<p><strong>ನವದೆಹಲಿ:</strong> ಕಾವಡ್ ಯಾತ್ರೆಯ ಮಾರ್ಗದಲ್ಲಿನ ಆಹಾರ ಮಳಿಗೆಗಳಿಗೆ ಕ್ಯೂಆರ್ ಕೋಡ್ ಪ್ರದರ್ಶಿಸುವಂತೆ ಉತ್ತರ ಪ್ರದೇಶ ಹಾಗೂ ಉತ್ತರಾಖಂಡ ಸರ್ಕಾರ ಹೊರಡಿಸಿರುವ ಹೊಸ ನಿರ್ದೇಶನದ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ.</p>.<p>ಯಾತ್ರಾ ಮಾರ್ಗದಲ್ಲಿನ ಮಾರಾಟಗಾರರು ತಮ್ಮ ಗುರುತು ಬಹಿರಂಗಪಡಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ 2024ರಲ್ಲಿ ನೀಡಿದ್ದ ತೀರ್ಪಿಗೆ ಈ ನಿರ್ದೇಶನ ವಿರುದ್ಧವಾಗಿದೆ ಎಂದು ಪ್ರೊ. ಅಪೂರ್ವಾನಂದ ಝಾ ಸಲ್ಲಿಸಿರುವ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.</p>.<p>ಢಾಬಾ ಅಥವಾ ರೆಸ್ಟೊರೆಂಟ್ ಹಾಗೂ ಮಳಿಗೆಗಳ ಮುಂಭಾಗ ಅವುಗಳ ಮಾಲೀಕರು ಮತ್ತು ನೌಕರರ ಗುರುತನ್ನು ಬಹಿರಂಗಪಡಿಸಬೇಕು ಎಂಬುದು ಸಂವಿಧಾನದ 14, 15, 17, 19 ಮತ್ತು 21ನೇ ವಿಧಿಯ ಉಲ್ಲಂಘನೆಯಾಗಿದೆ ಎನ್ನಲಾಗಿದೆ.</p>.<p>‘ಗ್ರಾಹಕರಿಗೆ ಮಾಲೀಕರ ವಿವರ ಲಭ್ಯವಿರಬೇಕು. ಅದಕ್ಕಾಗಿಯೇ ಕ್ಯೂಆರ್ ಕೋಡ್ ಪ್ರದರ್ಶಿಸಬೇಕು’ ಎಂದು ಎರಡೂ ಸರ್ಕಾರಗಳು ಹೊರಡಿಸಿರುವ ಆದೇಶವನ್ನು ವರದಿ ಮಾಡಿರುವ ಕೆಲವು ಮಾಧ್ಯಮಗಳ ಪ್ರತಿಯನ್ನು ಅರ್ಜಿಯ ಜೊತೆ ಲಗತ್ತಿಸಲಾಗಿದೆ.</p>.<p>ಎರಡೂ ಸರ್ಕಾರಗಳ ಈ ಕ್ರಮವು ಸುಪ್ರೀಂ ಕೋರ್ಟ್ ತೀರ್ಪಿನ ಉಲ್ಲಂಘನೆ ಹಾಗೂ ಅಸಾಂವಿಧಾನಿಕ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದ್ದು, ಆದೇಶವನ್ನು ಹಿಂಪಡೆಯುವಂತೆ ನಿರ್ದೇಶನ ನೀಡುವಂತೆ ಕೋರಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕಾವಡ್ ಯಾತ್ರೆಯ ಮಾರ್ಗದಲ್ಲಿನ ಆಹಾರ ಮಳಿಗೆಗಳಿಗೆ ಕ್ಯೂಆರ್ ಕೋಡ್ ಪ್ರದರ್ಶಿಸುವಂತೆ ಉತ್ತರ ಪ್ರದೇಶ ಹಾಗೂ ಉತ್ತರಾಖಂಡ ಸರ್ಕಾರ ಹೊರಡಿಸಿರುವ ಹೊಸ ನಿರ್ದೇಶನದ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ.</p>.<p>ಯಾತ್ರಾ ಮಾರ್ಗದಲ್ಲಿನ ಮಾರಾಟಗಾರರು ತಮ್ಮ ಗುರುತು ಬಹಿರಂಗಪಡಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ 2024ರಲ್ಲಿ ನೀಡಿದ್ದ ತೀರ್ಪಿಗೆ ಈ ನಿರ್ದೇಶನ ವಿರುದ್ಧವಾಗಿದೆ ಎಂದು ಪ್ರೊ. ಅಪೂರ್ವಾನಂದ ಝಾ ಸಲ್ಲಿಸಿರುವ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.</p>.<p>ಢಾಬಾ ಅಥವಾ ರೆಸ್ಟೊರೆಂಟ್ ಹಾಗೂ ಮಳಿಗೆಗಳ ಮುಂಭಾಗ ಅವುಗಳ ಮಾಲೀಕರು ಮತ್ತು ನೌಕರರ ಗುರುತನ್ನು ಬಹಿರಂಗಪಡಿಸಬೇಕು ಎಂಬುದು ಸಂವಿಧಾನದ 14, 15, 17, 19 ಮತ್ತು 21ನೇ ವಿಧಿಯ ಉಲ್ಲಂಘನೆಯಾಗಿದೆ ಎನ್ನಲಾಗಿದೆ.</p>.<p>‘ಗ್ರಾಹಕರಿಗೆ ಮಾಲೀಕರ ವಿವರ ಲಭ್ಯವಿರಬೇಕು. ಅದಕ್ಕಾಗಿಯೇ ಕ್ಯೂಆರ್ ಕೋಡ್ ಪ್ರದರ್ಶಿಸಬೇಕು’ ಎಂದು ಎರಡೂ ಸರ್ಕಾರಗಳು ಹೊರಡಿಸಿರುವ ಆದೇಶವನ್ನು ವರದಿ ಮಾಡಿರುವ ಕೆಲವು ಮಾಧ್ಯಮಗಳ ಪ್ರತಿಯನ್ನು ಅರ್ಜಿಯ ಜೊತೆ ಲಗತ್ತಿಸಲಾಗಿದೆ.</p>.<p>ಎರಡೂ ಸರ್ಕಾರಗಳ ಈ ಕ್ರಮವು ಸುಪ್ರೀಂ ಕೋರ್ಟ್ ತೀರ್ಪಿನ ಉಲ್ಲಂಘನೆ ಹಾಗೂ ಅಸಾಂವಿಧಾನಿಕ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದ್ದು, ಆದೇಶವನ್ನು ಹಿಂಪಡೆಯುವಂತೆ ನಿರ್ದೇಶನ ನೀಡುವಂತೆ ಕೋರಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>