<p><strong>ನವದೆಹಲಿ:</strong> ಈ ವರ್ಷದ ಆರಂಭದಲ್ಲಿ ಬಾಂಗ್ಲಾದೇಶಕ್ಕೆ ಗಡಿಪಾರು ಮಾಡಲಾದ ಗರ್ಭಿಣಿ ಹಾಗೂ ಆಕೆಯ ಮಗುವಿಗೆ ಮಾನವೀಯತೆ ಆಧಾರದಲ್ಲಿ ಭಾರತ ಪ್ರವೇಶಿಸಲು ಅವಕಾಶ ಮಾಡಿಕೊಡುವುದನ್ನು ಪರಿಗಣಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಹೇಳಿದೆ. </p>.<p>ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಅವರಿದ್ದ ಪೀಠವು, ಪಶ್ಚಿಮ ಬಂಗಾಳದ ಮಾಲ್ದಾದಲ್ಲಿರುವ ಭಾರತ– ಬಾಂಗ್ಲಾದೇಶ ಗಡಿ ಮೂಲಕ ಪ್ರವೇಶಿಸಲು ಮಹಿಳೆಗೆ ಅವಕಾಶ ನೀಡುವ ಬಗ್ಗೆ ಸೂಚನೆ ನೀಡುವಂತೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರನ್ನು ಕೇಳಿತು. </p>.<p>‘ನ್ಯಾಯಾಲಯವು ಪ್ರಕರಣವನ್ನು ಮಾನವೀಯ ಆಧಾರದಲ್ಲಿ ಪರಿಗಣಿಸಲು ಕೇಳುತ್ತಿದೆ. ಈ ವಿಷಯದ ಬಗ್ಗೆ ನಮಗೆ ಎರಡು ದಿನ ಕಾಲಾವಕಾಶ ನೀಡಿ. ಈ ಕುರಿತು ಪರಿಶೀಲಿಸುತ್ತೇವೆ’ ಎಂದು ತುಷಾರ್ ಮೆಹ್ತಾ ಹೇಳಿದರು. </p>.<p>ಬಾಂಗ್ಲಾದೇಶದ ಹಲವು ಅಕ್ರಮ ವಲಸಿಗರನ್ನು ಭಾರತವು ಗಡಿಪಾರು ಮಾಡಿದೆ. ಇದನ್ನು ಪ್ರಶ್ನಿಸಿ ಗರ್ಭಿಣಿಯ ತಂದೆ ಕಲ್ಕತ್ತ ಹೈಕೋರ್ಟ್ ಮೊರೆ ಹೋಗಿದ್ದರು. ಗಡೀಪಾರು ಮಾಡಲಾದ 6 ಮಂದಿಯನ್ನು ಒಂದು ತಿಂಗಳೊಳಗಾಗಿ ಭಾರತಕ್ಕೆ ಮರಳಿ ಕರೆಸುವಂತೆ ಹೈಕೋರ್ಟ್ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ಕೇಂದ್ರವು ಸುಪ್ರೀಂ ಮೊರೆ ಹೋಗಿದೆ. </p>.<p>ಪ್ರಕರಣದ ಮುಂದಿನ ವಿಚಾರಣೆಯನ್ನು ಡಿ.3ಕ್ಕೆ ಮುಂದೂಡಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಈ ವರ್ಷದ ಆರಂಭದಲ್ಲಿ ಬಾಂಗ್ಲಾದೇಶಕ್ಕೆ ಗಡಿಪಾರು ಮಾಡಲಾದ ಗರ್ಭಿಣಿ ಹಾಗೂ ಆಕೆಯ ಮಗುವಿಗೆ ಮಾನವೀಯತೆ ಆಧಾರದಲ್ಲಿ ಭಾರತ ಪ್ರವೇಶಿಸಲು ಅವಕಾಶ ಮಾಡಿಕೊಡುವುದನ್ನು ಪರಿಗಣಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಹೇಳಿದೆ. </p>.<p>ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಅವರಿದ್ದ ಪೀಠವು, ಪಶ್ಚಿಮ ಬಂಗಾಳದ ಮಾಲ್ದಾದಲ್ಲಿರುವ ಭಾರತ– ಬಾಂಗ್ಲಾದೇಶ ಗಡಿ ಮೂಲಕ ಪ್ರವೇಶಿಸಲು ಮಹಿಳೆಗೆ ಅವಕಾಶ ನೀಡುವ ಬಗ್ಗೆ ಸೂಚನೆ ನೀಡುವಂತೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರನ್ನು ಕೇಳಿತು. </p>.<p>‘ನ್ಯಾಯಾಲಯವು ಪ್ರಕರಣವನ್ನು ಮಾನವೀಯ ಆಧಾರದಲ್ಲಿ ಪರಿಗಣಿಸಲು ಕೇಳುತ್ತಿದೆ. ಈ ವಿಷಯದ ಬಗ್ಗೆ ನಮಗೆ ಎರಡು ದಿನ ಕಾಲಾವಕಾಶ ನೀಡಿ. ಈ ಕುರಿತು ಪರಿಶೀಲಿಸುತ್ತೇವೆ’ ಎಂದು ತುಷಾರ್ ಮೆಹ್ತಾ ಹೇಳಿದರು. </p>.<p>ಬಾಂಗ್ಲಾದೇಶದ ಹಲವು ಅಕ್ರಮ ವಲಸಿಗರನ್ನು ಭಾರತವು ಗಡಿಪಾರು ಮಾಡಿದೆ. ಇದನ್ನು ಪ್ರಶ್ನಿಸಿ ಗರ್ಭಿಣಿಯ ತಂದೆ ಕಲ್ಕತ್ತ ಹೈಕೋರ್ಟ್ ಮೊರೆ ಹೋಗಿದ್ದರು. ಗಡೀಪಾರು ಮಾಡಲಾದ 6 ಮಂದಿಯನ್ನು ಒಂದು ತಿಂಗಳೊಳಗಾಗಿ ಭಾರತಕ್ಕೆ ಮರಳಿ ಕರೆಸುವಂತೆ ಹೈಕೋರ್ಟ್ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ಕೇಂದ್ರವು ಸುಪ್ರೀಂ ಮೊರೆ ಹೋಗಿದೆ. </p>.<p>ಪ್ರಕರಣದ ಮುಂದಿನ ವಿಚಾರಣೆಯನ್ನು ಡಿ.3ಕ್ಕೆ ಮುಂದೂಡಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>