<p><strong>ನವದೆಹಲಿ</strong>: ಅಂಗವಿಕಲರ ಬಗ್ಗೆ ಅಪಹಾಸ್ಯ ಮಾಡಿದ್ದಕ್ಕಾಗಿ ಯೂಟ್ಯೂಬರ್ ಸಮಯ್ ರೈನಾ ಸೇರಿದಂತೆ ಐವರು ಇನ್ಫ್ಲೂಯನ್ಸರ್ಗಳಿಗೆ ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಕ್ಷಮೆಯಾಚಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಸೂಚಿಸಿದೆ.</p><p>ಅಂಗವಿಕಲರು ಮತ್ತು ವಿರಳ ಕಾಯಿಲೆಯಾದ ‘ಎಸ್ಎಂಎ’ಯಿಂದ (ಸ್ಪೈನಲ್ ಮಸ್ಕ್ಯುಲರ್ ಎಟ್ರೋಫಿ) ಬಳಲುತ್ತಿರುವವರನ್ನು ಈ ಐದು ಮಂದಿ ತಮ್ಮ ಕಾರ್ಯಕ್ರಮದಲ್ಲಿ ಗೇಲಿ ಮಾಡಿದ್ದಾರೆ ಎಂದು ಸರ್ಕಾರೇತರ ಸಂಘಟನೆ (ಎನ್ಜಿಒ) ‘ಕ್ಯೂರ್ ಎಸ್ಎಂಎ ಫೌಂಡೇಷನ್ ಆಫ್ ಇಂಡಿಯಾ’ ಆರೋಪಿಸಿದೆ.</p><p>ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು, ‘ಇತರ ಸಮುದಾಯಗಳ ಭಾವನೆಗಳಿಗೆ ನೋವುಂಟು ಮಾಡುವ ವಾಣಿಜ್ಯಾತ್ಮಕ ಭಾಷಣಕ್ಕೆ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕು ಅನ್ವಯಿಸುವುದಿಲ್ಲ’ ಎಂದು ಹೇಳಿದೆ.</p><p>‘ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಜವಾಬ್ದಾರಿಯುತವಾಗಿ ಬಳಸಿಕೊಳ್ಳಬೇಕು. ಕಟೆಂಟ್ ಹೆಸರಿನಲ್ಲಿ ವ್ಯಕ್ತಿಗಳ ಘನತೆಯನ್ನು ಬಲಿಕೊಡಲು ಸಾಧ್ಯವಿಲ್ಲ’ ಎಂದಿದೆ.</p><p>ಇದೇ ವೇಳೆ, ಅಂಗವಿಕಲರು, ಮಹಿಳೆಯರು, ಮಕ್ಕಳು ಮತ್ತು ಹಿರಿಯ ನಾಗರಿಕರನ್ನು ಅಪಹಾಸ್ಯ ಮಾಡುವ ಭಾಷಣಗಳನ್ನು ತಡೆಯಲು ಮಾರ್ಗಸೂಚಿಗಳನ್ನು ರೂಪಿಸುವಂತೆ ಕೇಂದ್ರಕ್ಕೆ ಸೂಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಅಂಗವಿಕಲರ ಬಗ್ಗೆ ಅಪಹಾಸ್ಯ ಮಾಡಿದ್ದಕ್ಕಾಗಿ ಯೂಟ್ಯೂಬರ್ ಸಮಯ್ ರೈನಾ ಸೇರಿದಂತೆ ಐವರು ಇನ್ಫ್ಲೂಯನ್ಸರ್ಗಳಿಗೆ ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಕ್ಷಮೆಯಾಚಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಸೂಚಿಸಿದೆ.</p><p>ಅಂಗವಿಕಲರು ಮತ್ತು ವಿರಳ ಕಾಯಿಲೆಯಾದ ‘ಎಸ್ಎಂಎ’ಯಿಂದ (ಸ್ಪೈನಲ್ ಮಸ್ಕ್ಯುಲರ್ ಎಟ್ರೋಫಿ) ಬಳಲುತ್ತಿರುವವರನ್ನು ಈ ಐದು ಮಂದಿ ತಮ್ಮ ಕಾರ್ಯಕ್ರಮದಲ್ಲಿ ಗೇಲಿ ಮಾಡಿದ್ದಾರೆ ಎಂದು ಸರ್ಕಾರೇತರ ಸಂಘಟನೆ (ಎನ್ಜಿಒ) ‘ಕ್ಯೂರ್ ಎಸ್ಎಂಎ ಫೌಂಡೇಷನ್ ಆಫ್ ಇಂಡಿಯಾ’ ಆರೋಪಿಸಿದೆ.</p><p>ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು, ‘ಇತರ ಸಮುದಾಯಗಳ ಭಾವನೆಗಳಿಗೆ ನೋವುಂಟು ಮಾಡುವ ವಾಣಿಜ್ಯಾತ್ಮಕ ಭಾಷಣಕ್ಕೆ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕು ಅನ್ವಯಿಸುವುದಿಲ್ಲ’ ಎಂದು ಹೇಳಿದೆ.</p><p>‘ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಜವಾಬ್ದಾರಿಯುತವಾಗಿ ಬಳಸಿಕೊಳ್ಳಬೇಕು. ಕಟೆಂಟ್ ಹೆಸರಿನಲ್ಲಿ ವ್ಯಕ್ತಿಗಳ ಘನತೆಯನ್ನು ಬಲಿಕೊಡಲು ಸಾಧ್ಯವಿಲ್ಲ’ ಎಂದಿದೆ.</p><p>ಇದೇ ವೇಳೆ, ಅಂಗವಿಕಲರು, ಮಹಿಳೆಯರು, ಮಕ್ಕಳು ಮತ್ತು ಹಿರಿಯ ನಾಗರಿಕರನ್ನು ಅಪಹಾಸ್ಯ ಮಾಡುವ ಭಾಷಣಗಳನ್ನು ತಡೆಯಲು ಮಾರ್ಗಸೂಚಿಗಳನ್ನು ರೂಪಿಸುವಂತೆ ಕೇಂದ್ರಕ್ಕೆ ಸೂಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>