<p><strong>ನವದೆಹಲಿ</strong>: ಸಂಸದ ಕಾರ್ತಿ ಪಿ. ಚಿದಂಬರಂ ಅವರು ವಿದೇಶ ಪ್ರವಾಸಕ್ಕೆ ತೆರಳಲು, ನ್ಯಾಯಾಲಯದ ಸೂಚನೆಯಂತೆ 2022ರಲ್ಲಿ ಇರಿಸಿದ್ದ ₹1 ಕೋಟಿ ಭದ್ರತಾ ಠೇವಣಿ ಮೊತ್ತವನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದೆ. </p>.<p>ಏರ್ಸೆಲ್–ಮ್ಯಾಕ್ಸಿಸ್ ಹಾಗೂ ಐಎನ್ಎಕ್ಸ್ ಮೀಡಿಯಾ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಕಾರ್ತಿ ಅವರು ಆರೋಪಿಯಾಗಿದ್ದಾರೆ. ಈ ಎರಡೂ ಪ್ರಕರಣಗಳಲ್ಲಿ ನ್ಯಾಯಾಲಯ ಅವರಿಗೆ ಜಾಮೀನು ಮಂಜೂರು ಮಾಡಿದೆ. </p>.<p>ಕಾರ್ತಿ ಅವರು ವಿದೇಶಕ್ಕೆ ತೆರಳಲು ಅನುಮತಿ ನೀಡಲು ₹1 ಕೋಟಿ ಮೊತ್ತದ ಭದ್ರತಾ ಠೇವಣಿ ಇಡುವಂತೆ ನ್ಯಾಯಾಲಯ 2022ರಲ್ಲಿ ಷರತ್ತು ವಿಧಿಸಿತ್ತು.</p>.<p>ಅದರಂತೆ ಠೇವಣಿ ಇರಿಸಿ, ಬಳಿಕ ವಿದೇಶ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಕಾರ್ತಿ ಅವರು ನಿಯಮದಂತೆ ತಮ್ಮ ಪಾಸ್ಪೋರ್ಟ್ ಅನ್ನು ತನಿಖಾಧಿಕಾರಿಗಳಿಗೆ ಹಸ್ತಾಂತರಿಸಿದ್ದರು. </p>.<p>ತಮ್ಮ ಠೇವಣಿಯನ್ನು ಹಿಂದಿರುಗಿಸುವಂತೆ 2023ರಲ್ಲಿ ಕಾರ್ತಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ಉಜ್ಜಲ್ ಭುಯಾನ್ ಹಾಗೂ ಎನ್. ಕೋಟೀಶ್ವರ್ ಸಿಂಗ್ ಅವರಿದ್ದ ಪೀಠವು, ಬಡ್ಡಿಸಹಿತ ಸಂಪೂರ್ಣ ಮೊತ್ತವನ್ನು ಹಿಂದಿರುಗಿಸಲು ಆದೇಶಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಸಂಸದ ಕಾರ್ತಿ ಪಿ. ಚಿದಂಬರಂ ಅವರು ವಿದೇಶ ಪ್ರವಾಸಕ್ಕೆ ತೆರಳಲು, ನ್ಯಾಯಾಲಯದ ಸೂಚನೆಯಂತೆ 2022ರಲ್ಲಿ ಇರಿಸಿದ್ದ ₹1 ಕೋಟಿ ಭದ್ರತಾ ಠೇವಣಿ ಮೊತ್ತವನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದೆ. </p>.<p>ಏರ್ಸೆಲ್–ಮ್ಯಾಕ್ಸಿಸ್ ಹಾಗೂ ಐಎನ್ಎಕ್ಸ್ ಮೀಡಿಯಾ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಕಾರ್ತಿ ಅವರು ಆರೋಪಿಯಾಗಿದ್ದಾರೆ. ಈ ಎರಡೂ ಪ್ರಕರಣಗಳಲ್ಲಿ ನ್ಯಾಯಾಲಯ ಅವರಿಗೆ ಜಾಮೀನು ಮಂಜೂರು ಮಾಡಿದೆ. </p>.<p>ಕಾರ್ತಿ ಅವರು ವಿದೇಶಕ್ಕೆ ತೆರಳಲು ಅನುಮತಿ ನೀಡಲು ₹1 ಕೋಟಿ ಮೊತ್ತದ ಭದ್ರತಾ ಠೇವಣಿ ಇಡುವಂತೆ ನ್ಯಾಯಾಲಯ 2022ರಲ್ಲಿ ಷರತ್ತು ವಿಧಿಸಿತ್ತು.</p>.<p>ಅದರಂತೆ ಠೇವಣಿ ಇರಿಸಿ, ಬಳಿಕ ವಿದೇಶ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಕಾರ್ತಿ ಅವರು ನಿಯಮದಂತೆ ತಮ್ಮ ಪಾಸ್ಪೋರ್ಟ್ ಅನ್ನು ತನಿಖಾಧಿಕಾರಿಗಳಿಗೆ ಹಸ್ತಾಂತರಿಸಿದ್ದರು. </p>.<p>ತಮ್ಮ ಠೇವಣಿಯನ್ನು ಹಿಂದಿರುಗಿಸುವಂತೆ 2023ರಲ್ಲಿ ಕಾರ್ತಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ಉಜ್ಜಲ್ ಭುಯಾನ್ ಹಾಗೂ ಎನ್. ಕೋಟೀಶ್ವರ್ ಸಿಂಗ್ ಅವರಿದ್ದ ಪೀಠವು, ಬಡ್ಡಿಸಹಿತ ಸಂಪೂರ್ಣ ಮೊತ್ತವನ್ನು ಹಿಂದಿರುಗಿಸಲು ಆದೇಶಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>