ನವದೆಹಲಿ: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ನಡೆದಿದ್ದ ಇಬ್ಬರು ಹಿಂದೂ ಸಾಧುಗಳು ಸೇರಿದಂತೆ ಮೂವರ ಹತ್ಯೆ ಪ್ರಕರಣದ ವಿಚಾರಣೆ ಇಂದು ಸುಪ್ರೀಂ ಕೋರ್ಟ್ನಲ್ಲಿ ನಡೆಯಲಿದೆ.
ಜೆ. ಅಶೋಕ್ಭೂಷಣ್ ನೇತೃತ್ವದ ಮೂವರು ನ್ಯಾಯಮೂರ್ತಿಗಳ ಪೀಠವು ಈ ಪ್ರಕರಣದ ವಿಚಾರಣೆ ಕೈಗೆತ್ತಿಕೊಳ್ಳಲಿದೆ.
ಏಪ್ರಿಲ್ ಕೊನೆಯ ವಾರದಲ್ಲಿ, ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಇಬ್ಬರು ಸಾಧುಗಳು ಸೇರಿದಂತೆ ಮೂವರನ್ನು ಜನರ ಗುಂಪೊಂದು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿತ್ತು.
Three judge bench of the Supreme Court headed by J. Ashok Bhushan to hear a plea by Hindu Sadhus of Shri Panch Dashnam Juna Akhara and relatives of the two deceased Sadhu in #PalgharLynching case stating that state investigation is biased & needs a #CBI probe #SupremeCourtpic.twitter.com/pAkoRwmu1y
ಈ ಪ್ರಕರಣದ ತನಿಖೆಯನ್ನು ಮಹಾರಾಷ್ಟ್ರ ಸರ್ಕಾರ ಸಿಐಡಿಗೆ ವಹಿಸಿತ್ತು.
ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿಲ್ಲ. ರಾಜ್ಯ ಸರ್ಕಾರದ ತನಿಖಾ ವಿಧಾನಗಳು ಪೂರ್ವಾಗ್ರಹಗಳಿಂದ ಕೂಡಿವೆ. ಈ ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ಸಿಬಿಐಗೆ ವಹಿಸಬೇಕೆಂದು ಹತ್ಯೆಯಾದ ಸಾಧುಗಳ ಸಂಬಂಧಿಕರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.
ನ್ಯಾಯಮೂರ್ತಿಗಳಾದ ಜೆ.ಅಶೋಕ್ಭೂಷಣ್, ಎಂ.ಆರ್.ಶಾ ಮತ್ತು ವಿ.ರಾಮಸುಬ್ರಮಣಿಯನ್ ಅವರನ್ನು ಒಳಗೊಂಡ ನ್ಯಾಯಪೀಠವು ಈ ಬಗ್ಗೆ ವಿಚಾರಣೆಯನ್ನು ನಡೆಸಲಿದೆ.