<p><strong>ನವದೆಹಲಿ: ‘</strong>ಆ್ಯಸಿಡ್ ದಾಳಿ ಪ್ರಕರಣಗಳ ಬಗ್ಗೆ ವರ್ಷವಾರು ಮಾಹಿತಿ ನೀಡಿ. ನ್ಯಾಯಾಲಯಗಳಲ್ಲಿ ಈ ಪ್ರಕರಣಗಳ ವಿಚಾರಣೆ ಯಾವ ಹಂತದಲ್ಲಿದೆ ಮತ್ತು ಸಂತ್ರಸ್ತರಿಗೆ ಪುನರ್ವಸತಿ ಸೇರಿ ಯಾವ ರೀತಿಯಲ್ಲಿ ಬೆಂಬಲ ನೀಡಲಾಗುತ್ತಿದೆ ಎಂಬುದನ್ನು ನೀಡಿ’ ಎಂದು ಕೇಂದ್ರಾಡಳಿತ ಪ್ರದೇಶ ಮತ್ತು ಎಲ್ಲ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿತು.</p>.<p>ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿಗಳಾದ ಆರ್. ಮಹದೇವನ್ ಹಾಗೂ ಜಾಯ್ ಮಾಲ್ಯಾ ಬಾಗ್ಚಿ ಅವರ ಪೀಠ ಮಂಗಳವಾರ ಈ ಸೂಚನೆ ನೀಡಿತು. ‘ವಿಚಾರಣಾ ನ್ಯಾಯಾಲಯಗಳಲ್ಲಿ ಯಾವ ಯಾವ ಪ್ರಕರಣಗಳಲ್ಲಿ ಆರೋಪಪಟ್ಟಿ ಸಲ್ಲಿಸಲಾಗಿದೆ ಎಂಬ ಮಾಹಿತಿಯನ್ನು ನಾಲ್ಕು ವಾರಗಳಲ್ಲಿ ನೀಡಿ’ ಎಂದಿತು.</p>.<p>ಕಾನೂನಿನಲ್ಲಿ ಈಗಾಗಲೇ ಇರುವ ‘ಅಂಗವಿಕಲ ವ್ಯಕ್ತಿ’ ಎನ್ನುವ ಅರ್ಥವಿವರಣೆಯನ್ನು ವಿಸ್ತರಿಸಬೇಕು ಎಂದು ಕೋರಿ ಆ್ಯಸಿಡ್ ದಾಳಿಯ ಸಂತ್ರಸ್ತೆ ಶಾಹೀನ್ ಮಲ್ಲಿಕ್ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸಿತು. </p>.<p>ಬಲವಂತದಿಂದ ಆ್ಯಸಿಡ್ ಕುಡಿಸಿದ ಪ್ರಕರಣಗಳ ಸಂತ್ರಸ್ತರನ್ನೂ ‘ಅಂಗವಿಕಲ ವ್ಯಕ್ತಿ’ ಎನ್ನುವ ಅರ್ಥ ವಿವರಣೆಯಲ್ಲಿ ಒಳಗೊಳ್ಳಬೇಕು. ಆ್ಯಸಿಡ್ ದಾಳಿಯ ಸಂತ್ರಸ್ತರಿಗೆ ಸೂಕ್ತ ಪರಿಹಾರ, ವೈದ್ಯಕೀಯ ಸೌಕರ್ಯ ಸೇರಿ ಹಲವು ಸೌಲಭ್ಯ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: ‘</strong>ಆ್ಯಸಿಡ್ ದಾಳಿ ಪ್ರಕರಣಗಳ ಬಗ್ಗೆ ವರ್ಷವಾರು ಮಾಹಿತಿ ನೀಡಿ. ನ್ಯಾಯಾಲಯಗಳಲ್ಲಿ ಈ ಪ್ರಕರಣಗಳ ವಿಚಾರಣೆ ಯಾವ ಹಂತದಲ್ಲಿದೆ ಮತ್ತು ಸಂತ್ರಸ್ತರಿಗೆ ಪುನರ್ವಸತಿ ಸೇರಿ ಯಾವ ರೀತಿಯಲ್ಲಿ ಬೆಂಬಲ ನೀಡಲಾಗುತ್ತಿದೆ ಎಂಬುದನ್ನು ನೀಡಿ’ ಎಂದು ಕೇಂದ್ರಾಡಳಿತ ಪ್ರದೇಶ ಮತ್ತು ಎಲ್ಲ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿತು.</p>.<p>ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿಗಳಾದ ಆರ್. ಮಹದೇವನ್ ಹಾಗೂ ಜಾಯ್ ಮಾಲ್ಯಾ ಬಾಗ್ಚಿ ಅವರ ಪೀಠ ಮಂಗಳವಾರ ಈ ಸೂಚನೆ ನೀಡಿತು. ‘ವಿಚಾರಣಾ ನ್ಯಾಯಾಲಯಗಳಲ್ಲಿ ಯಾವ ಯಾವ ಪ್ರಕರಣಗಳಲ್ಲಿ ಆರೋಪಪಟ್ಟಿ ಸಲ್ಲಿಸಲಾಗಿದೆ ಎಂಬ ಮಾಹಿತಿಯನ್ನು ನಾಲ್ಕು ವಾರಗಳಲ್ಲಿ ನೀಡಿ’ ಎಂದಿತು.</p>.<p>ಕಾನೂನಿನಲ್ಲಿ ಈಗಾಗಲೇ ಇರುವ ‘ಅಂಗವಿಕಲ ವ್ಯಕ್ತಿ’ ಎನ್ನುವ ಅರ್ಥವಿವರಣೆಯನ್ನು ವಿಸ್ತರಿಸಬೇಕು ಎಂದು ಕೋರಿ ಆ್ಯಸಿಡ್ ದಾಳಿಯ ಸಂತ್ರಸ್ತೆ ಶಾಹೀನ್ ಮಲ್ಲಿಕ್ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸಿತು. </p>.<p>ಬಲವಂತದಿಂದ ಆ್ಯಸಿಡ್ ಕುಡಿಸಿದ ಪ್ರಕರಣಗಳ ಸಂತ್ರಸ್ತರನ್ನೂ ‘ಅಂಗವಿಕಲ ವ್ಯಕ್ತಿ’ ಎನ್ನುವ ಅರ್ಥ ವಿವರಣೆಯಲ್ಲಿ ಒಳಗೊಳ್ಳಬೇಕು. ಆ್ಯಸಿಡ್ ದಾಳಿಯ ಸಂತ್ರಸ್ತರಿಗೆ ಸೂಕ್ತ ಪರಿಹಾರ, ವೈದ್ಯಕೀಯ ಸೌಕರ್ಯ ಸೇರಿ ಹಲವು ಸೌಲಭ್ಯ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>