<p><strong>ನವದೆಹಲಿ</strong>: ರಾಜ್ಯಗಳ ವಿಧಾನಸಭೆಗಳು ಅಂಗೀಕರಿಸಿದ ಮಸೂದೆಗಳಿಗೆ ಅಂಕಿತ ಹಾಕಲು ಕಾಲಮಿತಿ ನಿಗದಿಪಡಿಸುವುದಕ್ಕೆ ಸಂಬಂಧಿಸಿದಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸ್ಪಷ್ಟನೆ ಕೇಳಿರುವುದರಲ್ಲಿ ತಪ್ಪೇನಿದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪ್ರಶ್ನಿಸಿತು.</p>.<p>ತಮಿಳುನಾಡು ಮತ್ತು ಕೇರಳ ಸರ್ಕಾರಗಳ ಪರ ವಕೀಲರು ರಾಷ್ಟ್ರಪತಿಯವರು ಸ್ಪಷ್ಟನೆ ಕೋರಿರುವುದನ್ನು ವಿರೋಧಿಸಿದ್ದು, ಅದು ವಿಚಾರಣೆಗೆ ಯೋಗ್ಯವೇ ಎಂದು ಪ್ರಶ್ನಿಸಿದರು. ಬಳಿಕ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ನೇತೃತ್ವದ ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ನ್ಯಾಯಪೀಠವು, ‘ರಾಷ್ಟ್ರಪತಿ ಸ್ಪಷ್ಟನೆ ಕೇಳಿರುವುದರಲ್ಲಿ ತಪ್ಪೇನಿದೆ? ಈ ವಿಚಾರದ ಪ್ರತಿವಾದವನ್ನು ನಿಜಕ್ಕೂ ನೀವು ಗಂಭೀರವಾಗಿ ಪರಿಗಣಿಸಿದ್ದೀರಾ?’ಎಂದು ಕೇಳಿತು.</p>.<p>ಸಂವಿಧಾನದ 143(1)ನೇ ವಿಧಿಯಡಿ ದತ್ತವಾದ ಅಧಿಕಾರವನ್ನು ಬಳಸಿಕೊಂಡು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುಪ್ರೀಂ ಕೋರ್ಟ್ನಿಂದ ಸ್ಪಷ್ಟನೆ ಕೇಳಿದ್ದಾರೆ.</p>.<p>ಕಾಲಮಿತಿಯೊಳಗೆ ಅಂಕಿತ ಹಾಕಬೇಕು ಎಂದು ಹೇಳುವುದರಿಂದ ಸರ್ಕಾರದ ಒಂದು ಅಂಗವೇ ಹೆಚ್ಚಿನ ಅಧಿಕಾರ ಹೊಂದಿದಂತಾಗಲಿದೆ. ಇದರಿಂದ ‘ಸಾಂವಿಧಾನಿಕ ವ್ಯವಸ್ಥೆಗೆ ಧಕ್ಕೆ’ ಉಂಟಾಗಲಿದೆ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ನಲ್ಲಿ ಅಭಿಪ್ರಾಯ ದಾಖಲಿಸಿದೆ. </p>.<p>‘ಈ ವಿಷಯದಲ್ಲಿ ನಮ್ಮ ವ್ಯಾಪ್ತಿಯು ಸಲಹೆ ನೀಡುವುದಕ್ಕಷ್ಟೆ ಸೀಮಿತವಾಗಿದೆ’ ಎಂದೂ ಪೀಠವು ತಿಳಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ರಾಜ್ಯಗಳ ವಿಧಾನಸಭೆಗಳು ಅಂಗೀಕರಿಸಿದ ಮಸೂದೆಗಳಿಗೆ ಅಂಕಿತ ಹಾಕಲು ಕಾಲಮಿತಿ ನಿಗದಿಪಡಿಸುವುದಕ್ಕೆ ಸಂಬಂಧಿಸಿದಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸ್ಪಷ್ಟನೆ ಕೇಳಿರುವುದರಲ್ಲಿ ತಪ್ಪೇನಿದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪ್ರಶ್ನಿಸಿತು.</p>.<p>ತಮಿಳುನಾಡು ಮತ್ತು ಕೇರಳ ಸರ್ಕಾರಗಳ ಪರ ವಕೀಲರು ರಾಷ್ಟ್ರಪತಿಯವರು ಸ್ಪಷ್ಟನೆ ಕೋರಿರುವುದನ್ನು ವಿರೋಧಿಸಿದ್ದು, ಅದು ವಿಚಾರಣೆಗೆ ಯೋಗ್ಯವೇ ಎಂದು ಪ್ರಶ್ನಿಸಿದರು. ಬಳಿಕ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ನೇತೃತ್ವದ ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ನ್ಯಾಯಪೀಠವು, ‘ರಾಷ್ಟ್ರಪತಿ ಸ್ಪಷ್ಟನೆ ಕೇಳಿರುವುದರಲ್ಲಿ ತಪ್ಪೇನಿದೆ? ಈ ವಿಚಾರದ ಪ್ರತಿವಾದವನ್ನು ನಿಜಕ್ಕೂ ನೀವು ಗಂಭೀರವಾಗಿ ಪರಿಗಣಿಸಿದ್ದೀರಾ?’ಎಂದು ಕೇಳಿತು.</p>.<p>ಸಂವಿಧಾನದ 143(1)ನೇ ವಿಧಿಯಡಿ ದತ್ತವಾದ ಅಧಿಕಾರವನ್ನು ಬಳಸಿಕೊಂಡು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುಪ್ರೀಂ ಕೋರ್ಟ್ನಿಂದ ಸ್ಪಷ್ಟನೆ ಕೇಳಿದ್ದಾರೆ.</p>.<p>ಕಾಲಮಿತಿಯೊಳಗೆ ಅಂಕಿತ ಹಾಕಬೇಕು ಎಂದು ಹೇಳುವುದರಿಂದ ಸರ್ಕಾರದ ಒಂದು ಅಂಗವೇ ಹೆಚ್ಚಿನ ಅಧಿಕಾರ ಹೊಂದಿದಂತಾಗಲಿದೆ. ಇದರಿಂದ ‘ಸಾಂವಿಧಾನಿಕ ವ್ಯವಸ್ಥೆಗೆ ಧಕ್ಕೆ’ ಉಂಟಾಗಲಿದೆ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ನಲ್ಲಿ ಅಭಿಪ್ರಾಯ ದಾಖಲಿಸಿದೆ. </p>.<p>‘ಈ ವಿಷಯದಲ್ಲಿ ನಮ್ಮ ವ್ಯಾಪ್ತಿಯು ಸಲಹೆ ನೀಡುವುದಕ್ಕಷ್ಟೆ ಸೀಮಿತವಾಗಿದೆ’ ಎಂದೂ ಪೀಠವು ತಿಳಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>