<p><strong>ನವದೆಹಲಿ</strong>: ದೇಶದಾದ್ಯಂತ ವೈದ್ಯಕೀಯ ಪದವಿ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದಿದ್ದ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯ (ನೀಟ್) ಫಲಿತಾಂಶವನ್ನು ಪ್ರಕಟಿಸಲು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಗೆ (ಎನ್ಟಿಎ) ಸುಪ್ರೀಂ ಕೋರ್ಟ್ ಗುರುವಾರ ಅನುಮತಿ ನೀಡಿದೆ.</p>.<p>‘ನೀಟ್’ ಫಲಿತಾಂಶ ಘೋಷಿಸದಂತೆ ಮತ್ತು ಇಬ್ಬರು ಪರೀಕ್ಷಾರ್ಥಿಗಳಿಗೆ ಮರು ಪರೀಕ್ಷೆ ನಡೆಸುವಂತೆ ಬಾಂಬೆ ಹೈಕೋರ್ಟ್ ಇತ್ತೀಚೆಗೆ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಎಲ್. ನಾಗೇಶ್ವರ ರಾವ್, ಸಂಜೀವ್ ಖನ್ನಾ ಮತ್ತು ಬಿ.ಆರ್.ಗವಾಯಿ ಅವರನ್ನೊಳಗೊಂಡ ಪೀಠವು ತಡೆಯಾಜ್ಞೆ ನೀಡಿತು.</p>.<p>ಇಬ್ಬರು ಪರೀಕ್ಷಾರ್ಥಿಗಳಾದ ವೈಶಾನವಿ ಭೋಪಾಲಿ ಮತ್ತು ಅಭಿಷೇಕ್ ಶಿವಾಜಿ ಅವರ ಪ್ರಶ್ನೆ ಪತ್ರಿಕೆಗಳು ಮತ್ತು ಒಎಂಆರ್ ಪ್ರತಿಗಳು ಪರೀಕ್ಷೆಗೂ ಮುನ್ನಾ ಪರೀಕ್ಷಾ ಕೇಂದ್ರದಲ್ಲಿ ಬೆರೆತು ಹೋಗಿದ್ದವು. ಹೀಗಾಗಿ ಅವರಿಗೆ ಮತ್ತೊಮ್ಮೆ ಅವಕಾಶ ಕೊಡಬೇಕು. ಈ ಇಬ್ಬರ ಪರೀಕ್ಷಾ ಫಲಿತಾಂಶವನ್ನು ಸೆಪ್ಟೆಂಬರ್ 12ರಂದು ನಡೆಸಿದ ಪರೀಕ್ಷೆಯ ಫಲಿತಾಂಶದ ಜತೆಗೇ ಪ್ರಕಟಿಸಬೇಕು ಎಂದು ಹೈಕೋರ್ಟ್ ಆದೇಶಿಸಿತ್ತು.</p>.<p>‘ನಾವು ಹೈಕೋರ್ಟ್ ತೀರ್ಪಿಗೆ ತಡೆ ನೀಡುತ್ತೇವೆ. ಎನ್ಟಿಎ ಫಲಿತಾಂಶವನ್ನು ಪ್ರಕಟಿಸಬಹುದು’ ಎಂದು ಎನ್ಟಿಎ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ನ್ಯಾಯಪೀಠ ಹೇಳಿತು.</p>.<p>‘ದೀಪಾವಳಿ ರಜೆಯ ನಂತರ ಈ ಇಬ್ಬರು ವಿದ್ಯಾರ್ಥಿಗಳ ಬಗ್ಗೆ ತೀರ್ಮಾನಿಸುತ್ತೇವೆ. ಅಷ್ಟರಲ್ಲಿ ಈ ಕುರಿತು ಸಂಬಂಧಿಸಿದವರಿಗೆ ಪ್ರತಿಕ್ರಿಯಿಸಲು ನೋಟಿಸ್ ಜಾರಿ ಮಾಡುತ್ತೇವೆ’ ಎಂದ ಪೀಠವು, ‘ನಾವು 16 ಲಕ್ಷ ವಿದ್ಯಾರ್ಥಿಗಳ ಫಲಿತಾಂಶವನ್ನು ಹಿಡಿದಿಟ್ಟುಕೊಳ್ಳಲು ಸಾಧ್ಯವಿಲ್ಲ’ ಎಂದು ತಿಳಿಸಿತು.</p>.<p>ಸೆಪ್ಟೆಂಬರ್ 12ರಂದು ದೇಶದ 202 ನಗರಗಳ 3,682 ಪರೀಕ್ಷಾ ಕೇಂದ್ರಗಳಲ್ಲಿ ನೀಟ್ ಪರೀಕ್ಷೆ ನಡೆದಿತ್ತು. 16,14,777 ಪರೀಕ್ಷಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೇಶದಾದ್ಯಂತ ವೈದ್ಯಕೀಯ ಪದವಿ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದಿದ್ದ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯ (ನೀಟ್) ಫಲಿತಾಂಶವನ್ನು ಪ್ರಕಟಿಸಲು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಗೆ (ಎನ್ಟಿಎ) ಸುಪ್ರೀಂ ಕೋರ್ಟ್ ಗುರುವಾರ ಅನುಮತಿ ನೀಡಿದೆ.</p>.<p>‘ನೀಟ್’ ಫಲಿತಾಂಶ ಘೋಷಿಸದಂತೆ ಮತ್ತು ಇಬ್ಬರು ಪರೀಕ್ಷಾರ್ಥಿಗಳಿಗೆ ಮರು ಪರೀಕ್ಷೆ ನಡೆಸುವಂತೆ ಬಾಂಬೆ ಹೈಕೋರ್ಟ್ ಇತ್ತೀಚೆಗೆ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಎಲ್. ನಾಗೇಶ್ವರ ರಾವ್, ಸಂಜೀವ್ ಖನ್ನಾ ಮತ್ತು ಬಿ.ಆರ್.ಗವಾಯಿ ಅವರನ್ನೊಳಗೊಂಡ ಪೀಠವು ತಡೆಯಾಜ್ಞೆ ನೀಡಿತು.</p>.<p>ಇಬ್ಬರು ಪರೀಕ್ಷಾರ್ಥಿಗಳಾದ ವೈಶಾನವಿ ಭೋಪಾಲಿ ಮತ್ತು ಅಭಿಷೇಕ್ ಶಿವಾಜಿ ಅವರ ಪ್ರಶ್ನೆ ಪತ್ರಿಕೆಗಳು ಮತ್ತು ಒಎಂಆರ್ ಪ್ರತಿಗಳು ಪರೀಕ್ಷೆಗೂ ಮುನ್ನಾ ಪರೀಕ್ಷಾ ಕೇಂದ್ರದಲ್ಲಿ ಬೆರೆತು ಹೋಗಿದ್ದವು. ಹೀಗಾಗಿ ಅವರಿಗೆ ಮತ್ತೊಮ್ಮೆ ಅವಕಾಶ ಕೊಡಬೇಕು. ಈ ಇಬ್ಬರ ಪರೀಕ್ಷಾ ಫಲಿತಾಂಶವನ್ನು ಸೆಪ್ಟೆಂಬರ್ 12ರಂದು ನಡೆಸಿದ ಪರೀಕ್ಷೆಯ ಫಲಿತಾಂಶದ ಜತೆಗೇ ಪ್ರಕಟಿಸಬೇಕು ಎಂದು ಹೈಕೋರ್ಟ್ ಆದೇಶಿಸಿತ್ತು.</p>.<p>‘ನಾವು ಹೈಕೋರ್ಟ್ ತೀರ್ಪಿಗೆ ತಡೆ ನೀಡುತ್ತೇವೆ. ಎನ್ಟಿಎ ಫಲಿತಾಂಶವನ್ನು ಪ್ರಕಟಿಸಬಹುದು’ ಎಂದು ಎನ್ಟಿಎ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ನ್ಯಾಯಪೀಠ ಹೇಳಿತು.</p>.<p>‘ದೀಪಾವಳಿ ರಜೆಯ ನಂತರ ಈ ಇಬ್ಬರು ವಿದ್ಯಾರ್ಥಿಗಳ ಬಗ್ಗೆ ತೀರ್ಮಾನಿಸುತ್ತೇವೆ. ಅಷ್ಟರಲ್ಲಿ ಈ ಕುರಿತು ಸಂಬಂಧಿಸಿದವರಿಗೆ ಪ್ರತಿಕ್ರಿಯಿಸಲು ನೋಟಿಸ್ ಜಾರಿ ಮಾಡುತ್ತೇವೆ’ ಎಂದ ಪೀಠವು, ‘ನಾವು 16 ಲಕ್ಷ ವಿದ್ಯಾರ್ಥಿಗಳ ಫಲಿತಾಂಶವನ್ನು ಹಿಡಿದಿಟ್ಟುಕೊಳ್ಳಲು ಸಾಧ್ಯವಿಲ್ಲ’ ಎಂದು ತಿಳಿಸಿತು.</p>.<p>ಸೆಪ್ಟೆಂಬರ್ 12ರಂದು ದೇಶದ 202 ನಗರಗಳ 3,682 ಪರೀಕ್ಷಾ ಕೇಂದ್ರಗಳಲ್ಲಿ ನೀಟ್ ಪರೀಕ್ಷೆ ನಡೆದಿತ್ತು. 16,14,777 ಪರೀಕ್ಷಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>