<p><strong>ನವದೆಹಲಿ</strong>: ತನಿಖೆ ಪ್ರಗತಿಯಲ್ಲಿರುವ ಪ್ರಕರಣಗಳ ಕುರಿತು ಪೊಲೀಸರು ಮಾಧ್ಯಮಗಳಿಗೆ ಮಾಹಿತಿ ನೀಡುವ ವೇಳೆ ಅನುಸರಿಸಬೇಕಾದ ನಿಯಮಗಳಿಗೆ ಸಂಬಂಧಿಸಿ ನೀತಿಯೊಂದನ್ನು ರೂಪಿಸುವಂತೆ ಎಲ್ಲ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.</p>.<p>ಈ ವಿಚಾರಕ್ಕೆ ಸಂಬಂಧಿಸಿ ಅಮಿಕಸ್ ಕ್ಯೂರಿ(ನ್ಯಾಯಾಲಯಕ್ಕೆ ಸಹಕಾರ ನೀಡುವುದಕ್ಕಾಗಿ ನೇಮಕವಾದ ವಕೀಲ) ಸಿದ್ಧಪಡಿಸಿರುವ ಕೈಪಿಡಿಯನ್ನು ಪರಿಗಣಿಸಿದ ಬಳಿಕ ಸುಪ್ರೀಂ ಕೋರ್ಟ್ ಈ ಸೂಚನೆ ನೀಡಿದೆ.</p>.<p>ಈ ವಿಷಯ ಕುರಿತು ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಎಂ.ಎಂ.ಸುಂದರೇಶ್ ಹಾಗೂ ಎನ್.ಕೋಟೀಶ್ವರ ಸಿಂಗ್ ಅವರು ಇದ್ದ ನ್ಯಾಯಪೀಠ ನಡೆಸಿತು.</p>.<p>‘ಅಮಿಕಸ್ ಕ್ಯೂರಿ ಗೋಪಾಲ ಶಂಕರನಾರಾಯಣನ್ ಅವರು ಬಹಳ ಶ್ರಮಪಟ್ಟಿದ್ದಾರೆ. ಕೇಂದ್ರ ಸರ್ಕಾರದ ಸಲಹೆಗಳು ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ರೂಢಿಯಲ್ಲಿರುವ ವಿಧಾನಗಳನ್ನು ಅವಲೋಕಿಸಿದ ಬಳಿಕ ಅವರು ಈ ಕೈಪಿಡಿಯನ್ನು ಸಿದ್ಧಪಡಿಸಿದ್ದಾರೆ’ ಎಂದು ಜನವರಿ 15ರಂದು ಹೊರಡಿಸಿರುವ ಆದೇಶದಲ್ಲಿ ನ್ಯಾಯಪೀಠ ಹೇಳಿದೆ.</p>.<p>ಅಪರಾಧ ಪ್ರಕರಣಗಳ ಕುರಿತು ಪೊಲೀಸ್ ಅಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡುವುದಕ್ಕೆ ಸಂಬಂಧಿಸಿ ಸಮಗ್ರ ಕೈಪಡಿ ಸಿದ್ಧಪಡಿಸುವಂತೆ ಗೃಹ ಇಲಾಖೆಗೆ ಸುಪ್ರೀಂ ಕೋರ್ಟ್ 2023ರಲ್ಲಿ ನಿರ್ದೇಶನ ನೀಡಿತ್ತು.</p>.<p>‘ಮಾಧ್ಯಮಗಳು ಪಕ್ಷಪಾತದಿಂದ ಕೂಡಿದ ವರದಿ ಪ್ರಕಟಿಸುವುದರಿಂದ, ವ್ಯಕ್ತಿಯೊಬ್ಬ ಅಪರಾಧ ಎಸಗಿದ್ದಾನೆ ಎಂಬ ಶಂಕೆ ಸಾರ್ವಜನಿಕರಲ್ಲಿ ಮೂಡುತ್ತದೆ. ಮಾಧ್ಯಮಗಳು ಪ್ರಕಟಿಸುವ ವರದಿಗಳಿಂದ ಸಂತ್ರಸ್ತ ವ್ಯಕ್ತಿಯ ಖಾಸಗಿತನದ ಉಲ್ಲಂಘನೆಯೂ ಆಗುತ್ತದೆ’ ಎಂದು ಸುಪ್ರೀಂ ಕೋರ್ಟ್ ಆಗ ಅಭಿಪ್ರಾಯಪಟ್ಟಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ತನಿಖೆ ಪ್ರಗತಿಯಲ್ಲಿರುವ ಪ್ರಕರಣಗಳ ಕುರಿತು ಪೊಲೀಸರು ಮಾಧ್ಯಮಗಳಿಗೆ ಮಾಹಿತಿ ನೀಡುವ ವೇಳೆ ಅನುಸರಿಸಬೇಕಾದ ನಿಯಮಗಳಿಗೆ ಸಂಬಂಧಿಸಿ ನೀತಿಯೊಂದನ್ನು ರೂಪಿಸುವಂತೆ ಎಲ್ಲ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.</p>.<p>ಈ ವಿಚಾರಕ್ಕೆ ಸಂಬಂಧಿಸಿ ಅಮಿಕಸ್ ಕ್ಯೂರಿ(ನ್ಯಾಯಾಲಯಕ್ಕೆ ಸಹಕಾರ ನೀಡುವುದಕ್ಕಾಗಿ ನೇಮಕವಾದ ವಕೀಲ) ಸಿದ್ಧಪಡಿಸಿರುವ ಕೈಪಿಡಿಯನ್ನು ಪರಿಗಣಿಸಿದ ಬಳಿಕ ಸುಪ್ರೀಂ ಕೋರ್ಟ್ ಈ ಸೂಚನೆ ನೀಡಿದೆ.</p>.<p>ಈ ವಿಷಯ ಕುರಿತು ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಎಂ.ಎಂ.ಸುಂದರೇಶ್ ಹಾಗೂ ಎನ್.ಕೋಟೀಶ್ವರ ಸಿಂಗ್ ಅವರು ಇದ್ದ ನ್ಯಾಯಪೀಠ ನಡೆಸಿತು.</p>.<p>‘ಅಮಿಕಸ್ ಕ್ಯೂರಿ ಗೋಪಾಲ ಶಂಕರನಾರಾಯಣನ್ ಅವರು ಬಹಳ ಶ್ರಮಪಟ್ಟಿದ್ದಾರೆ. ಕೇಂದ್ರ ಸರ್ಕಾರದ ಸಲಹೆಗಳು ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ರೂಢಿಯಲ್ಲಿರುವ ವಿಧಾನಗಳನ್ನು ಅವಲೋಕಿಸಿದ ಬಳಿಕ ಅವರು ಈ ಕೈಪಿಡಿಯನ್ನು ಸಿದ್ಧಪಡಿಸಿದ್ದಾರೆ’ ಎಂದು ಜನವರಿ 15ರಂದು ಹೊರಡಿಸಿರುವ ಆದೇಶದಲ್ಲಿ ನ್ಯಾಯಪೀಠ ಹೇಳಿದೆ.</p>.<p>ಅಪರಾಧ ಪ್ರಕರಣಗಳ ಕುರಿತು ಪೊಲೀಸ್ ಅಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡುವುದಕ್ಕೆ ಸಂಬಂಧಿಸಿ ಸಮಗ್ರ ಕೈಪಡಿ ಸಿದ್ಧಪಡಿಸುವಂತೆ ಗೃಹ ಇಲಾಖೆಗೆ ಸುಪ್ರೀಂ ಕೋರ್ಟ್ 2023ರಲ್ಲಿ ನಿರ್ದೇಶನ ನೀಡಿತ್ತು.</p>.<p>‘ಮಾಧ್ಯಮಗಳು ಪಕ್ಷಪಾತದಿಂದ ಕೂಡಿದ ವರದಿ ಪ್ರಕಟಿಸುವುದರಿಂದ, ವ್ಯಕ್ತಿಯೊಬ್ಬ ಅಪರಾಧ ಎಸಗಿದ್ದಾನೆ ಎಂಬ ಶಂಕೆ ಸಾರ್ವಜನಿಕರಲ್ಲಿ ಮೂಡುತ್ತದೆ. ಮಾಧ್ಯಮಗಳು ಪ್ರಕಟಿಸುವ ವರದಿಗಳಿಂದ ಸಂತ್ರಸ್ತ ವ್ಯಕ್ತಿಯ ಖಾಸಗಿತನದ ಉಲ್ಲಂಘನೆಯೂ ಆಗುತ್ತದೆ’ ಎಂದು ಸುಪ್ರೀಂ ಕೋರ್ಟ್ ಆಗ ಅಭಿಪ್ರಾಯಪಟ್ಟಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>