<p><strong>ನವದೆಹಲಿ:</strong> ಜೋಧಪುರದ ಕೇಂದ್ರ ಕಾರಾಗೃಹದಲ್ಲಿರುವ ಪರಿಸರ ಹೋರಾಟಗಾರ ಸೊನಮ್ ವಾಂಗ್ಚೂಕ್ ಅವರನ್ನು ತಜ್ಞ ವೈದ್ಯರಿಂದ ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದೆ. </p>.<p>ಮಲಿನಗೊಂಡಿರುವ ನೀರು ಕುಡಿದು ಹೊಟ್ಟೆಯಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ ಎಂದು ವಾಂಗ್ಚೂಕ್ ಅವರು ದೂರು ನೀಡಿದ್ದರು. </p>.<p>ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅರವಿಂದ ಕುಮಾರ್ ಹಾಗೂ ಪಿ.ಬಿ.ವರಾಳೆ ಅವರು, ವಾಂಗ್ಚೂಕ್ ಅವರ ವೈದ್ಯಕೀಯ ತಪಾಸಣೆಯ ವರದಿಯನ್ನು, ಸೋಮವಾರ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ಜೈಲು ಅಧಿಕಾರಿಗಳಿಗೆ ಸೂಚಿಸಿದರು. </p>.<p>ವಾಂಗ್ಚೂಕ್ ಅವರ ಪತ್ನಿ ಗೀತಾಂಜಲಿ ಆಂಗ್ಮೊ ಅವರು, ‘ನಾವು ನೀಡುವ ನೀರನ್ನು ವಾಂಗ್ಚೂಕ್ ಅವರಿಗೆ ಕೊಡಬೇಕು. ಅವರಿಗೆ ಹೊಟ್ಟೆಯಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ವಾರಕ್ಕೊಮ್ಮೆ ಅವರಿಗೆ ವೈದ್ಯಕೀಯ ತಪಾಸಣೆ ಮಾಡಿಸಬೇಕು’ ಎಂದು ಕೋರಿ ಅರ್ಜಿ ಸಲ್ಲಿಸಿದ್ದರು. </p>.<p>ರಾಜಸ್ಥಾನ ಸರ್ಕಾರದ ಪರವಾಗಿ ಹಾಜರಾಗಿದ್ದ ವಕೀಲರು, ‘ಕಳೆದ 4 ತಿಂಗಳಲ್ಲಿ 21 ಬಾರಿ ವಾಂಗ್ಚೂಕ್ ಅವರಿಗೆ ಜೈಲಿನಲ್ಲಿ ಕಾರ್ಯನಿರ್ವಹಿಸುವ ವೈದ್ಯರಿಂದ ತಪಾಸಣೆ ನಡೆಸಲಾಗಿದೆ’ ಎಂದು ಪೀಠಕ್ಕೆ ತಿಳಿಸಿದರು. </p>.<p>ವಾಂಗ್ಚೂಕ್ ಅವರಿಗೆ ‘ಗ್ಯಾಸ್ಟ್ರೋ ಎಂಟರಾಲಜಿ’ (ಜಠರ ಕರುಳು ವಿಜ್ಞಾನ ತಜ್ಞ) ತಜ್ಞ ವೈದ್ಯರ ಅಗತ್ಯವಿದೆ ಎಂದು ಪೀಠವು ಅಭಿಪ್ರಾಯಪಟ್ಟಿತು. </p>.<p>ಲಡಾಖ್ಗೆ ರಾಜ್ಯದ ಸ್ಥಾನಮಾನ ನೀಡುವಂತೆ ಆಗ್ರಹಿಸಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ, ಪೊಲೀಸರ ಗುಂಡಿಗೆ ನಾಲ್ವರು ಮೃತಪಟ್ಟಿದ್ದರು. ಹಿಂಸಾಚಾರದಲ್ಲಿ 80ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಘಟನೆಗೆ ಸಂಬಂಧಿಸಿದಂತೆ ವಾಗ್ಚೂಕ್ ಅವರನ್ನು ಬಂಧಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಜೋಧಪುರದ ಕೇಂದ್ರ ಕಾರಾಗೃಹದಲ್ಲಿರುವ ಪರಿಸರ ಹೋರಾಟಗಾರ ಸೊನಮ್ ವಾಂಗ್ಚೂಕ್ ಅವರನ್ನು ತಜ್ಞ ವೈದ್ಯರಿಂದ ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದೆ. </p>.<p>ಮಲಿನಗೊಂಡಿರುವ ನೀರು ಕುಡಿದು ಹೊಟ್ಟೆಯಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ ಎಂದು ವಾಂಗ್ಚೂಕ್ ಅವರು ದೂರು ನೀಡಿದ್ದರು. </p>.<p>ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅರವಿಂದ ಕುಮಾರ್ ಹಾಗೂ ಪಿ.ಬಿ.ವರಾಳೆ ಅವರು, ವಾಂಗ್ಚೂಕ್ ಅವರ ವೈದ್ಯಕೀಯ ತಪಾಸಣೆಯ ವರದಿಯನ್ನು, ಸೋಮವಾರ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ಜೈಲು ಅಧಿಕಾರಿಗಳಿಗೆ ಸೂಚಿಸಿದರು. </p>.<p>ವಾಂಗ್ಚೂಕ್ ಅವರ ಪತ್ನಿ ಗೀತಾಂಜಲಿ ಆಂಗ್ಮೊ ಅವರು, ‘ನಾವು ನೀಡುವ ನೀರನ್ನು ವಾಂಗ್ಚೂಕ್ ಅವರಿಗೆ ಕೊಡಬೇಕು. ಅವರಿಗೆ ಹೊಟ್ಟೆಯಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ವಾರಕ್ಕೊಮ್ಮೆ ಅವರಿಗೆ ವೈದ್ಯಕೀಯ ತಪಾಸಣೆ ಮಾಡಿಸಬೇಕು’ ಎಂದು ಕೋರಿ ಅರ್ಜಿ ಸಲ್ಲಿಸಿದ್ದರು. </p>.<p>ರಾಜಸ್ಥಾನ ಸರ್ಕಾರದ ಪರವಾಗಿ ಹಾಜರಾಗಿದ್ದ ವಕೀಲರು, ‘ಕಳೆದ 4 ತಿಂಗಳಲ್ಲಿ 21 ಬಾರಿ ವಾಂಗ್ಚೂಕ್ ಅವರಿಗೆ ಜೈಲಿನಲ್ಲಿ ಕಾರ್ಯನಿರ್ವಹಿಸುವ ವೈದ್ಯರಿಂದ ತಪಾಸಣೆ ನಡೆಸಲಾಗಿದೆ’ ಎಂದು ಪೀಠಕ್ಕೆ ತಿಳಿಸಿದರು. </p>.<p>ವಾಂಗ್ಚೂಕ್ ಅವರಿಗೆ ‘ಗ್ಯಾಸ್ಟ್ರೋ ಎಂಟರಾಲಜಿ’ (ಜಠರ ಕರುಳು ವಿಜ್ಞಾನ ತಜ್ಞ) ತಜ್ಞ ವೈದ್ಯರ ಅಗತ್ಯವಿದೆ ಎಂದು ಪೀಠವು ಅಭಿಪ್ರಾಯಪಟ್ಟಿತು. </p>.<p>ಲಡಾಖ್ಗೆ ರಾಜ್ಯದ ಸ್ಥಾನಮಾನ ನೀಡುವಂತೆ ಆಗ್ರಹಿಸಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ, ಪೊಲೀಸರ ಗುಂಡಿಗೆ ನಾಲ್ವರು ಮೃತಪಟ್ಟಿದ್ದರು. ಹಿಂಸಾಚಾರದಲ್ಲಿ 80ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಘಟನೆಗೆ ಸಂಬಂಧಿಸಿದಂತೆ ವಾಗ್ಚೂಕ್ ಅವರನ್ನು ಬಂಧಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>