<p><strong>ನವದೆಹಲಿ :</strong> ದೆಹಲಿ-ಎನ್ಸಿಆರ್ನ ಸುತ್ತಮುತ್ತಲಿನಲ್ಲಿ ಬೀದಿ ನಾಯಿಗಳನ್ನು ಹಿಡಿದು ಆಶ್ರಯ ತಾಣಗಳಿಗೆ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ಕೆಲ ದಿನಗಳ ಹಿಂದೆ ನಿರ್ದೇಶಿಸಿತ್ತು. </p><p>ಕೋರ್ಟ್ ಆದೇಶವನ್ನು ವಿರೋಧಿಸಿ ನಗರದಲ್ಲಿ ಪ್ರಾಣಿ ಹಕ್ಕುಗಳ ಕಾರ್ಯಕರ್ತರು ಹಾಗೂ ಶ್ವಾನ ಪ್ರಿಯರು ಶಾಂತಿಯುತ ರ್ಯಾಲಿ ನಡೆಸಿದ್ದಾರೆ.</p>.ಬೀದಿ ನಾಯಿ ಉಪಟಳಕ್ಕೆ ಕಡಿವಾಣ | ಎಲ್ಲರೂ ಹೊಣೆ ನಿಭಾಯಿಸಬೇಕು; ಸುಪ್ರೀಂ ಕೋರ್ಟ್.<p>ಬೀದಿ ನಾಯಿಗಳು ನೆರೆಹೊರೆಯ ಭಾಗವಾಗಿದೆ. ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸುವ ಬದಲು, ನಾಯಿಗಳಿಗೆ ಸಂತಾನಹರಣ ಶಸ್ತ್ರ ಚಿಕಿತ್ಸೆ ಹಾಗೂ ಲಸಿಕೆ ನೀಡಿ. ಬೀದಿ ನಾಯಿಗಳನ್ನು ಬೀದಿಗಳಲ್ಲಿಯೇ ಬದುಕಲು ಬಿಡಿ ಎಂದು ಒತ್ತಾಯಿಸಿದರು. </p>.ದೆಹಲಿ: ಬೀದಿ ನಾಯಿಗಳ ಸ್ಥಳಾಂತರಕ್ಕೆ ಸುಪ್ರೀಂ ಕೋರ್ಟ್ ಸೂಚನೆ.<p>ಪಶ್ಚಿಮ ದೆಹಲಿಯ ಚೋಟಿ ಸಬ್ಜಿ ಮಂಡಿ ಪಾರ್ಕ್ನಲ್ಲಿ ಆಯೋಜಿಸಲಾದ ಪ್ರದರ್ಶನದಲ್ಲಿ ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಹಾಗೂ ಶ್ವಾನ ಪ್ರಿಯರು ಸಾಕು ನಾಯಿಗಳ ಜತೆ ಬಂದಿದ್ದರು.</p><p>‘ಪ್ರಾಣಿ ಕಲ್ಯಾಣವೇ ಮಾನವ ಕಲ್ಯಾಣ‘ ಲಸಿಕೆ ಮಾತ್ರ ಸಾಕು. ಬೀದಿ ನಾಯಿಗಳ ಸ್ಥಳಾಂತರ ಬೇಡ ಎಂಬ ಘೋಷಣೆಗಳನ್ನು ಹೊಂದಿರುವ ಫಲಕಗಳನ್ನು ಹಿಡಿದು ರ್ಯಾಲಿಯಲ್ಲಿ ಭಾಗವಹಿಸಿದ್ದರು. </p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ :</strong> ದೆಹಲಿ-ಎನ್ಸಿಆರ್ನ ಸುತ್ತಮುತ್ತಲಿನಲ್ಲಿ ಬೀದಿ ನಾಯಿಗಳನ್ನು ಹಿಡಿದು ಆಶ್ರಯ ತಾಣಗಳಿಗೆ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ಕೆಲ ದಿನಗಳ ಹಿಂದೆ ನಿರ್ದೇಶಿಸಿತ್ತು. </p><p>ಕೋರ್ಟ್ ಆದೇಶವನ್ನು ವಿರೋಧಿಸಿ ನಗರದಲ್ಲಿ ಪ್ರಾಣಿ ಹಕ್ಕುಗಳ ಕಾರ್ಯಕರ್ತರು ಹಾಗೂ ಶ್ವಾನ ಪ್ರಿಯರು ಶಾಂತಿಯುತ ರ್ಯಾಲಿ ನಡೆಸಿದ್ದಾರೆ.</p>.ಬೀದಿ ನಾಯಿ ಉಪಟಳಕ್ಕೆ ಕಡಿವಾಣ | ಎಲ್ಲರೂ ಹೊಣೆ ನಿಭಾಯಿಸಬೇಕು; ಸುಪ್ರೀಂ ಕೋರ್ಟ್.<p>ಬೀದಿ ನಾಯಿಗಳು ನೆರೆಹೊರೆಯ ಭಾಗವಾಗಿದೆ. ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸುವ ಬದಲು, ನಾಯಿಗಳಿಗೆ ಸಂತಾನಹರಣ ಶಸ್ತ್ರ ಚಿಕಿತ್ಸೆ ಹಾಗೂ ಲಸಿಕೆ ನೀಡಿ. ಬೀದಿ ನಾಯಿಗಳನ್ನು ಬೀದಿಗಳಲ್ಲಿಯೇ ಬದುಕಲು ಬಿಡಿ ಎಂದು ಒತ್ತಾಯಿಸಿದರು. </p>.ದೆಹಲಿ: ಬೀದಿ ನಾಯಿಗಳ ಸ್ಥಳಾಂತರಕ್ಕೆ ಸುಪ್ರೀಂ ಕೋರ್ಟ್ ಸೂಚನೆ.<p>ಪಶ್ಚಿಮ ದೆಹಲಿಯ ಚೋಟಿ ಸಬ್ಜಿ ಮಂಡಿ ಪಾರ್ಕ್ನಲ್ಲಿ ಆಯೋಜಿಸಲಾದ ಪ್ರದರ್ಶನದಲ್ಲಿ ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಹಾಗೂ ಶ್ವಾನ ಪ್ರಿಯರು ಸಾಕು ನಾಯಿಗಳ ಜತೆ ಬಂದಿದ್ದರು.</p><p>‘ಪ್ರಾಣಿ ಕಲ್ಯಾಣವೇ ಮಾನವ ಕಲ್ಯಾಣ‘ ಲಸಿಕೆ ಮಾತ್ರ ಸಾಕು. ಬೀದಿ ನಾಯಿಗಳ ಸ್ಥಳಾಂತರ ಬೇಡ ಎಂಬ ಘೋಷಣೆಗಳನ್ನು ಹೊಂದಿರುವ ಫಲಕಗಳನ್ನು ಹಿಡಿದು ರ್ಯಾಲಿಯಲ್ಲಿ ಭಾಗವಹಿಸಿದ್ದರು. </p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>