೀಯವಾಗಿ ಆಶ್ರಯ ಬೇಡುವವರಿಗಾಗಿ ರಾಜ್ಯಪಾಲರ ಹುದ್ದೆ ಸೃಷ್ಟಿಸಿಲ್ಲ. ರಾಜ್ಯಪಾಲರಿಗೆ ಇರುವ ಅಧಿಕಾರಗಳು ಹಾಗೂ ಜವಾಬ್ದಾರಿಗಳ ಕುರಿತು ಸಂವಿಧಾನದಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ’ ಎಂದರು.</p>.<p>‘ಸಂವಿಧಾನದಲ್ಲಿ ಉಲ್ಲೇಖಿಸಿರುವಂತೆ ಒಕ್ಕೂಟ ವ್ಯವಸ್ಥೆಯನ್ನು ಗಮನದಲ್ಲಿ ಇಟ್ಟುಕೊಂಡೇ ರಾಜ್ಯಪಾಲರ ನೇಮಕ ಹಾಗೂ ಅವರ ಪಾತ್ರ ಕುರಿತಂತೆ ಸಂವಿಧಾನರಚನಾ ಸಭೆಯಲ್ಲಿ ವ್ಯಾಪಕ ಚರ್ಚೆಗಳು ನಡೆದಿವೆ’ ಎಂದೂ ಮೆಹ್ತಾ ಪೀಠಕ್ಕೆ ತಿಳಿಸಿದರು. </p>.<div><blockquote>ರಾಜ್ಯಪಾಲ ಮತ್ತು ಸರ್ಕಾರ ಎರಡು ಶಕ್ತಿಕೇಂದ್ರಗಳಾಗಿದ್ದು ಅನೇಕ ವಿಷಯಗಳು ಕುರಿತು ಸಮಾಲೋಚನೆಗಳು ನಡೆಯುವ ಜೊತೆಗೆ ಈ ಎರಡು ‘ಶಕ್ತಿ ಕೇಂದ್ರ’ಗಳ ನಡುವೆ ಸೌಹಾರ್ದ ಸಂಬಂಧ ಇದೆಯೇ?</blockquote><span class="attribution">– ಸುಪ್ರೀಂ ಕೋರ್ಟ್</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>